ಮೇಕೆದಾಟು: ಷರತ್ತುಬದ್ಧ ಅನುಮತಿಗೆ ಆಕ್ರೋಶ

ಕೇಂದ್ರದ ನಡೆಯನ್ನು ರಾಜ್ಯದ ನಾಯಕರು ವಿರೋಧಿಸಿಲ್ಲ; ಮೇಕೆದಾಟು ಯೋಜನೆ ಜಾರಿಗೆ ಇಚ್ಛಾಶಕ್ತಿ ಕೊರತೆ

Team Udayavani, Aug 7, 2021, 3:24 PM IST

DAM

ಸಾಂದರ್ಭಿಕ ಚಿತ್ರ.

ರಾಮನಗರ: ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿ.ಪಿ.ಆರ್‌) ಸಿದ್ಧಪಡಿಸಲು ಕೇಂದ್ರ ಸರ್ಕಾರ ಷರತ್ತು ಬದ್ಧ ಅನುಮತಿ ನೀಡಿತ್ತು ಎಂಬ ವಿಚಾರವನ್ನು ರಾಜ್ಯದ ಯಾವ ರಾಜಕಾರಣಿಯೂ ಜನರ ಮುಂದೆ ಇಡಲಿಲ್ಲವೇಕೆ? ಎಂದು ಜಿಲ್ಲೆಯ ಜನತೆ ಪ್ರಶ್ನಿಸಿದ್ದಾರೆ.

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಬಿ.ಎಸ್‌.ಯಡಿಯೂರಪ್ಪ, ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮುಂತಾದ
ಘಟಾನುಘಟಿ ನಾಯಕರೇ ಈ ವಿಚಾರವನ್ನು ಮುಚ್ಚಿಟ್ಟಿದ್ದು ಏಕೆ? ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ತಮಿಳುನಾಡು, ಕೇರಳ, ಪಾಂಡಿಚರಿ ರಾಜ್ಯಗಳ ಅನುಮತಿಯೂ ಬೇಕು ಎಂಬ ಷರತ್ತು ವಿಧಿಸಿದ್ದ ಕೇಂದ್ರದ ನಡೆಯನ್ನು ರಾಜ್ಯದ ನಾಯಕರು ವಿರೋಧಿಸಲಿಲ್ಲ, ಖಂಡಿಸಲಿಲ್ಲ ಎಂದು ಜಿಲ್ಲೆಯ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಬ್ಯಾಲೆನ್ಸಿಂಗ್‌ ರಿಸರ್ವಾಯರ್‌ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್‌ ಮತ್ತು ಕಾವೇರಿ ನ್ಯಾಯ ಮಂಡಳಿಯ ಯಾವ ತೀರ್ಪುಗಳನ್ನು
ಉಲ್ಲಂಘಿಸುವುದಿಲ್ಲ ಎಂಬ ಪರಿಜ್ಞಾನ ಕೇಂದ್ರ ಅಧಿಕಾರಿಗಳು ಮತ್ತು ಆಡಳಿತಗಾರರಿಗಿದೆ. ಆದರೂ, ಇತರ ರಾಜ್ಯಗಳ ಅನುಮತಿ ಬೇಕು ಎಂದು ಕೇಳಿರುವುದು ರಾಜ್ಯದ ಅವಶ್ಯಕತೆಯನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿಲ್ಲ, ಬೇಕಂತಲೇ ರಾಜ್ಯಕ್ಕೆ ತೊಂದರೆಕೊಡುತ್ತಿದೆ ಎಂದು ಜನರು ಹರಿಹಾಯ್ದಿದ್ದಾರೆ.

