ಶ್ರೀಗಳು ಆಧ್ಯಾತ್ಮಿಕ ಜ್ಯೋತಿ ಬೆಳಗಿಸಲಿ


Team Udayavani, Jun 17, 2020, 6:50 AM IST

srigalu-jyoti

ಮಾಗಡಿ: ದೀಕ್ಷೆ ಸ್ವೀಕರಿಸಿರುವ ಕಿರಿಯ ಶ್ರೀ ಶಿವಮಹಂತಸ್ವಾಮಿ ಸಮಾಜದ ಆಸ್ತಿ, ಸಮಾಜದ ಶ್ರೇಯೋಭಿವೃದ್ಧಿಗೆ ತಮ್ಮದೇ ಆಧ್ಯಾತ್ಮಿಕ ಜ್ಯೋತಿ ಬೆಳಗಿಸುವಂತಾಗಲಿ ಎಂದು ಸಿದ್ಧಗಂಗಾ ಮಠದ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ  ತಿಳಿಸಿದರು. ತಾಲೂಕಿನ ಸೋಲೂರು ಹೋಬಳಿ ಗದ್ದುಗೆ ಮಠದ ಮಹಂತೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಸರಳವಾಗಿ ನಡೆದ ಕಿರಿಯ ಶ್ರೀ ಶಿವಮಹಂತಸ್ವಾಮಿ ದೀಕ್ಷೆ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿ  ಮಾತನಾಡಿದರು.

ಗುರುಪರಂಪರೆ ಅತ್ಯಂತ ಶ್ರೇಷ್ಠ ವಾದುದು. ಅಂತಹ ಗುರು ದೀಕ್ಷೆ ಪಡೆದಿರುವ ಹರೀಶ್‌, ಈಗ ಶಿವಮಹಂತಸ್ವಾಮೀಜಿ ಯಾಗಿದ್ದಾರೆ. ಇಂದಿನಿಂದ ಸಮಾ ಜದ ಆಸ್ತಿ ಯಾಗಿದ್ದಾರೆ. ಸಂತರ ಸರಳ ಜೀವನ ಮತ್ತು ಆಧ್ಯಾತ್ಮಿಕ ಬದುಕು ಬಹಳ ಕಠಿಣವಾದುದು. ತಪಸ್ಸಿನ ಫ‌ಲದಿಂದ ಸಿದ್ಧಿಸಿಕೊಳ್ಳಬೇಕು. ಭಕ್ತರಿಗೆ ಆಶೀರ್ವಾದದ ಜೊತೆಗೆ ಸತ್ಸಂಗ, ಮಾರ್ಗ ದರ್ಶನ ನೀಡಿ, ಸಮಾಜದಲ್ಲಿ ಶ್ರೇಯೋಭಿವೃದ್ಧಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಂದರು.

ಗದ್ದುಗೆ ಮಠದ ಉತ್ತರಾಧಿಕಾರಿಯಾಗಿ ದೀಕ್ಷೆ ಸ್ವೀಕರಿಸಿ ದ ನೂತನ ಕಿರಿಯ ಶ್ರೀಗಳಾದ ಶಿವಮಹಂತಸ್ವಾಮೀಜಿ ಸಸಿ ನೆಟ್ಟು ಮಾತನಾಡಿದರು. ನಾನು ಸಿದ್ಧಗಂಗಾ ಶಿವೈಕ್ಯ ಶಿವಕುಮಾರ ಸ್ವಾಮೀಜಿ ಹುಟ್ಟೂರು ವೀರಾಪುರದಲ್ಲಿ ಜನಿಸಿದ್ದೇನೆ. ಗದ್ದುಗೆ ಮಠದ ಗುರುಪರಂಪರೆ  ಮೈಗೂಡಿ ಸಿಕೊಂಡು ಧರ್ಮ ಜ್ಯೋತಿ ಬೆಳಗಿಸುತ್ತೇನೆ ಎಂದರು. ಪಟ್ಟಾಭಿಷೇಕ ಪ್ರಯುಕ್ತ ಮಠದ ಮಹಂತೇ ಶ್ವರ ಸ್ವಾಮೀಜಿ ಗದ್ದುಗೆಗೆ ರುದ್ರಾಭಿಷೇಕ, ಅರ್ಚನೆ, ವಿಶೇಷ ಹೂವಿನ ಅಲಂಕಾರ ಪೂಜೆ ನೆರವೇರಿಸಿದರು.

ಗದ್ದುಗೆ ಮಠದ ಹಿರಿಯ ಶ್ರೀ ಮಹಂತ ಸ್ವಾಮೀಜಿ ಆಶೀರ್ವಚನ ನೀಡಿದರು. ಕಂಚಗಲ್‌ ಬಂಡೇ ಮಠದ ಬಸವಲಿಂಗ ಶ್ರೀ, ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ, ಶಿವರುದ್ರ ಸ್ವಾಮೀಜಿ, ನೆಲ ಮಂಗಲದ ಸಿದ್ಧಲಿಂಗ ಶ್ರೀ,  ಗಮ್ಮಸಂದ್ರ ಮಠದ ಚಂದ್ರ ಶೇಖರ ಸ್ವಾಮೀಜಿ ಸೇರಿ ಹರಗುರು ಚರಮೂರ್ತಿಗಳು, ಹಾಗೂ ವೀರಶೈವ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.