ಜಿಪಂ ಅಧಿಕಾರಿಗಳ ವಿರುದ್ಧ ಸದಸ್ಯರ ಆಕ್ರೋಶ


Team Udayavani, Aug 20, 2019, 5:30 PM IST

rn-tdy-1

ರಾಮನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ಜಿಪಂ ಅಧ್ಯಕ್ಷ ಎಂ.ಎನ್‌.ನಾಗರಾಜು ಮಾತನಾಡಿದರು.

ರಾಮನಗರ: ಗ್ರಾಪಂಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಬಳಕೆಯಾಗುತ್ತಿರುವ ಕೊಳವೆ ಬಾವಿ, ಬೀದಿ ದೀಪಗಳಿಗೆ ಪೂರೈಕೆಯಾಗುತ್ತಿವ ವಿದ್ಯುತ್‌ಗೆ ಪ್ರತ್ಯೇಕ ಬಿಲ್ ಕೊಡುವಂತೆ ಕಳೆದೆರಡು ಸಭೆಗಳಲ್ಲಿ ಸೂಚನೆ ಕೊಟ್ಟರೂ ಬೆಸ್ಕಾಂ ಅಧಿಕಾರಿಗಳು ಪಾಲಿಸು ತ್ತಿಲ್ಲ ಎಂದು ಜಿಪಂ ಅಧ್ಯಕ್ಷ ಎಂ.ಎನ್‌.ನಾಗರಾಜು ಬೇಸರ ವ್ಯಕ್ತಪಡಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ನೀರು ಪೂರೈಕೆ ವಿಚಾರದಲ್ಲಿ ನಡೆದ ಚರ್ಚೆಯ ವೇಳೆ ಜಿಪಂ ಅಧಿಕಾರಿಗಳು ಪ್ರತ್ಯೇ ಕ ಬಿಲ್ಗಳನ್ನು ನೀಡುತ್ತಿಲ್ಲ ಎಂದು ಬೆಸ್ಕಾಂ ಇಲಾಖೆ ಅಧಿಕಾರಿಗಳ ಬಗ್ಗೆ ದೂರು ವ್ಯಕ್ತಪಡಿಸಿದರು. ಈ ವೇಳೆ ಅಧ್ಯಕ್ಷರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಅಧ್ಯಕ್ಷರೊಂದಿಗೆ ಧ್ವನಿಗೂಡಿಸಿದ ಜಿಪಂ ಉಪ ಕಾರ್ಯದರ್ಶಿ ಉಮೇಶ್‌, ಬೆಸ್ಕಾಂ ಅಧಿಕಾರಿಗಳ ಈ ವಿಚಾರದಲ್ಲಿ ಬೇಜವಾಬ್ದಾರಿ ತೋರುವುದು ಸರಿ ಯಲ್ಲ. ಲಕ್ಷಾಂತರ ರೂ. ಬಾಕಿ ಇದೆ ಎಂದು ಹೇಳ್ತೀ ರಾ. ಜಿಪಂ ಕೇಳಿದ ರೀತಿಯಲ್ಲಿ ಬಿಲ್ ಕೊಡ್ತಿಲ್ಲ ಎಂದು ಬೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿ ನಿಲಯಗಳಿಗೆ ಸರಬರಾಜು ಆಗುತ್ತಿರುವ ಆಹಾರ ಸಾಮಗ್ರಿಗಳು ಗುಣಮಟ್ಟದ್ದಾಗಿರಲಿ, ಈ ಬಗ್ಗೆ ರಾಜಿ ಬೇಡ ಎಂದು ಜಿಪಂ ಅಧ್ಯಕ್ಷರು ಅಧಿಕಾರಿಗಳಿಗೆ ತಿಳಿ ಹೇಳಿದರು.

ನಿರ್ಧಾರಗಳು ಕಡತಕ್ಕೆ ಮಾತ್ರವೇ?: ಜಿಪಂ ಉಪಾಧ್ಯಕ್ಷೆ ಜಿ.ಡಿ.ವೀಣಾಕುಮಾರಿ ಮಾತನಾಡಿ, ಜಿಪಂ ಸಭೆಗಳಲ್ಲಿ ಚರ್ಚೆಯಾಗುತ್ತಿರುವ ವಿಷಯಗಳು ಕಡತಗಳಲ್ಲಿಯೇ ಉಳಿದುಕೊಳ್ಳುತ್ತಿವೆಯೇ ಹೊರತು ಅನುಷ್ಠಾನವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪ ಡಿಸಿದರು. ಕಳೆದ ಎರಡು ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಚನ್ನಪಟ್ಟಣದ ಬೆಳಕೆರೆ ಹಾಗೂ ನೀಲಕಂಠ ನಹಳ್ಳಿ ಅಂಗನವಾಡಿ ಕೇಂದ್ರಗಳನ್ನು ದುರಸ್ಥಿಪಡಿಸಿ ಎಂದು ಮನವಿ ಮಾಡಿದ್ದಾಗಿ ತಿಳಿಸಿದರು. ಚನ್ನಪಟ್ಟ ಣದ ತಮಿಳರ ಕಾಲೋನಿಯಲ್ಲಿ ಸ್ವಚ್ಛತೆ ಮರೀಚಿಕೆ ಯಾಗಿದೆ. ಸ್ವಚ್ಛ ಮೇವ ಜಯತೆ ಕಾರ್ಯಕ್ರಮ ಕೇವಲ ಉದ್ಘಾಟನೆಗಷ್ಟೆ ಸೀಮಿತವಾಗಿದೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಪ್ರಸನ್ನಕುಮಾರ್‌ ಮಾತನಾಡಿ, ಅಧಿಕಾರಿಗಳು ಚುನಾಯತ ಪ್ರತಿನಿಧಿಗಳ ಕರೆಗಳನ್ನೇ ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದರು. ಮಧ್ಯಾಹ್ನ 12 ಗಂಟೆಗೂ ಕರೆ ಸ್ವೀಕರಿಸೊಲ್ಲ. ಸಂಜೆ 5 ಗಂಟೆಗೆ ಫೋನ್‌ ಸ್ವಿಚ್ ಆಫ್ ಆಗಿರುತ್ತೆ ಎಂದರು. ಹಿರಿಯ ಅಧಿಕಾರಿಗಳಿಗೆ ವಿಚಾರ ತಿಳಿಸಿದರೂ ಯಾವ ಕ್ರಮಗಳನ್ನೂ ಕೈಗೊಳ್ಳುತ್ತಿಲ್ಲ ಎಂದರು.

