ಕೈಗಾರಿಕೆ ಸ್ಥಾಪನೆ ಕೈಬಿಡುವ ಪ್ರಶ್ನೆ ಸರ್ಕಾರಕ್ಕೆ ಬಿಟ್ಟಿದ್ದು: ಶಾಸಕ


Team Udayavani, Oct 2, 2022, 3:29 PM IST

ಕೈಗಾರಿಕೆ ಸ್ಥಾಪನೆ ಕೈಬಿಡುವ ಪ್ರಶ್ನೆ ಸರ್ಕಾರಕ್ಕೆ ಬಿಟ್ಟಿದ್ದು: ಶಾಸಕ

ಮಾಗಡಿ: ಕೈಗಾರಿಕೆ ಕೈಬಿಡುವ ಪ್ರಶ್ನೆ ಸರ್ಕಾರಕ್ಕೆ ಬಿಟ್ಟಿದ್ದು, ಭೂಸ್ವಾಧೀನ ವಿರೋಧಿಸುತ್ತಿದ್ದವರೇ ಈಗ ಸರಿಯಾದ ಬೆಲೆ ನಿಗದಿಪಡಿಸಲು ಸಭೆ ಕರೆದು ಚರ್ಚಿಸುವಂತೆ ನಮ್ಮ ಬಳಿ ಬಂದು ಮನವಿ ಮಾಡಿದ್ದಾರೆ ಎಂದು ಶಾಸಕ ಎ. ಮಂಜುನಾಥ್‌ ತಿಳಿಸಿದರು.

ತಾಲೂಕಿನ ಜ್ಯೋಗಿಪಾಳ್ಯದಲ್ಲಿ ಟೊಯೊಟಾ ಅಂಗ ಸಂಸ್ಥೆ ಬೊಸ್ಕೋ ಆಟೋಮ್ಯಾಟಿವ್‌ ಇಂಡಿಯಾ ಲಿ.ನಿಂದ 12 ಲಕ್ಷ ರೂ.ನಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು. ಸಭೆ ಕರೆಯುತ್ತೇನೆ, ದರ ನಿಗದಿಯಾಗುತ್ತದೆ, ನೀವು ಒಪ್ಪಿದರೆ ಕೆಐಎಡಿಬಿಗೆ ಕೊಡಬಹುದು. ಇಲ್ಲದಿದ್ದರೆ ವಜಾ ಆಗುತ್ತದೆ ಎಂದು ಹೇಳಿದ್ದೇನೆ. ಹೋರಾಟಗಾರರೇ ಸರಿಯಾದ ದರ ಕೊಟ್ಟರೆ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಸದನ ನಡೆಯುತ್ತಿದೆ. ಮುಗಿದ ಕೂಡಲೇ ಇನ್ನು 15 ದಿನದಲ್ಲಿ ಸಭೆ ಕರೆಯಲು ತಿಳಿಸುತ್ತೇನೆ ಎಂದು ಹೇಳಿದರು.

ಹಕ್ಕು ಪತ್ರ ವಿತರಣೆಗೆ ಕ್ರಮ: ಗೋಮಾಳದಲ್ಲಿ ಉಳಿಮೆ ಮಾಡುತ್ತಿರುವ ರೈತರು ಫಾರಂ ನಂ.53ರಲ್ಲಿ ಅರ್ಜಿ ಸಲ್ಲಿಸದವರಿಗೆ ಹಕ್ಕುಪತ್ರ ನೀಡುವುದಾಗಿ ಸರ್ಕಾರವೇ ಆದೇಶ ಮಾಡಿದೆ. ಫಾರಂ ನಂ.57ಕ್ಕೆ ಸದ್ಯಕ್ಕೆ ಅವಕಾಶವಿಲ್ಲ, ಸರ್ಕಾರ ಆದೇಶಕ್ಕಾಗಿ ಈಗಾಗಲೇ ತಯಾರಿ ಮಾಡಿಕೊಳ್ಳ ಲಾಗುತ್ತಿದೆ. ಗೋಮಾಳದಲ್ಲಿ ಮನೆ ಕಟ್ಟಿಕೊಂಡಿರು ವವರಿಗೆ 94 ಸಿ ಅಡಿ ಹಕ್ಕುಪತ್ರ ವಿತರಿಸಲು ಕ್ರಮವಹಿಸಿದ್ದೇನೆ.

ನೈಜತೆ ಪರಿಶೀಲಿಸಿ ಕ್ರಮ: ಹೊನ್ನಾಪುರದ ಬಳಿ ವಾಲ್ಮೀಕಿ ಸಮುದಾಯಕ್ಕೆ ಜಿಲ್ಲಾಧಿಕಾರಿಗಳು ನೀಡುವ ಭೂಮಿಯನ್ನು ತಹಶೀಲ್ದಾರ್‌ ಬೇರೆ ಯವರ ಹೆಸರಿಗೆ ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂಬ ದೂರು ಕೇಳಿ ಬಂದಿದೆ. ಇದರ ಬಗ್ಗೆ ನೈಜತೆ ಪರಿಶೀಲಿಸಿ ಕ್ರಮಕ್ಕೆ ಅಧಿಕಾರಿಗಳಗೆ ಸೂಚನೆ ನೀಡಿದ್ದೇನೆ.

