ಮ್ಯಾಂಗೋ ಪಿಕ್ಕಿಂಗ್‌ ಟೂರಿಸಂ ಯಶಸ್ವಿ

ತೋಟಗಾರಿಕೆ ಇಲಾಖೆ‌ ಆಯೋಜನೆ

Team Udayavani, May 20, 2019, 3:37 PM IST

ramanagar-tdy-4

ರಾಮನಗರ: ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ಮ್ಯಾಂಗೋ ಪಿಕ್ಕಿಂಗ್‌ ಟೂರಿಸಿಂಗೆ ಬೆಳೆಗಾರರು ಹಾಗೂ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಕಾರ್ಯಕ್ರಮ ಯಶಸ್ವಿಯಗಿದೆ. ತಾಲೂಕಿನ ಬಿಳಗುಂಬದ ವಾಸು ಎಂಬುವರ ತೋಟ ಮತ್ತು ಚನ್ನಪಟ್ಟಣದ ಕನ್ನಮಂಗಲದಲ್ಲಿ ಕಮ ಲಮ್ಮ ಅವರ ತೋಟದಲ್ಲಿ ಮ್ಯಾಂಗೊ ಪಿಕ್ಕಿಂಗ್‌ ಟೂರಿಸಂ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ನಗರದಿಂದ ತಲಾ ಒಂದು ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಗ್ರಾಹಕರು ತೋಟಗಳಿಗೆ ಭೇಟಿ ಕೊಟ್ಟಿದ್ದರು. ಪುಟ್ಟ ಮಕ್ಕಳು, ಕುಟುಂಬ ಸಮೇತ ಬಂದಿದ್ದ ರಾಜಧಾನಿಯ ನಿವಾಸಿಗಳು ಖುದ್ದುತಮಗಿಷ್ಟವಾದ ಹಣ್ಣುಗಳನ್ನು ಆಯ್ದು ಕೊಂಡರು. ಮಾವಿನ ತೋಟದ ಅನುಭವ ಪಡೆದುಕೊಂಡರು.

ಬೆರಗು ಕಂಗಳಿಂದ ವೀಕ್ಷಿಸಿದ ಪ್ರವಾಸಿಗರು: ನಗರದ ಬಿಳಗುಂಬ ಗ್ರಾಮದಲ್ಲಿ ಪ್ರಗತಿ ಪರ ರೈತ ವಾಸು ಅವರ ತೋಟಕ್ಕೆ ಆಗಮಿಸಿದ್ದ ಪ್ರವಾಸಿಗರು, ಅಲ್ಲಿದ್ದ ನೂರಾರು ಮಾವಿನ ಮರಗಳನ್ನು ಕಂಡು ಬೆರಗಾದರು. ಬದಾಮಿ,ಸೇಂದೂರಾ, ಆಲ್ಫಾನ್ಸ್‌, ಅಮರಪಲ್ಲಿ ಮುಂತಾಗಿ 18 ವಿವಿಧ ತಳಿಗಳ ಮಾವಿನ ಹಣ್ಣುಗಳು ಕಂಡ ವಿಸ್ಮಿತರಾದರು. ಕಾಯಿ ಮಾಗಿಸುವ ವಿಧಾನದ ಬಗ್ಗೆ ಅರಿವು ಮೂಡಿಸಿಕೊಂಡರು. ಅನೇಕ ಮಕ್ಕಳು ಮಾವಿನ ಮರವನ್ನು ಚಿತ್ರದಲ್ಲಿ ಮಾತ್ರ ನೋಡಿದ್ದಾಗಿ ತಿಳಿಸಿದರು. ರೈತ ವಾಸು ಪ್ರವಾಸಿಗರಿಗೆ ಖುದ್ದು ತಮ್ಮ ತೋಟವನ್ನು ಪರಿಚಯಿಸಿದರು. ಈಥೈಲೀನ್‌ ಬಳಸಿ ಹಣ್ಣು ಮಾಗಿಸುವ ವಿಧಾನದ ಪ್ರಾತ್ಯಕ್ಷಿಕೆ ತೋರಿಸಿಕೊಟ್ಟರು.

ತೋಟದಲ್ಲೆಲ್ಲ ಅಡ್ಡಾಡಿದ ಪ್ರವಾಸಿಗರಿಗೆ ದಿನ ಕಳೆದಿದ್ದೇ ಗೊತ್ತಾಗಲಿಲ್ಲ. ತಮಗಿಷ್ಟವಾದ ತಳಿಯ ಮಾವಿನ ಹಣ್ಣಿನ ರುಚಿಯನ್ನು ಸವಿದ ಪ್ರವಾಸಿಗರು ಕೇಜಿಗಟ್ಟಲೆಹಣ್ಣನ್ನು ಖರೀದಿಸಿದರು. ನೋಡಿ ಹೋಗಣ ಅಂತ ಬಂದ್ವಿ, ರುಚಿಕರ ಮಾವಿಗೆ ಮಾರು ಹೋಗಿ ಅಂದುಕೊಂಡಿದ್ದಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಹಣ್ಣು ಖರೀದಿಸಿದ್ದಾಗಿ ಕೆಲವರು ಪ್ರತಿಕ್ರಿಯಿಸಿದರು. ಜಿಪಂ ಸಿಇಒ ಮುಲ್ಲೆ„ ಮುಹಿಲನ್‌, ತೋಟಗಾರಿಕೆ ಉಪನಿರ್ದೇಶಕ ಗುಣವಂತ್‌, ಸಹಾಯಕ ತೋಟಗಾರಿಕೆ ಅಧಿಕಾರಿ ಸಿದ್ದಗಂಗಯ್ಯ, ಪ್ರವಾಸಿಗರನ್ನು ಬರ ಮಾಡಿಕೊಂಡರು. ಗ್ರಾಹಕರು, ರೈತರ ನಡುವೆ ನೇರ ಸಂಬಂದ ಬೆಸೆಯುವ ಉದ್ದೇಶ, ರಾಸಾಯನಿಕ ಮುಕ್ತ ತಾಜಾ ಹಣ್ಣುಗಳನ್ನು ಖರೀದಿಸಲು ಅವಕಾಶ ಕಲ್ಪಿಸುವುದು ಮ್ಯಾಂಗೋ ಪಿಕ್ಕಿಂಗ್‌ ಟೂರಿಸಂ ಉದ್ದೇಶ ಎಂದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.