ಮೇಲ್ಮನೆ ಚುನಾವಣೆ: ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಿ


Team Udayavani, Dec 6, 2021, 2:42 PM IST

ಮೇಲ್ಮನೆ ಚುನಾವಣೆ: ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಿ

ರಾಮನಗರ: ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುತ್ತಿರುವ ಚುನಾವಣೆ ವೇಳೆ ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಕರ್ತವ್ಯ ನಿರ್ವಹಿಸುವಂತೆ ಚುನಾವಣಾ ವೀಕ್ಷಕಅಧಿಕಾರಿ ಶಿವಯೋಗಿ ಸಿ ಕಳಸದ್‌ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಿ.10ರಂದು ನಡೆಯುವ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಸಿದ್ಧತೆಗಳ ಪರಿಶೀಲನೆಗೆಂದು ಭಾನುವಾರ ನಗರದ ಜಿಪಂ ಸಭಾಂಗಣದಲ್ಲಿನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದಅವರು,ವಿಧಾನ ಪರಿಷತ್‌ ಚುನಾವಣೆಗೆ ಕಡಿಮೆ ಮತದಾರರು, ಕಡಿಮೆ ಮತಗಟ್ಟೆಗಳಿವೆ ಎಂದು ಮೈ ಮರೆಯಬೇಡಿ. ಚುನಾವನಾ ಕರ್ತವ್ಯಕ್ಕೆ ನಿಯೋಜಿಸಿರುವ ಪ್ರತಿಯೊಬ್ಬರು ಎಚ್ಚರಿಕೆಯಿಂದ ತಮ್ಮ ಕರ್ತವ್ಯ ನಿಭಾಯಿಸಬೇಕು ಎಂದರು.

ಚುನಾವಣೆಗೆ ಪ್ರಕ್ರಿಯೆ: ಮತದಾನವು ಡಿ.10ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಮತದಾನ ನಡೆಯುವ ಕೊಠಡಿಯಲ್ಲಿ ಮತದಾನದಗೌಪ್ಯತೆ ಕಾಪಾಡುವ ರೀತಿ ಎಚ್ಚರಿಕೆ ವಹಿಸಬೇಕು.ಬೆಳಗ್ಗೆಯಿಂದ ಸಂಜೆವರೆಗೆ ವೀಡಿಯೋ ಚಿತ್ರೀಕರಣನಡೆಸಿ. ಇದಕ್ಕೆ ಬೇಕಿರುವ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

ಚುನಾವಣೆ ನೀತಿ ಪಾಲನೆ: ಮತದಾನ ಮಾಡುವ ಸಂದರ್ಭದಲ್ಲಿ ಮತದಾನದ ಕೊಠಡಿಗೆ ಮತದಾರರು ಮೊಬೈಲ್‌ ತೆಗೆದುