ಮಿಟ್ಸುಬಿಷಿ ಕಂಪನಿ ಬಂದ್‌: ಕಾರ್ಮಿಕರು ಕಂಗಾಲು


Team Udayavani, Nov 8, 2022, 4:16 PM IST

ಮಿಟ್ಸುಬಿಷಿ ಕಂಪನಿ ಬಂದ್‌: ಕಾರ್ಮಿಕರು ಕಂಗಾಲು

ರಾಮನಗರ: ಕಾರ್ಮಿಕರಿಗೆ ಯಾವುದೇ ಮುನ್ಸೂಚನೆ ನೀಡದೆ, ಏಕಾಏಕಿ ಮಿಟ್ಸುಬಿಷಿ ಕಂಪನಿಯನ್ನು ಬಂದ್‌ ಮಾಡಲಾಗಿದ್ದು, ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವಮಿಟ್ಸುಬಿಷಿ ಎಲೆಕ್ಟ್ರಿಕ್‌ ಇಂಡಿಯಾ ಪ್ರೈ. ಲಿಮಿಟೆಡ್‌ ಕಂಪನಿ ಏಕಾಏಕಿ ಲಾಕ್‌ಔಟ್‌ ಮಾಡಿದ್ದು, ಕಾರ್ಮಿಕರನ್ನು ಅಂತಂತ್ರಗೊಳಿಸಿದ್ದಾರೆ. ಇಲ್ಲಿಂದ ಬೆಮೆಲ್‌, ಮೆಟ್ರೋಗೆ ಅಗತ್ಯವಾದ ಕೆಲ ಎಲೆಕ್ಟ್ರಾನಿಕ್‌ ವಸ್ತುಗಳನ್ನ ಸರಬರಾಜು ಮಾಡುವ ಕಂಪನಿ ಇದಾಗಿತ್ತು. ಪ್ರತಿ ದಿನದಂತೆ ಶುಕ್ರವಾರ 54 ಕಾಯಂ ಕಾರ್ಮಿಕರು ಕೆಲಸ ಮುಗಿಸಿ, ಸಂಜೆ ಮನೆಗೆ ತೆರಳಿದ್ದಾರೆ. ಶನಿವಾರ 54 ಕಾರ್ಮಿಕರ ಬ್ಯಾಂಕ್‌ ಖಾತೆಗೆ ತಲಾ 4 ಲಕ್ಷ ರೂ. ಹಣ ಕಂಪನಿ ಕಡೆಯಿಂದ ಜಮಾವಣೆಯಾಗಿದೆ. ಯಾವಉದ್ದೇಶಕ್ಕಾಗಿ ಹಣ ಬಂದಿದೆ ಎಂದು ವಿಚಾರಿಸಲು ಕಂಪನಿಯ ಎಚ್‌.ಆರ್‌ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೆ, ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಎನ್ನುತ್ತಾರೆ ಉದ್ಯೋಗಿಗಳು.

ಜೊತೆಗೆ ಸೋಮವಾರ ಕಾರ್ಮಿಕರನ್ನು ಪಿಕಪ್‌ ಮಾಡಲು ಕಂಪನಿಯಿಂದ ಕ್ಯಾಬ್‌ ಕೂಡ ಬಂದಿರಲಿಲ್ಲ. ಅದಕ್ಕಾಗಿ ಎಲ್ಲರೂ ತಮ್ಮ ತಮ್ಮ ವಾಹನಗಳಲ್ಲೇ ಕಂಪನಿಗೆ ಆಗಮಿಸಿದ್ದಾರೆ. ಆದರೆ, ಕಾರ್ಮಿಕರು ಒಳ ಬರುತ್ತಿದ್ದಂತೆ ಗೇಟ್‌ನಿಂದ ಒಳಗೆ ಬಿಡದ ಭದ್ರತಾಸಿಬ್ಬಂದಿ, ಗೇಟ್‌ ಲಾಕ್‌ ಮಾಡಿ, ಎಲ್ಲರನ್ನೂ ಹೊರಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಕಾರ್ಮಿಕರು ಕಂಗಾಲು: ನಮ್ಮ ಪೂರ್ವಾನುಮತಿಯಿಲ್ಲದೆ ಯಾವುದೇ ವ್ಯಕ್ತಿಗಳು ಕಂಪನಿಯ ಆವರಣಕ್ಕೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂಬುದಾಗಿ ಗೇಟ್‌ ಬಳಿ ಕಂಪನಿ ವತಿಯಿಂದ ನೋಟಿಸ್‌ ಅಂಟಿಸಲಾಗಿದೆ. ಇದನ್ನು ಕಂಡ ಕಾರ್ಮಿಕರು ಕಂಗಾಲಾಗಿದ್ದು, ದಿಕ್ಕುಕಾಣದಂತಾಗಿದೆ. ಇದು ಪ್ರತಿಷ್ಠಿತ ಕಂಪನಿಗಳಲ್ಲೊಂದಾಗಿದ್ದು, ಈ ಕಂಪನಿಯಲ್ಲಿ ಬೆಳಗಾವಿ, ಬಿಜಾಪುರ, ಮಂಡ್ಯ, ಹಾಸನ ಸೇರಿ ಹಲವು ಹೊರ ಜಿಲ್ಲೆಗಳಿಂದ ಬಂದು ಕೆಲಸಕ್ಕೆ ಸೇರಿದ್ದ ಕಾರ್ಮಿಕರು ದುಡಿಯುತ್ತಿದ್ದರು.

ಆದರೆ, ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಲಾಕ್‌ಔಟ್‌ ಮಾಡಿರುವುದನ್ನ ನೋಡಿ ಕಾರ್ಮಿಕರಿಗೆ ಆಘಾತವಾಗಿದೆ. ಸೋಮವಾರ ಸಂಜೆ ವೇಳೆಗೆ ಕಂಪನಿಪರವಾಗಿ ಅಧಿಕಾರಿಗಳು ಬಂದು ಮಾತನಾಡುವುದಾಗಿ ಕಾರ್ಮಿಕರಿಗೆ ಸೂಚಿಸಲಾಗಿತ್ತು. ಆದರೂ, ಮಾತುಕತೆಗೆ ಯಾವೊಬ್ಬ ಅಧಿಕಾರಿಗಳು ಬಂದಿಲ್ಲ ಎಂದು ತಿಳಿದು ಬಂದಿದೆ.

ಯಾವುದೇ ಮುನ್ಸೂಚನೆ ನೀಡಿಲ್ಲ:  ನಮ್ಮ ಬದುಕು ಕಟ್ಟಿಕೊಳ್ಳಬೇಕೆಂಬ ಮಹದಾಸೆಯಿಂದ ಕಂಪನಿಯಲ್ಲಿ ಸೇರಿದ್ದೆವು. ಆದರೆ, ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಂದ್‌ ಮಾಡಿ, ನಮ್ಮ ಹೊಟ್ಟೆ ಮೇಲೆ ಹೊಡೆಯುವ ಹುನ್ನಾರ ನಡೆಸಿದ್ದಾರೆ. ಕಂಪನಿಯಲಾಕ್‌ಔಟ್‌ ನಿರ್ಧಾರಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಅದೇನೇ ಇದ್ದರೂ,ನಮಗೆ ನ್ಯಾಯ ಸಿಗಬೇಕು. ಕಂಪನಿಯಲ್ಲಿ ಕೆಲಸ ಬೇಕು ಎಂದು ಕಂಪನಿಯ ನೊಂದ ಕಾರ್ಮಿಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.