ಜಿಲ್ಲೆಯಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪನೆ: ಪ್ರೊ.ನಾರಾಯಣಗೌಡ


Team Udayavani, Nov 30, 2021, 6:58 PM IST

medical college

ರಾಮನಗರ: ಡಾ.ಟಿ.ಎಚ್‌.ಆಂಜನಪ್ಪ ಮತ್ತು ತಮ್ಮ ನೇತೃತ್ವದ ತಂಡ ಒಕ್ಕಲಿಗರ ಸಂಘಕ್ಕೆ ಆಯ್ಕೆಯಾದರೆ ಜಿಲ್ಲಾ ವ್ಯಾಪ್ತಿಯಲ್ಲಿ ಕೆಂಗಲ್‌ ಹನುಮಂತಯ್ಯನವರ ಹೆಸರಿನಲ್ಲೊಂದು ಮೆಡಿಕಲ್‌ ಕಾಲೇಜು ಸ್ಥಾಪಿಸುವು ದಾಗಿ ಕೃಷಿ ವಿವಿ ನಿವೃತ್ತ ಉಪಕುಲಪತಿ ಪ್ರೊ.ನಾರಾ ಯಣಗೌಡ ತಿಳಿಸಿದರು. ನಗರ ಹೊರವಲಯದ ಜಾನಪದ ಲೋಕದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಕ್ಕಲಿಗರ ಸಂಘವನ್ನು ಒಂದು ಶ್ರೇಷ್ಠ ಸಂಸ್ಥೆಯನ್ನಾಗಿ ಮಾಡಬೇಕಾಗಿದೆ.

ಇದರೊಟ್ಟಿಗೆ ಸಂಘದ ಚಟುವಟಿಕೆಗಳನ್ನು ಬೆಂಗಳೂರು ನಗರದಾಚೆಗೆ ವಿಸ್ತರಿಸಬೇಕಾಗಿದೆ.ಒಕ್ಕಲಿಗರ ಸಂಘ ಈಗಾಗಲೇ ಹಲವಾರು ವಿದ್ಯಾ ಸಂಸ್ಥೆ ನಡೆಸುತ್ತಿದೆ. ಭವಿಷ್ಯದಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಗೂ ಪೂರಕ ವಾತಾವರಣ ಕಲ್ಪಿಸುವುದಾಗಿ ತಿಳಿಸಿದರು.

ಸಂಘ ಮುಳುಗುತ್ತಿದೆ: ಒಕ್ಕಲಿಗರ ಸಂಘ ಐತಿಹಾಸಿಕ ಸಂಘ. ಆದರೆ ಕಳೆದ 20 ವರ್ಷಗಳಲ್ಲಿ ಆದ ಬೆಳವಣಿ ಗೆ ನೋವು ತರಿಸಿದೆ. ಹಡುಗು ಮುಳುಗಿದಂತೆ ಸಂಘ ಮುಳುಗುತ್ತಿದೆ. ತಮ್ಮ ಮತ್ತು ಡಾ.ಆಂಜನಪ್ಪ ನೇತೃತ್ವದ ತಂಡದಲ್ಲಿ ವಿದ್ಯಾವಂತರು, ಸಾಧನೆ ತೋರಿದವರು, ಖ್ಯಾತಿವೆತ್ತರು ಸ್ಪರ್ಧಿಸಿದ್ದಾರೆ ಎಂದರು.

ಧರ್ಮ ಮುಖ್ಯ: ತಮ್ಮ ತಂಡ ಆಯ್ಕೆಯಾದರೆ ಸಂಘದ ಅನೇಕ ನ್ಯೂನತೆ ಸರಿಪಡಿಸಲಾಗುವುದು, ಈ ವಿಚಾರದಲ್ಲಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಂಘ ದಲ್ಲಿ ಜಾರಿಗೆ ತರುವುದಾಗಿಯೂ ತಿಳಿಸಿದರು.

ಆಡಳಿತಕ್ಕೆ ಆಯ್ಕೆಯಾದರೆ ಸಂಘದ ನ್ಯೂನತೆಗಳಿಗೆ ಕಾರಣರಾದ ಹಿಂದಿನ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಜರುಗಿಸುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಾರಾಯಣಗೌಡರು, ತಮಗೆ ಸಂಘದ ಅಭಿವೃದ್ಧಿ ಮುಖ್ಯ, ಕಾನೂನು ಕ್ರಮ ಆರಂಭಿಸದರೆ ಅಭಿವೃದ್ಧಿಯತ್ತ ಗಮನ ಹರಿಸಲು ಸಾಧ್ಯವಾಗುವು ದಿಲ್ಲ, ಕಾನೂನಿಗಿಂತ ಧರ್ಮ ಮುಖ್ಯ ಎಂದು ಪ್ರತಿಕ್ರಿಯಿಸಿದರು.

ಸಭ್ಯಸ್ಥರಿಗೆ ಮತ ಕೊಡಿ: ಡಾ.ಪುಟ್ಟೇಗೌಡ ಮಾತನಾಡಿ, ಸಭ್ಯಸ್ಥರಿಗೆ ಮತ ಕೊಡಿ. ಇ-ಟೆಂಡರ್‌ ವ್ಯವಸ್ಥೆ ಜಾರಿ ಮಾಡುವುದಾಗಿ ತಿಳಿಸಿದರು. ಅಲ್ಲದೇ, ಒಕ್ಕಲಿಗ ಸಮುದಾಯದ ಪ್ರಮುಖರನ್ನು ಒಳಗೊಂಡ ವಾಚ್‌ ಡಾಗ್‌ ಸಮಿತಿ ರಚಿಸುವುದಾಗಿ ತಿಳಿಸಿದರು.

ನುಂಗಣ್ಣರೊಂದಿಗೆ ರಾಜಿ ಇಲ್ಲ: ನಿವೃತ್ತ ಪೊಲೀಸ್‌ ಅಧಿಕಾರಿ ಎಸ್‌.ಕೆ.ಉಮೇಶ್‌ ಮಾತನಾಡಿ, ತಾವು ಸಂಘಕ್ಕೆ ಆಯ್ಕೆಯಾದರೆ ನುಂಗಣ್ಣರೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು. ಪೊರೆ ಕಳಚಿದ ಹಾವುಗಳು ಮತ್ತೂಮ್ಮೆ ಸಂಘದ ಒಳಗೆ ಬರಲು ಯತ್ನಿಸು ತ್ತಿವೆ ಎಂದು ಹಳೆ ನಿರ್ದೇಶಕರ ವಿರುದ್ಧ ಕುಟುಕಿದರು. ಚುನಾವಣೆಯಲ್ಲಿ ಸ್ಪರ್ಧಿಸಿರುವ ತಮ್ಮಣ್ಣ ಎ.ಪಿ. (ಅಬ್ಬೂರು), ಡಾ.ಭಾವನ ಆರ್‌.ಮಾತನಾಡಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.