ಜೆಡಿಎಸ್‌,ಕಾಂಗ್ರೆಸ್‌ ಸುಮ್ಮನಿರುವುದೇಕೆ?: ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರವೇ ಷರತ್ತುಗಳನ್ನು ಒಡ್ಡಿರುವ ವಿಚಾರ ಗೊತ್ತಿದ್ದರೂ, ರಾಜ್ಯದ ನಾಯಕರು ಪ್ರತಿಕ್ರಿಯಿಸದೆ ಇರುವ ಹಿಂದಿನ ಮರ್ಮವೇನು? ಕೇಂದ್ರದಲ್ಲೂ ಬಿಜೆಪಿ ಅಧಿಕಾರಿದಲ್ಲಿರುವುದರಿಂದ ರಾಜ್ಯ ಬಿಜೆಪಿ ಸುಮ್ಮನಿದೆ. ಆದರೆ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮುಖ್ಯಮಂತ್ರಿಗಳು ಮತ್ತು ಸಚಿವರು ಸುಮ್ಮನಾಗಿದ್ದೇಕೆ? ಎಂದು ಪ್ರಶ್ನಿಸಿರುವ ಜಿಲ್ಲೆಯ ಜನತೆ ಬಿಜೆಪಿ ಸೇರಿದಂತೆ ಯಾವ ಪಕ್ಷಕ್ಕೂ ಮೇಕೆದಾಟು ಯೋಜನೆಯ ಇಚ್ಛಾಶಕ್ತಿಯ ಕೊರತೆ ಇದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ:ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್‌ ಅವರ ಅವಧಿಯಲ್ಲಿ ಮೇಕೆದಾಟು ಜಲಾಶಯ ನಿರ್ಮಾಣದ ಸ್ಥಳವನ್ನು ಗುರುತಿಸಿದ್ದರು. ತದ ನಂತರ ಜಾರಕಹೋಳಿಯವರು ಮೇಕೆದಾಟಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ,ಕೇಂದ್ರ ಸರ್ಕಾರ ಅಧಿಕಾರಿಗಳು ಸಚಿವರ ಬಳಿ ಚರ್ಚಿಸಲು ತೆರಳುತ್ತಿರುವುದಾಗಿ ಹೇಳಿದರು. ಯಾವೊಂದು ಸಂದರ್ಭದಲ್ಲೂ ಯಾವೊಬ್ಬ ಸಚಿವರು ಡಿಪಿಆರ್‌ ಸಿದ್ಧಪಡಿಸಿಲು ಷರತ್ತು ಬದ್ಧ ಅನುಮತಿ ಸಿಕ್ಕಿದೆ ಎಂದು ಹೇಳಲಿಲ್ಲ. ಲಕ್ಷಾಂತರ ರೂ. ವೆಚ್ಚಮಾಡಿ ಡಿಪಿಆರ್‌ ಸಿದ್ಧಪಡಿಸಿ ಕಳುಹಿಸಲಾಗಿದೆ. ಕೇಂದ್ರ ಸರ್ಕಾರ ತಮಿಳುನಾಡು ಮತ್ತು ಇತರ ರಾಜ್ಯಗಳು ಒಪ್ಪಿಗೆ ನೀಡಲಿಲ್ಲ ಎಂಬ ಕಾರಣಕ್ಕೆ ಡಿ.ಪಿ.ಆರ್‌ ಕಡೆ ಗಮನ ಹರಿಸುತ್ತಿಲ್ಲ ಎಂದು ಜಿಲ್ಲೆಯ ಜನರು ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯದ ಎಲ್ಲಾ ರಾಜಕಾರಣಿಗಳು ತಮ್ಮ ಪಕ್ಷ ಬೇಧವನ್ನು ಬದಿಗೊತ್ತಿ ತಕ್ಷಣ ಕೇಂದ್ರದ ಕುತಂತ್ರವನ್ನುಖಂಡಿಸಬೇಕು.

ತಮಿಳುನಾಡಿಗೆ ಸೇರಬೇಕಾದ್ದ ನೀರನ್ನು ಹೊರತುಪಡಿಸಿ,ಸಮುದ್ರದ ಪಾಲಾಗುತ್ತಿರುವ ನೀರನ್ನು ಮೇಕೆದಾಟಿನಲ್ಲಿ ಹಿಡಿದಿಟ್ಟುಕೊಂಡು ಬೆಂಗ
ಳೂರು ನಗರ, ರಾಮನಗರ,ಕೋಲಾರ ಜಿಲ್ಲೆಗಳ ಜನರ ನೀರಿನ ಸಮಸ್ಯೆ ನೀಗಿಸಲು ಉದ್ದೇಶಿಸಿರುವ ಯೋಜನೆ.ಇಲ್ಲಿ ತಮಿಳುನಾಡಿಗೆ ತೊಂದರೆಕೊಡುವ ಯಾವ ಉದ್ದೇಶವೂ ಯೋಜನೆಯಲ್ಲಿಲ್ಲ. ಆದರೂ,ಕೇಂದ್ರ ಸರ್ಕಾರಕಾವೇರಿ ಕೊಳ್ಳದ ಎಲ್ಲಾ ರಾಜ್ಯಗಳ ಅನುಮತಿ
ಬೇಕು ಎಂದು ಹೇಳಿರುವುದು ಹಾಸ್ಯಾಸ್ಪದ.
-ಸಂಪತ್‌, ಮೇಕೆದಾಟು ಹೋರಾಟ ಸಮಿತಿ,
ರಾಮನಗರ ಜಿಲ್ಲೆ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.