ಸಹಕಾರ ಸಂಘದಲ್ಲಿ 71 ಲಕ್ಷ ರೂ. ದುರ್ಬಳಕೆ


Team Udayavani, Sep 21, 2022, 1:47 PM IST

ಸಹಕಾರ ಸಂಘದಲ್ಲಿ 71 ಲಕ್ಷ ರೂ. ದುರ್ಬಳಕೆ

ಕುದೂರು: ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ 71 ಲಕ್ಷ ರೂ. ದುರ್ಬಳಕೆಯಿಂದ ಪ್ರತಿ ವರ್ಷ ಸಂಘದಲ್ಲಿ ನಷ್ಟ ಅನುಭವಿಸುವಂತಾಗಿದೆ. ಕುದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿನ 2021-22ನೇ ಸಾಲಿನ ಲೆಕ್ಕಪರಿಶೋಧನ ವರದಿಯಲ್ಲಿ 1998ರಿಂದ 2000ರ ಅವಧಿಯ ಆಡಳಿತ ಮಂಡಳಿ ಸದಸ್ಯರ ಹಾಗೂ ವ್ಯವಸ್ಥಾಪಕರು ಜಂಟಿಯಾಗಿ ಜವಾಬ್ದಾರಿಯಾಗಿ 71.22700 ರೂ. ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಕಾಯ್ದೆ 68ರಂತೆ 1,90,000 ರೂ. ದುರ್ಬಳಕೆಯಾಗಿದೆ ಎಂದು ನಮೂದಿಸಲಾಗಿದೆ.

ಲಕ್ಷಾಂತರ ರೂ. ಹಣ ದುರ್ಬಳಕೆಯಾಗಿದೆ ಎಂಬ ಮಾಹಿತಿ ಬಹುತೇಕ ನಿರ್ದೇಶಕರಿಗೆ ಇಲ್ಲ. ವಸೂಲಿ ಮಾಡಲು ಯಾವ ಕ್ರಮ ಕೈಗೊಳ್ಳಬೇಕು ಎಂಬ ಸಾಮಾನ್ಯ ಜ್ಞಾನ ನಿರ್ದೇಶಕರಿಗೆ ಇಲ್ಲವಾಗಿದೆ. ನಿರ್ದೇಶಕರು ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳು ಕಳೆದರೂ, ಸಹಕಾರ ಸಂಘದಲ್ಲಿನ ಲಕ್ಷಾಂತರ ರೂ. ದುರ್ಬಳಕೆಯಾಗಿರುವ ಕುರಿತು ಪ್ರತಿ ವರ್ಷ ಆಡಿಟ್‌ ವರದಿಯಲ್ಲಿ ವರದಿಯಾಗುತ್ತಿದ್ದರೂ, ಈ ಕುರಿತು ಇಲ್ಲಿಯವರೆಗೂ ಯಾವ ನಿರ್ದೇಶಕರು ತಲೆ ಕೆಡಿಸಿಕೊಂಡಿಲ್ಲ. ಹಣ ದುರ್ಬಳಕೆ ಮಾಡಿರುವವರು ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಅಥವಾ ತಪ್ಪಿತಸ್ಥರಿಂದ ಹಣವನ್ನು ವಸೂಲಿ ಮಾಡಲಾಗಿದೆಯೇ, ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಸ್ಪಷ್ಟ ಮಾಹಿತಿ ಇಲ್ಲದಿರುವುದು ನಿರ್ದೇಶಕರ ಬೇಜವಾಬ್ದಾರಿ ತನಕ್ಕೆ ನಿದರ್ಶನವಾಗಿದೆ.

ಅಧಿಕಾರಿಗಳು ಮೌನ: ಈ ಸಂಬಂಧ ನಿರ್ದೇಶಕರು ಇದಕ್ಕೂ ತಮಗೂ ಸಂಬಂಧವಿಲ್ಲವೇನೂ ಎಂಬಂತೆ ವರ್ತಿಸುತ್ತಿದ್ದಾರೆ. ಸಹಕಾರ ಇಲಾಖೆಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಅವರು ಸಹ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ನಾಚಿಕೆಗೇಡಿನ ವಿಚಾರ ಎಂದು ರೈತ ರಾಯಪ್ಪಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಚ್ಚೆತ್ತುಕೊಳ್ಳಿ: ನಿರ್ದೇಶಕರು ಹಣ ದುರ್ಬಳಕೆ ಬಗ್ಗೆ ಮಾಹಿತಿ ಇಲ್ಲ ಎಂಬ ಬೇಜವಾಬ್ದಾರಿ ಉತ್ತರವನ್ನು ನೀಡುವ ಬದಲು, ಇನ್ನಾದರೂ ಎಚ್ಚೆತ್ತುಕೊಂಡು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಷೇರುದಾರರು ಆಗ್ರಹಿಸಿದ್ದಾರೆ. ಲಾಭವೆಲ್ಲ ನಷ್ಟದ ಪಾಲು: ಕುದೂರು ವಿಎಸ್‌ಎಸ್‌ ಎನ್‌ ಈ ವರ್ಷ 311273 ರೂ. ಲಾಭ ಗಳಿಕೆಯಾಗಿದ್ದರೂ, ಇಂದಿನ ಸಾಲಿನ ನಷ್ಟದ ಹಣವೇ ಸುಮಾರು 1 ಕೋಟಿ 3 ಲಕ್ಷ 76 ಸಾವಿರ ಇದೆ. ಈ ವರ್ಷದ ಲಾಭವನ್ನು ಅದರಲ್ಲಿ ಕಳೆದರೆ 2021-22 ಸಾಲಿನ ಸಂಘವು 1 ಕೋಟಿ 65 ಸಾವಿರ ರೂ.ನಷ್ಟ ಅನುಭವಿ ಸುವಂತಾಗಿದೆ. ಪ್ರತಿ ವರ್ಷ ಗಳಿಸಿದ ಲಾಭವೆಲ್ಲ ನಷ್ಟದ ಪಾಲಾಗುತ್ತಿದೆ ಎಂದು ತಿಳಿದು ಬಂದಿದೆ.

71 ಲಕ್ಷಕ್ಕೂ ಅಧಿಕ ಹಣ ದುರ್ಬಳಕೆ ಆಗಿರುವುದು 1998-2000 ಸಾಲಿನ ಆಡಳಿತ ಮಂಡಳಿ ಅವಧಿಯಲ್ಲಿ. ನಮ್ಮ ಅಧಿಕಾರದ ಅವಧಿಯಲ್ಲಿ ಅಲ್ಲ. ದುರ್ಬಳಕೆ ಕುರಿತು ಯಾವ ಅಧಿಕಾರಿಯೂ ನಿರ್ದೇಶಕರಿಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ● ನಟರಾಜು, ಅಧ್ಯಕ್ಷ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ

ಈ ಸಾಲಿನ ನಿರ್ದೇಶಕರು ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳು ಕಳೆಯುತ್ತಿದೆ. ಲಕ್ಷಾಂತರ ರೂ. ದುರ್ಬಳಕೆ ಹಣ ವಸೂಲಿ ಮಾಡುವಲ್ಲಿ ಹಾಗೂ ಕಾನೂನು ಕ್ರಮ ಕೈಗೊಳ್ಳವಲ್ಲಿ ನಿರ್ದೇಶಕರು ಮೌನವಹಿಸಿರುವುದೇಕೆ? ರಾಯಪ್ಪಗೌಡ, ರೈತ

 

ಕೆ.ಎಸ್‌.ಮಂಜುನಾಥ್‌

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.