ಬಾಲಕೃಷ್ಣ ಬುಲ್ಡೋಜರ್‌ ಪಕ್ಷ ಕಟ್ಟಿಕೊಳ್ಳಲಿ


Team Udayavani, May 31, 2022, 4:19 PM IST

ಬಾಲಕೃಷ್ಣ ಬುಲ್ಡೋಜರ್‌ ಪಕ್ಷ ಕಟ್ಟಿಕೊಳ್ಳಲಿ

ಮಾಗಡಿ: ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಬುಲ್ಡೋಜರ್‌ ಪಕ್ಷ ಕಟ್ಟಿಕೊಳ್ಳಲಿ, ನಮ್ಮ ತಕರಾರೇನುಇಲ್ಲ ಎಂದು ಮಾಜಿ ಶಾಸಕರ ವಿರುದ್ಧ ಶಾಸಕ ಎ. ಮಂಜುನಾಥ್‌ ವ್ಯಂಗ್ಯವಾಡಿದರು.

ಪಟ್ಟಣದ ಪುರಸಭೆಯ ಶಾಸಕರ ಕಚೇರಿಯಲ್ಲಿನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಮತ್ತು ಅವರತಂದೆ ದಿ.ಚೆನ್ನಪ್ಪ ಅವರು ಸಹ ಎಲ್ಲ ಪಕ್ಷದಲ್ಲಿಯೂಅಧಿಕಾರ ಅನುಭವಿಸಿದ್ದಾಗಿದೆ. ಎಚ್‌.ಸಿ.ಬಾಲಕೃಷ್ಣಅವರು ಮೊದಲು ಬಿಜೆಪಿ ಸೇರಿದರು. ಜೆಡಿಎಸ್‌ಪಕ್ಷವೂ ಆಯಿತು. ಈಗ ಕಾಂಗ್ರೆಸ್‌ನಲ್ಲಿದ್ದಾರೆ.ಪಕ್ಷಾಂತರ ಮಾಡಲು ಈಗ ಅವರಿಗೆ ಬೇರೆ ಪಕ್ಷವೇಇಲ್ಲ, ಹೀಗಾಗಿ ಅವರೇ ಬುಲ್ಡೋಜರ್‌ ಪಕ್ಷವನ್ನುಕಟ್ಟಿಕೊಂಡು ರಾಜಕೀಯ ಮಾಡಲಿ ನಾವ್ಯಾರು ಪ್ರಶ್ನಿಸುವುದಿಲ್ಲ ಎಂದು ಹೇಳಿದರು.

10 ಕೋಟಿ ಮಾರ್ಕೆಟಿಂಗ್‌ ಮಾಜಿ ಶಾಸಕ: ನನ್ನ ರಾಜಕೀಯ ಗುರುಗಳು ಮಾಜಿ ಸಚಿವ ಎಚ್‌.ಎಂ.ರೇವಣ್ಣ ಪೋಟೊ ನನ್ನ ಕಚೇರಿಯಲ್ಲಿ ನಾನುಹಾಕಿಕೊಂಡರೆ ತಪ್ಪು. ಇವರು ಜೆಡಿಎಸ್‌ನಲ್ಲಿದ್ದು,ರಾಜ್ಯ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆಓಟುಹಾಕಿದ್ದು ಸರಿಯೇ ಎಂದು ಪ್ರಶ್ನಿಸಿದರು.

ನನ್ನನ್ನು ಪ್ರಶ್ನಿಸುವ ಮಾಜಿ ಶಾಸಕರು, ಜೆಡಿಎಸ್‌ನಲ್ಲಿದ್ದುಕೊಂಡು 2018ರಲ್ಲಿ ನಡೆದ ರಾಜ್ಯ ಸಭಾಚುನಾವಣೆಯಲ್ಲಿ ಏಕೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗೆಮತ ಹಾಕಿ 10 ಕೋಟಿ ಹಣಕ್ಕೆ ತಲೆ ಮಾರಿಕೊಂಡಿದ್ದು,ಜಗಜಾಹಿರಾತಾಗಿದೆ ಎಂದು ಲೇವಡಿ ಮಾಡಿದಅವರು, ಹಿರಿಯ ರಾಜಕೀಯ ಮುತ್ಸದ್ಧಿ, ತಂದೆಸಮಾನರು ಹೀಗಾಗಿ ನಾನು ಅವರು ಎಲ್ಲೇ ಸಿಕ್ಕಿದರೂಕಾಲಿಗೆ ಬಿದ್ದು, ಆಶೀರ್ವಾದ ಪಡೆಯುವುದು ನಮ್ಮಸಂಸ್ಕೃತಿ. ಇದನ್ನು ಪ್ರಶ್ನೆಸುವ ಮಾಜಿ ಶಾಸಕರರಾಜಕೀಯ ವ್ಯಭಿಚಾರ ಏನೆಂದು ಜನತೆಗೆ ಗೊತ್ತಿದೆ ಎಂದು ಹೇಳಿದರು.