ತಪ್ಪಿಸ್ಥರ ವಿರುದ್ಧ ಕ್ರಮ: ಮಾಗಡಿ ಪುರಸಭೆಯಲ್ಲಿ ಖಾತೆ ವಿಳಂಬ ನೀತಿಯಿದೆ ಎಂಬ ಪ್ರಶ್ನೆಗೆ ಇ- ಖಾತೆಯಲ್ಲಿ ಗೊಂದಲವಿದೆ. ಬೋಗಸ್‌ ಖಾತೆಗೆ ಅಧಿಕಾರಿಗಳ ಮೇಲೆ ಒತ್ತಡಕ್ಕೆ ಯತ್ನಿಸಿದವರ ಬಗ್ಗೆ ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡ ಲಾಗಿದೆ. ಶೀಘ್ರ ತನಿಖೆ ಆಗುತ್ತದೆ. ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದು ಶಾಸಕರು ವಿವರಿಸಿದರು.

5 ಕೋಟಿ ರೂ. ಕಾಮಗಾರಿಗೆ ಚಾಲನೆ: ಮಾಗಡಿ ತಾಲೂಕಿನ ಬಾಚೇನಹಟ್ಟಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ಕೋಟಿ ರೂ.ನ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿ ಚಾಲನೆ ನೀಡಿದ್ದೇನೆ ಎಂದು ತಿಳಿಸಿದ ಶಾಸಕ ಎ.ಮಂಜುನಾಥ್‌ ಅವರು, ನಾನು ಚುನಾವಣೆ ಸ್ಪರ್ಧಿಸಿದ್ದ ವೇಳೆ ಆ ವ್ಯಾಪ್ತಿಗೆ ಮತ ಕೇಳಲು ಪ್ರಚಾರಕ್ಕೆ ಹೋಗಲೇ ಇಲ್ಲ, ನನ್ನ ಪತ್ನಿ ಲಕ್ಷ್ಮೀ ಅವರು ಮುಖಂಡರು, ಕಾರ್ಯಕರ್ತರೊಂದಿಗೆ ಪ್ರಚಾರ ಮಾಡಿದ್ದರು. ಆ ಭಾಗದ ಜನರು ನನಗೆ ಹೆಚ್ಚಿನ ಮತ ಕೊಟ್ಟು ಗೆಲ್ಲಿಸಿದ್ದಾರೆ. ಅವರ ಋಣ ನನ್ನ ಮೇಲಿದೆ. ಆ ಭಾಗದಲ್ಲಿ 5 ಕೋಟಿ ರೂ.ಗೂ ಹೆಚ್ಚು ಅನುದಾನ ತಂದು ತಗಚಕುಪ್ಪೆ, ಭೋಗನಪಾಳ್ಯ, ದೊಡ್ಡ ಮಸ್ಕಲ್‌, ಭೈರೇಗೌಡನಪಾಳ್ಯ, ರಾಮಯ್ಯಪಾಳ್ಯ, ಗುಡ್ಡಯ್ಯಪಾಳ್ಯ, ವರದೇನಹಳ್ಳಿ, ಸಿಂಗದಾಸನಹಳ್ಳಿ ಗ್ರಾಮಗಳ ಸಂಪೂರ್ಣ ಕಾಂಕ್ರೀಟ್‌ ರಸ್ತೆ, ಚರಂಡಿ, ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿ ದ್ದೇನೆ. ಎಲ್ಲರೂ ಸಹಕರಿಸುವಂತೆ ಶಾಸಕರು ಮನವಿ ಮಾಡಿದರು.

ಜೆಡಿಎಸ್‌ ಯುವ ಮುಖಂಡ ದವಳಗಿರಿ ಚಂದ್ರಣ್ಣ, ಪಂಚೆ ರಾಮಣ್ಣ, ಹನುಮಾಪುರದ ಚಿಕ್ಕಣ್ಣ, ರಂಗಸ್ವಾಮಿ, ರಂಗ ನಾಥ್‌, ವೆಂಕಟೇಶ್‌, ಬಸವರಾಜು, ಹನುಮಾ ನಾಯಕ್‌, ಕಂಬಯ್ಯ, ಮರಲಗೊಂಡಲದ ಪಾರ್ವತಮ್ಮ, ರಂಗೇಗೌಡ, ಜ್ಯೋತಿಪಾಳ್ಯದ ರಾಮಣ್ಣ, ರಾಜಣ್ಣ, ಪೋಲೋಹಳ್ಳಿ ಕೆಂಚಪ್ಪ, ಬುಡ್ಡಯ್ಯ, ಯುವಜೆಡಿಎಸ್‌ ಅಧ್ಯಕ್ಷ ವಿಜಯ ಕುಮಾರ್‌, ರಾಜು, ಶಿವಣ್ಣ ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.