ಬಸ್‌ ನಿಲ್ದಾಣಕ್ಕೆ ಶಾಸಕರ ಭೇಟಿ


Team Udayavani, Dec 20, 2019, 2:54 PM IST

RN-TDY-1

ಮಾಗಡಿ: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಗುರುವಾರ ಮುಂಜಾನೆಯೇ ಶಾಸಕ ಎ.ಮಂಜುನಾಥ್‌ ದಿಢೀರ್‌ ಭೇಟಿನೀಡಿ ಗ್ರಾಮೀಣ ಭಾಗದ ಬಸ್‌ ಸಂಚಾರ ಮತ್ತು ನಿಲ್ದಾಣದ ಸಮಸ್ಯೆಗಳ ಕುರಿತು ಪ್ರಯಾಣಿಕರೊಂದಿಗೆ ಖುದ್ದು ಸಮಾಲೋಚನೆ ನಡೆಸಿದರು.

ಗ್ರಾಮೀಣ  ಭಾಗಕ್ಕೆ ಬಸ್‌ ಸಂಚಾರದ ಸಮಸ್ಯೆ ಇದ್ದು, ಸಂಚಾರಕ್ಕೆ ಸೂಕ್ತ ಕ್ರಮಕ್ಕೆಸಹರಿಸುವಂತೆ ಗ್ರಾಮೀಣ ಜನತೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಬಂದದೂರಿನ ಹಿನ್ನೆಲೆಯಲ್ಲಿ ಬಸ್‌ ನಿಲ್ದಾಣಕ್ಕೆ ಶಾಸಕ ಭೇಟಿ ನೀಡಿದಾಗ ಸೀಟ್‌ ಬೆಂಚುಕಲ್ಲುಗಳ ಮೇಲೆ ಪಾರಿವಾಳ ಹಕ್ಕಿಗಳ ಇಕ್ಕೆಗಳು ಬಿದ್ದಿದ್ದನ್ನು ಗಮನಿಸಿದ ಶಾಸಕರು ಪ್ರತಿದಿನ ಸೀಟ್‌ ಬೆಂಚುಗಳನ್ನು ಸ್ವತ್ಛತೆ ಕಾಪಾಡಬೇಕು ಎಂದು ಎಚ್ಚರಿಕೆ ನೀಡಿದರು.

ಗ್ರಾಮಗಳಿಗೆ ಬೇಕಿದೆ ಬಸ್‌ ಸೌಕರ್ಯ: ಪ್ರತಿದಿನ ರಾತ್ರಿ 8.30 ರ ನಂತರ ಬೆಂಗಳೂರು ಮಾರ್ಗವಾಗಿ ಬಸ್‌ ಸಂಚಾರ ಇರಬೇಕು.ಪ್ರತಿ ಗಂಟೆಗೊಮ್ಮೆ ಮಾಗಡಿಯಿಂದ ಕುಣಿಗಲ್‌ಗೆ ಮತ್ತು ಕುಣಿಗಲ್‌ನಿಂದ ಮಾಗಡಿಗೆ ಬಸ್‌ ಸಂಚಾರ ಬೇಕಿದೆ. ಕಾಳಾರಿ ಮಾರ್ಗವಾಗಿ ಕುದೂರಿಗೆ, ತಿಪ್ಪಸಂದ್ರಕ್ಕೆ ಬಸ್‌ ಸೌಕರ್ಯ ಬೇಕಿದ್ದು, ಅದರಲ್ಲೂ ಸಂಜೆ ವೇಳೆ ಪಟ್ಟಣದ ಬಹುತೇಕ ಗ್ರಾಮೀಣ ಪ್ರದೇಶ ಗಳಿಗೆ ಬಸ್‌ ಸಂಚಾರದ ಕೊರತೆಯಿದೆ. ಇದರಿಂದಾಗಿ ಆಟೋ ರಿಕ್ಷಾ ಹಿಡಿದು ಗ್ರಾಮ ಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ.