ಆರೋಗ್ಯ ಇಲಾಖೆ ಡಿಎಚ್ಒ ಡಾ.ಅಮರನಾಥ್‌, ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು, ಅವುಗಳನ್ನು ತಡೆಗಟ್ಟಲು ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಟೆಂಡರ್‌ ಪೂರ್ಣವಾಗಿಲ್ಲ: ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಡಿ ಗಂಗಾ ಕಲ್ಯಾಣ ಯೋಜನೆಯಡಿ 179 ಕೊಳವೆ ಬಾವಿಗಳನ್ನು ಕೊರೆಯಲು ಇನ್ನೂ ಟೆಂಡರ್‌ ಪ್ರಕ್ರಿಯೆ ಪೂರ್ಣವಾಗಿಲ್ಲ ಎಂದರು. ಟೆಂಡರ್‌ ಪ್ರಕ್ರಿಯೆ ಮೊದಲು ಡೀಸಿಗಳ ಹಂತದಲ್ಲಿ ನಡೆಯುತ್ತಿತ್ತು. ಇದೀಗ ರಾಜ್ಯ ಮಟ್ಟದಲ್ಲಿ ನಡೆಯುತ್ತಿರುವುದೇ ವಿಳಂಬಕ್ಕೆ ಕಾರಣ ಎಂದು ಅಧಿಕಾರಿಗಳು ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ ಮೂಲಕ ಸರ್ಕಾರ ಟ್ಯಾಕ್ಸಿ ಯೋಜನೆಯಡಿ 2017-18ನೇ ಸಾಲಿಗೆ 35 ಗುರಿ ನೀಡಿದ್ದು ಈಡೇರಿದೆ. 2018-19ನೆ ಸಾಲಿಗೆ 23 ಗುರಿ ನೀಡಲಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. 2019-20ನೇ ಸಾಲಿಗೆ 14 ಗುರಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್‌.ಸುಗುಣ, ಶಂಕರ್‌, ಜಿಪಂ ಅಧಿಕಾರಿಗಳು ಉಪಸ್ಥಿತರಿದ್ದರು.

ಮಧ್ಯಮಾವಧಿ ತಳಿಗಳ ಬೀಜ ಬಿತ್ತನೆ ಮಾಡಿ:

ಕೃಷಿ ಇಲಾಖೆ ಪ್ರಗತಿ ಚರ್ಚೆಗೆ ಬಂದಾಗ ಮಾತ ನಾಡಿದ ಕೃಷಿ ಅಧಿಕಾರಿಗಳು ಜಿಲ್ಲೆಯಲ್ಲಿ ಈ ಬಾರಿ 203 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಶೇ.51 ರಷ್ಟು ಬಿತ್ತನೆಯಾಗಿದೆ. ಕನಕಪುರದಲ್ಲಿ ಅತಿ ಕಡಿಮೆ ಬಿತ್ತನೆಯಾಗಿದೆ. 5 ದಿನಗಳಿಂದ ಜಿಲ್ಲೆಯಲ್ಲಿ ಉತ್ತ ಮವಾಗಿ ಮಳೆಯಾಗುತ್ತಿದೆ. ರೈತರು ಈಗಲೂ ಮಧ್ಯ ಮಾವಧಿ ತಳಿಗಳನ್ನು ಬಿತ್ತನೆ ಮಾಡಬಹುದು. ಶೂನ್ಯ ಬಂಡವಾಳ ನೈಸರ್ಗಿಕ ಕೃಷಿಯನ್ನು ಕ್ಲಸ್ಟರ್‌ ಮಟ್ಟದಲ್ಲಿ ಚನ್ನಪಟ್ಟಣದ ಮೂರು ಹಳ್ಳಿಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಸಿರಿ ಧಾನ್ಯ ಬೆಳೆಯಲು 10 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈಗಾಗಲೇ 180 ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಸಿರಿಧಾನ್ಯ ಬೆಳೆಯಲು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಲು ಆ.31ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.