ಮಾಜಿ ಶಾಸಕರ ಪತ್ರಕ್ಕೆ ಕಿಮ್ಮತ್ತಿಲ್ಲ: ಮಾಜಿ ಸಚಿವ ಎಚ್‌.ಎಂ.ರೇವಣ್ಣ ಅವರಿಗೆ ಎಂಎಲ್‌ಸಿ ಸ್ಥಾನತಪ್ಪಿಸಲು ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಅವರುನನ್ನೊಂದಿಗೆ ಆತ್ಮೀಯವಾಗಿದ್ದಾರೆ ಎಂದು ಕೆಪಿಸಿಸಿಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯಅವರಿಗೆ ಪತ್ರ ಬರೆದು ಅವರಿಗೆ ದ್ರೋಹ ಬಗೆದಿದ್ದಾರೆ. ಮುಂದಿನ ದಿನಗಳಲ್ಲಿ ಅದರ ಪ್ರತಿಫ‌ಲ ಊಟ ಮಾಡುತ್ತಾರೆ. ಮಾಜಿ ಶಾಸಕರು ಬರೆದಿರುವ ಪತ್ರಸೋನಿಯಾ ಗಾಂಧಿಗೂ ಹೋಗಿಲ್ಲ, ಇಟಲಿಗೂಹೋಗಿಲ್ಲ, ಇವರು ಬರೆದ ಪತ್ರಕ್ಕೆ ಕಿಮ್ಮತ್ತಿಲ್ಲ ಎಂದು ಶಾಸಕರು ಜರಿದ ಅವರು, ನಾನು ತಾಲೂಕಿನಸರ್ವಾಂಗೀಣ ಅಭಿವೃದ್ಧಿಗಾಗಿ ಶಾಸಕನಾಗಿದ್ದೇನೆ.ಅವರಂತೆ ಮಾರ್ಕೆಟಿಂಗ್‌ ಶಾಸಕನಲ್ಲ. ಪ್ರಥಮವಾಗಿಶಾಸನಾದ ಮೇಲೆ 5 ವರ್ಷದಲ್ಲಿ ಏನೇಲ್ಲ ಅಭಿವೃದ್ಧಿ ಮಾಡಿದ್ದೇನೆ ಎಂದು ಚುನಾವಣೆ ವೇಳೆ ಅಂಕಿ-ಅಂಶಸಮೇತ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ. ಅವರುಪ್ರಥಮ ವರ್ಷದಲ್ಲಿ ಏನೆಲ್ಲ ಅಭಿವೃದ್ಧಿ ಮಾಡಿದ್ದೇನೆಎಂದು ದಾಖಲೆ ನೀಡಲಿ ಎಂದು ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ವಿರುದ್ಧ ಶಾಸಕರು ಟೀಕಾ ಪ್ರಹಾರ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಪುರಸಭಾ ಸದಸ್ಯರಾದ ಅನಿಲ್‌ ಕುಮಾರ್‌, ಎಂ.ಎನ್‌.ಮಂಜುನಾಥ್‌, ಮಾಜಿಉಪಾಧ್ಯಕ್ಷ ಎಂ.ಬಿ.ಮಹೇಶ್‌, ಜಿ.ರೂಪೇಶ್‌ಕುಮಾರ್‌, ಜೆಡಿಎಸ್‌ ಮುಖಂಡರಾದ ಜುಟ್ಟನಹಳ್ಳಿಜಯರಾಮ್‌, ಬಿ.ಆರ್‌.ಗುಡ್ಡೇಗೌಡ, ಚಿಕ್ಕಣ್ಣ, ಸೋಮಶೇಖರ್‌, ಚೆನ್ನಕೇಶವಸ್ವಾಮಿ, ಕುಮಾರ್‌ ಇತರರು ಹಾಜರಿದ್ದರು.

ಮಾಜಿ ಸಚಿವ ಎಚ್‌.ಎಂ.ರೇವಣ್ಣ ಅವರಿಗೆ ಎಂಎಲ್‌ಸಿ ಸ್ಥಾನ ತಪ್ಪಿಸಲು ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಅವರು ನನ್ನೊಂದಿಗೆ ಆತ್ಮೀಯವಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌,ಸಿದ್ದರಾಮಯ್ಯಗೆ ಪತ್ರ ಬರೆದು ಅವರಿಗೆ ದ್ರೋಹ ಬಗೆದಿದ್ದಾರೆ. ಮುಂದಿನ ದಿನಗಳಲ್ಲಿ ಅದರ ಪ್ರತಿಫ‌ಲ ಊಟಮಾಡುತ್ತಾರೆ. ಮಾಜಿ ಶಾಸಕರು ಬರೆದಪತ್ರ ಸೋನಿಯಾ ಗಾಂಧಿಗೂ ಹೋಗಿಲ್ಲ,ಇಟಲಿಗೂ ಹೋಗಿಲ್ಲ, ಇವರು ಬರೆದ ಪತ್ರಕ್ಕೆ ಕಿಮ್ಮತ್ತಿಲ್ಲ. -ಎ.ಮಂಜುನಾಥ್‌, ಶಾಸಕ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.