ಸಮಸ್ಯೆ ಹೇಳಿಕೊಂಡ ಪ್ರಯಾಣಿಕರು: ಜೊತೆಗೆ ಶಾಲಾ ಕಾಲೇಜುಗಳ ಸಮಯಕ್ಕೆ ಸರ್ಕಾರಿ ಬಸ್‌ಗಳ ಸಂಚಾರ ಕಡಿಮೆಯಿದ್ದು, ಅದರಲ್ಲೂ ಬಹುತೇಕ ಬಸ್‌ಗಳು ಎಲ್ಲಂದರಲ್ಲೇ ಕೆಟ್ಟು ನಿಲ್ಲುತ್ತವೆ. ಸೀಟುಗಳಲ್ಲಿ ದೂಳುತುಂಬಿರುತ್ತದೆ. ಸ್ವತ್ಛತೆಯಿಲ್ಲ ಸಮ ಯಕ್ಕೆ ಸರಿಯಾಗಿ ಬಸ್ಸುಗಳು ಬರುವುದಿಲ್ಲ ಒಂದಲ್ಲಎರಡಲ್ಲ ಬಹಳ ಸಮಸ್ಯೆಗಳನ್ನು ಎದುರಿಸ ಬೇಕಾದಿದೆ. ಸಂಚಾರದ ವೇಳಾ ಪಟ್ಟಿಯೇ ಹಾಕಿಲ್ಲ. ಬಸ್ಸುಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ನೂರಾರು ಮಂದಿ ಪ್ರಯಾಣಿಕರು ಶಾಸಕರಲ್ಲಿ ಮನವಿ ಮಾಡಿಕೊಂಡರು. ಸ್ಥಳದಲ್ಲೇ ಇದ್ದ ಡಿಪೋ ವ್ಯವಸ್ಥಾಪಕ ನಟರಾಜ್‌ ಅವರಿಗೆ ಸಂಚಾರ ಅವ್ಯವಸ್ಥೆ ಕುರಿತು ಸಮಾಲೋಚನೆ ನಡೆಸಿದ ಶೀಘ್ರದಲ್ಲಿಯೇ ಸೂಕ್ತ ಸಮಯಕ್ಕೆ ಸಂಚಾರ ವ್ಯವಸ್ಥೆ ಕೈಗೊಳ್ಳುವಂತೆ ಸೂಚನೆ ನೀಡಿದರು.

ಶಿಸ್ತಿನ ಕ್ರಮದ ಎಚ್ಚರಿಕೆ: ಇದೇ ವೇಳೆ ಬಸ್‌ ನಿಲ್ದಾಣದ ಶುಚಿತ್ವ ಕುರಿತು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು ನಿತ್ಯ ಸಾವಿರಾರು ಪ್ರಯಾಣಿಕರು ನಿಲ್ದಾಣದಿಂದ ಪ್ರಯಾಣ ಬೆಳೆಸುತ್ತಾರೆ. ಇಲ್ಲಿನ ಪಾರ್ಕ್‌ ನಿರ್ವಹಣೆ ಮಾಡಿಲ್ಲ. ಶುಚಿತ್ವ ಕಾಪಾಡುತ್ತಿಲ್ಲ. ಹೀಗಾದರೆ ಸುಮ್ಮನೆ ಇರಲು ಸಾಧ್ಯವಿಲ್ಲ. ಇನ್ನೊಂದು ವಾರದೊಳಗೆ ಬಸ್‌ ನಿಲ್ದಾಣವನ್ನು ಸ್ವತ್ಛ ಮಾಡುವ ಮೂಲಕ ಅಗತ್ಯ ಕ್ರಮ ವಹಿಸಬೇಕು, ನಿತ್ಯ ಬಸ್‌ಗಳನ್ನು ತೊಳೆದು ನಿಲ್ದಾಣಕ್ಕೆ ತರಬೇಕು. ಪ್ರಯಾಣಿಕ ರೊಂದಿಗೆ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಇಲ್ಲದಿದ್ದರೆ. ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪುರಸಭಾ ಸದಸ್ಯರಾದ ಕೆ.ವಿ.ಬಾಲರಘು, ರಹಮತ್‌, ವಿಜಯ ರೂಪೇಶ್‌, ರೇಖಾ, ಎಂ.ಬಿ.ಮಹೇಶ್‌, ಅನಿಲ್‌, ನಿವೀನ್‌ ,ಮೋಹನ್‌, ಚಿಕ್ಕಣ್ಣ, ಚಂದ್ರಶೇಖರ್‌, ಜವರೇಗೌಡ, ವಿಜಯಸಿಂಹ, ಸ್ವಾ,ಮಿ, ರಮೇಶ್‌ ದೊಡ್ಡಿ ಲೋಕೇಶ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.