ಶಾಸಕರೇ, ಈ ಶಾಲೆ ಅವಸ್ಥೆ ಕಣ್ತೆರೆದು ನೋಡಿ

ಕರ್ನಾಟಕ ಪಬ್ಲಿಕ್‌ ಶಾಲೆ ಆವರಣದಲ್ಲಿ ಮಳೆ ಬಂದರೆ ಅವಾಂತರ

Team Udayavani, Jun 10, 2019, 12:12 PM IST

ramanagar-tdy-1..

ಕುದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿರುವ ಸೂಕ್ತ ನಿರ್ವಹಣೆ ಕಾಣದ ಗಬ್ಬು ನಾರುತ್ತಿರುವ ಚರಂಡಿ.

ಕುದೂರು: ಶೈಕ್ಷಣಿಕ ವರ್ಷಾಂಭದಲ್ಲೇ ಗ್ರಾಪಂ ಮತ್ತು ಶಿಕ್ಷಣ ಇಲಾಖೆ ಅಸಡ್ಡೆಯಿಂದ ಶಾಲಾ , ಕಾಲೇಜು ವಿದ್ಯಾರ್ಥಿಗಳಿಗೆ ಅನಾರೋಗ್ಯದ ಭೀತಿ ಎದುರಾಗಿದೆ.

ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಸಿರು ತಳಿರು ತೋರಣಗಳನ್ನು ಕಟ್ಟಿ ಮಕ್ಕಳಿಗೆ ಸಿಹಿ ಊಟ ಬಡಿಸಿ ಸ್ವಾಗತಿಸಿದರೆ ಕುದೂರಿನ ಕರ್ನಾಟಕ ಪಬ್ಲಿಕ್‌ ಶಾಲೆ ಇದಕ್ಕೆ ಅಪವಾದದಂತಿದೆ. ಶಾಲೆಯ ಅಂಗಳ ಮಳೆ ಬಂತೆಂದರೆ ಕೆರೆಯತಾಗುತ್ತದೆ. ಇದರಲ್ಲಿ ಜಡ ಸಸ್ಯಗಳು ಬೆಳೆದು ಕಸಕಡ್ಡಿ ಕೊಳೆತು ದುರ್ನಾತ ಬೀರುತ್ತದೆ.

ಸಮಸ್ಯೆ: ಕುದೂರಿನ ಕರ್ನಾಟಕ ಪಬ್ಲಿಕ್‌ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಮಳೆ ಬಂತೆಂದರೆ ಕೆಸರುಗದ್ದೆಯಂತಾಗುತ್ತದೆ. ಇದರಲ್ಲಿ ಬೇಡದ ಗಿಡಗಂಟಿಗಳು ಬೆಳೆದು ಕೊಳೆತು ದುರ್ನಾತ ಬೀರುತ್ತಿವೆ.

ಕೊಳೆತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಜೊತೆಗೆ ವಿಷಪೂರಿತ ಜಂತುಹುಳುಗಳು ಕಾಣಿಸಿಕೊಳ್ಳುತ್ತಿವೆ. ಇಷ್ಟೆಲ್ಲಾ ಅವಾಂತರವಿದ್ದರೂ ಸೂಕ್ತ ಚರಂಡಿ ನಿರ್ಮಿಸಿ ಶಾಲಾ ಆವರಣ ಸ್ವಚ್ಛಗೊಳಿಸಬೇಕು ಎನ್ನುವ ಮನಸ್ಥಿತಿ ಗ್ರಾಪಂಗೆ ಇಲ್ಲವಾಗಿದೆ. ಇದರಿಂದಾಗಿ ಶಾಲಾ ಮಕ್ಕಳು ಅನಾರೋಗ್ಯದ ಭೀತಿ ಎದುರಿಸುವಂತಾಗಿದೆ.

ಚರಂಡಿ ಸಮಸ್ಯೆ: ಶಾಲೆ ಆವರಣದಲ್ಲಿ ಚರಂಡಿ ಅವ್ಯವಸ್ಥೆಯಾಗಿದೆ. ಇದನ್ನು ಸರಿಪಡಿಸಬೇಕಾದದ್ದು ಗ್ರಾಪಂ ಕರ್ತವ್ಯ. ಆದರೆ ಗ್ರಾಪಂ ಅಧಿಕಾರಿಗಳಾಗಲಿ, ಅಧ್ಯಕ್ಷರಾಗಲಿ ಇತ್ತ ಗಮನ ಹರಿಸುತ್ತಿಲ್ಲ. ಉಪನ್ಯಾಸಕರು ತಮ್ಮ ಕೈಲಾಗುವ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದು. ಆದರೆ. ಮೈದಾನ ಸಮತಟ್ಟು, ಚರಂಡಿ ಸಮಸ್ಯೆ ಮುಂತಾದವುಗಳನ್ನು ಉನ್ನತ ಮಟ್ಟದಲ್ಲಿ ಕೈಗೊಳ್ಳುವ ಕಾರ್ಯ. ಈ ಬಗ್ಗೆ ಹಲವು ಬಾರಿ ಗ್ರಾಪಂಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಗ್ರಾಪಂ ಅಧಿಕಾರಿಗಳು ಎಚ್ಚೆತ್ತು ಸಮಸ್ಯೆ ಬಗೆಹರಿಸಬೇಕು ಎಂದು ಕಾಲೇಜು ಸಿಬ್ಬಂದಿ ಮನವಿ ಮಾಡಿದ್ದಾರೆ,

ಕ್ರೀಡೆಗೂ ಹಿನ್ನಡೆ: ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಕ್ರೀಡಾಪಟುಗಳಿದ್ದು ಅವರಿಗೆ ಸೂಕ್ತ ತರಬೇತಿ ಅವಶ್ಯಕತೆಯಿದೆ. ಸರಿಯಾಗಿ ನಿರ್ವಹಣೆ ಕಾಣದ ಮೈದಾನದಿಂದ ಕ್ರೀಡಾ ಚಟುವಟಿಕೆಗೆ ಹಿನ್ನಡೆಯಾಗಿದೆ. ಗ್ರಾಮೀಣ ಪ್ರತಿಭೆಗಳಿಗೆ ಸರಿಯಾದ ತರಬೇತಿ ಪಡೆಯಲು ಸಾಧ್ಯವಾಗದೆ ಕಮರಿ ಹೋಗುತ್ತಿದ್ದಾರೆ. ಮಳೆ ಬಂದರೆ ನೀರು ತುಂಬಿ ಕೆರೆಯಂತೆ ಮಾರ್ಪಾಡಾಗುತ್ತದೆ. ಇದರಿಂದ ಮೈದಾನದಲ್ಲಿ ಕ್ರೀಡಾಭ್ಯಾಸ ಹೇಗೆ ಸಾಧ್ಯ ಎಂಬುದು ಕ್ರೀಡಾಭಿಮಾನಿಗಳ ಪ್ರಶ್ನೆಯಾಗಿದೆ.

ಶಾಸಕರಿಗೆ ಪುನರ್ಜನ್ಮ ನೀಡಿದ ಕ್ಷೇತ್ರವೇ ನಿರ್ಲಕ್ಷ್ಯ:

ಜಿಪಂ ಮತ್ತು ಶಾಸಕರಾಗಿ ಎ.ಮಂಜುನಾಥ್‌ ಅವರು ಗೆಲುವು ಸಾಧಿಸಲು ರಾಜಕೀಯವಾಗಿ ಪುನರ್ಜನ್ಮ ನೀಡಿದ ಕ್ಷೇತ್ರ ಕುದೂರು. ಹೋಬಳಿ ಕೇಂದ್ರದ ಸರ್ಕಾರಿ ಪಬ್ಲಿಕ್‌ ಶಾಲೆಯಲ್ಲೇ ಇಂತಹ ಪರಿಸ್ಥತಿ ಇದ್ದರೂ ಜನಪ್ರತಿನಿಧಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಮಳೆ ಬಂತೆಂದರೆ ಕಾಲೇಜಿಗೆ ಬರಲು ಮುಜುಗರವಾಗುತ್ತದೆ. ಈ ಕಾಲೇಜಿಗೆ ಏಕಾದರೂ ಸೇರಿಕೊಂಡೆವೂ ಎಂಬ ಭಾವನೆ ಮೂಡುತ್ತದೆ. ಅತ್ತ ಇಲಾಖೆಯೂ ತಲೆ ಕೆಡಿಸಿಕೊಳ್ಳುತ್ತಿಲ್ಲ, ಇತ್ತ ಗ್ರಾಪಂ ಚರಂಡಿ ನಿರ್ಮಾಣದಲ್ಲಿ ಜಾಣ ಕುರುಡು ಪ್ರದರ್ಶಿಸುತ್ತಿದೆ. ಶಾಸಕರು ನಮ್ಮ ಕಾಲೇಜಿನ ಸಮಸ್ಯೆ ಬಗೆಹರಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಇದ್ದೇವೆ ಎಂದು ‘ಉದಯವಾಣಿ’ಗೆ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ. ಕಾಲೇಜಿನ ಆವರಣದಲ್ಲಿ ಮಳೆ ಬಂತೆಂದರೆ ನೀರು ನಿಂತುಕೊಳ್ಳುವ ಬಗ್ಗೆ ಇಲಾಖೆಗೆ ಲಿಖೀತ ರೂಪದಲ್ಲಿ ಅರ್ಜಿ ಸಲ್ಲಿಸಿದ್ದೇವೆ. ಜಿಪಂ ಸಭೆಯಲ್ಲೂ ಚರ್ಚಿಸಿದ್ದೇವೆ. ಗ್ರಾಪಂ ಅಧ್ಯಕ್ಷರು- ಸದಸ್ಯರಿಗೂ ವಸ್ತು ಸ್ಥಿತಿ ಬಗ್ಗೆ ತಿಳಿದಿದೆ. ಆದರೂ ಜನಪ್ರತಿನಿಧಿಗಳು ಮಾತ್ರ ಈ ಕಾಲೇಜಿಗೂ ನಮಗೆ ಯಾವುದೇ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ. ●ಕಾಂತರಾಜು, ಪ್ರಾಂಶುಪಾಲರು
ಕಾಲೇಜಿನ ಆವರಣ ಮನಸ್ಸಿಗೆ ಮುದ ನೀಡುವಂತಿರಬೇಕು. ಆದರೆ, ನಿಜಕ್ಕೂ ಬೇಸರ ತರಿಸುತ್ತದೆ. ಇಂತಹ ವಾತಾವರಣದಲ್ಲಿ ಮಕ್ಕಳಿಂದ ಶೈಕ್ಷಣಿಕ ಸಾಧನೆ ನಿರೀಕ್ಷಿಸುವುದಾದರೂ ಹೇಗೆ . ಇಲಾಖೆ ಈ ರೀತಿಯ ಬೇಜವಾಬ್ದಾರಿತನ ಸಾರ್ವಜನಿಕರಲ್ಲಿ ಬೇಸರವನ್ನುಂಟು ಮಾಡಿದೆ. ● ರಾಘವೇಂದ್ರ, ಹಳೆ ವಿದ್ಯಾರ್ಥಿ
● ಕೆ.ಎಸ್‌.ಮಂಜುನಾಥ್‌ ಕುದೂರು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.