![modi (4)](https://www.udayavani.com/wp-content/uploads/2024/07/modi-4-4-415x256.jpg)
ಪ್ರತ್ಯೇಕ ಪ್ರಕರಣ: 88 ಕೆ.ಜಿ.ಗಾಂಜಾ ವಶ
Team Udayavani, Sep 18, 2020, 1:17 PM IST
![br-tdy-1](https://www.udayavani.com/wp-content/uploads/2020/09/br-tdy-1-12-620x372.jpg)
ರಾಮ ನಗರ: ಅಕ್ರಮ ಗಾಂಜಾ ಮಾರಾಟ, ದಾಸ್ತಾನು, ಸಾಗಾಟದಲ್ಲಿ ತೊಡಗಿರುವವರ ವಿರುದ್ದ ಸಮರ ಸಾರಿರುವ ಜಿಲ್ಲಾ ಪೊಲೀಸರು 3 ಪ್ರಕರಣಗಳಲ್ಲಿ 88.600 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ರಾಮನಗರದಲ್ಲಿ 21 ಕೆ.ಜಿ. ಗಾಂಜಾ ಜಪ್ತಿ: ನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು, ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ 21.100 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ ಸಿಪಿಐ ನರಸಿಂಹಮೂರ್ತಿ ಅವರಿಗೆ ಬಂದ ಮಾಹಿತಿ ಮೇರೆಗೆ, ದಾಳಿ ನಡೆಸಿದ ಪೊಲೀಸರು, ಜಿಲ್ಲಾ ಕ್ರೀಡಾಂಗಣದ ಪಕ್ಕ ಹಾಜಿ ನಗರಕ್ಕೆ ಹೋಗುವ ರಸ್ತೆಯ ಬಳಿ ಆರೋಪಿಯನ್ನು ತಡೆದಿದ್ದಾರೆ. 2ಚೀಲಗಳಲ್ಲಿ ತುಂಬಿದ್ದ 21.100 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದು ಆತನ ವಿರುದ್ಧ ಕೇಸು ದಾಖಲಿಸಿದ್ದಾರೆ. ಎಸ್ಪಿ ಎಸ್.ಗಿರೀಶ್ ಅವರ ನಿರ್ದೇಶನ, ಡಿವೈಎಸ್ಪಿ ಪುರುಷೋತ್ತಮ ಅವರ ನೇತೃತ್ವದಲ್ಲಿ ಸಿಪಿಐ ನರಸಿಂಹಮೂರ್ತಿ, ನಗರ ಠಾಣೆ ಪಿಎಸ್ಐ ಎಂ.ಹೇಮಂತ್ ಕುಮಾರ್, ಐಜೂರು ಠಾಣೆ ಪಿಎಸ್ಐ ಶುಭಾಂಬಿಕ, ಸಿಬ್ಬಂದಿಗಳಾದ ಗೌರೀಶ್, ನಾಗರಾಜಯ್ಯ, ಹನುಮಂತೇಗೌಡ, ಚನ್ನಬಸಪ್ಪ, ಹನುಮಂತ, ಸಂತೋಷ್ ಕಾರ್ಯಾಚರಣೆಯಲ್ಲಿದ್ದರು.
ತಾವರೆಕೆರೆ ಪೊಲೀಸರಿಂದ 60 ಕೆ.ಜಿ. ವಶಕ್ಕೆ: ಜಿಲ್ಲೆಯ ಮಾಗಡಿ ತಾಲೂಕಿನ ಕಸಬಾ ಹೋಬಳಿ ಮಾಗಡಿ – ಬೆಂಗಳೂರು ಮುಖ್ಯ ರಸ್ತೆ ಪಕ್ಕದ ಬಂಟಕುಪ್ಪೆಗೆ ಹೋಗುವ ರಸ್ತೆಯಲ್ಲಿ ತಗಚಗುಪ್ಪೆ ಮತ್ತು ಪೂಜಾರಹಟ್ಟಿ ಕಾಲೋನಿ ಬಳಿ ಅಕ್ರಮವಾಗಿ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ತಾವರೆಕರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ 60 ಕೆ.ಜಿ.ಗಾಂಜಾ, ಇನ್ನೋವಾ ಕಾರು, ಬೈಕ್, 3 ಸಾವಿರ ನಗದು, 3 ಮೊಬೈಲ್ ವಶ ಪಡಿಸಿಕೊಂಡಿದ್ದಾರೆ. ಬೆಂಗಳೂರು ಉಲ್ಲಾಳನಗರದ ನಿವಾಸಿ ಕುಪ್ಪ, ಆಂಧ್ರ ಪ್ರದೇಶ ವಿಶಾಖಪಟ್ಟಣ ಕೋಡಿತಲ ಗ್ರಾಮದ ನಿವಾಸಿ ಪಾಂಗಿಪ್ರಸಾದ್, ಬೆಂಗಳೂರು ಮಂಜುನಾಥ ನಗರದ ಶಿವರಾಜ, ತಾವರೆಕೆರೆ ಹೋಬಳಿ ಹೊಸ ಪಾಳ್ಯದ ಶಂಕರ, ದೊಡ್ಡಾಲಮರ ಗ್ರಾಮದ ಮಂಜುನಾಥ, ಇದೇ ಹೋಬಳಿಯ ಕೇತೋಹಳ್ಳಿಯ ನವೀನ್ ಕುಮಾರ್, ತಾವರೆಕೆರೆ ಟೌನ್ ಶರತ್ ಕುಮಾರ್ ಮತ್ತು ಕಾರ್ತಿಕ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಹಾರೋಹಳ್ಳಿಯಲ್ಲಿ 7 ಕೆ.ಜಿ.ಜಪ್ತಿ: ಜಿಲ್ಲೆಯ ಕನಕಪುರ ತಾಲೂಕು ಹಾರೋಹಳ್ಳಿ ಠಾಣೆ ವ್ಯಾಪ್ತಿಯ ಚಿಕ್ಕದೇವರಹಳ್ಳಿ ಗ್ರಾಮದಲ್ಲಿ 7.600 ಕೆ.ಜಿ. ಗಾಂಜಾ ಶೇಖರಣೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Magadi; Mother-son passed away due to gas leak from geyser](https://www.udayavani.com/wp-content/uploads/2024/07/magadu-150x83.jpg)
Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ
![Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ](https://www.udayavani.com/wp-content/uploads/2024/07/karad-150x83.jpg)
Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
![Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ](https://www.udayavani.com/wp-content/uploads/2024/07/loka-150x84.jpg)
Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
![1-train](https://www.udayavani.com/wp-content/uploads/2024/07/1-train-150x96.jpg)
Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-3-150x90.jpg)
Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.