ಮಾರ್ಚ್ ನಲ್ಲಿ ಆರೋಗ್ಯ ವಿವಿ ಕ್ಯಾಂಪಸ್, ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಅಶ್ವತ್ಥನಾರಾಯಣ
Team Udayavani, Jan 26, 2022, 2:26 PM IST
ರಾಮನಗರ: ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಇಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳ ಕ್ಯಾಂಪಸ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ರಾಮನಗರವನ್ನು ‘ಹೆಲ್ತ್ ಸಿಟಿ’ಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿದ ಅವರು, ಜಿಲ್ಲೆಯಲ್ಲಿ ಕೇವಲ 250 ಹಾಸಿಗೆಗಳನ್ನು ಹೊಂದಿದ್ದ ಜಿಲ್ಲಾಸ್ಪತ್ರೆಯ ಸಾಮರ್ಥ್ಯವನ್ನು 650 ಹಾಸಿಗೆಗಳಿಗೆ ಏರಿಸಲಾಗಿದ್ದು, ಇಲ್ಲಿಗೆ ಅಗತ್ಯವಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದರು.
ರೈತರ ಸಬಲೀಕರಣಕ್ಕೆ ಪ್ರಧಾನಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಗೆ 179 ಕೋಟಿ ರೂ. ನೆರವು ರೈತರ ಬ್ಯಾಂಕ್ ಖಾತೆಗಳಿಗೆ ಹರಿದು ಬಂದಿದೆ. ಇದರಿಂದ 1.18 ಲಕ್ಷ ರೈತ ಕುಟುಂಬಗಳಿಗೆ ಲಾಭವಾಗಿದೆ. ಇದರ ಜೊತೆಗೆ ರಾಜ್ಯ ಸರಕಾರವು 63 ಕೋಟಿ ರೂ. ಕೊಟ್ಟಿದೆ ಎಂದು ವಿವರಿಸಿದರು.
ಇದನ್ನೂ ಓದಿ:ನೂತನ ಶೈಲಿಯ ಜೀಪ್ ತಯಾರಿಸಿದ ವ್ಯಕ್ತಿಗೆ ಹೊಸ ವಾಹನ ಗಿಫ್ಟ್ ನೀಡಿದ ಆನಂದ್ ಮಹೀಂದ್ರಾ
ಜಿಲ್ಲೆಯ ರೈತರಿಗೆ 18 ಕೋಟಿ ರೂ. ವಿನಿಯೋಗಿಸಿ ಕೃಷಿ ಉಪಕರಣಗಳನ್ನು ಕೊಡಲಾಗಿದೆ. ಹಾಗೆಯೇ, ರೇಷ್ಮೆ ಬೆಳೆಗಾರರಿಗೆ 25 ಕೋಟಿ ರೂ. ನೇರ ಅನುದಾನ ಒದಗಿಸಲಾಗಿದೆ. ಜತೆಗೆ ಮುಂದಿನ ಸಂಪುಟ ಸಭೆಯಲ್ಲಿ ಚನ್ನಪಟ್ಟಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಿಸುವ ಯೋಜನೆಗೆ ಅನುಮೋದನೆ ದೊರಕಿಸಿ ಕೊಡಲಾಗುವುದು. ಜತೆಗೆ, ಭೈರಾಪಟ್ಟಣದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಕೃಷಿ ಮಾರುಕಟ್ಟೆಯನ್ನು ಸ್ಥಾಪಿಸಲಾಗುವುದು ಎಂದು ಅವರು ಜಿಲ್ಲೆಯ ಜನರಿಗೆ ಸಿಹಿಸುದ್ದಿ ಕೊಟ್ಟರು.
ಜಿಲ್ಲೆಯಲ್ಲಿ ‘ಜಲ ಜೀವನ್’ ಮಿಷನ್ ಯೋಜನೆಯನ್ನು ಸಮರೋಪಾದಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇನ್ನೂ ಬಾಕಿ ಉಳಿದಿರುವ ಮನೆಗಳಿಗೆ ಈ ವರ್ಷದ ಡಿಸೆಂಬರ್ ಹೊತ್ತಿಗೆ ಹೊಸದಾಗಿ ನಲ್ಲಿ ಸಂಪರ್ಕ ಕೊಟ್ಟು, ನದೀಮೂಲದ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುವುದು. ಇದರಿಂದ ಜನರ ಆರೋಗ್ಯ ಸುಧಾರಿಸಲಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಜಿಪಂ ಸಿಇಒ ಇಕ್ರಂ, ಎಸ್ಪಿ ಸಂತೋಷ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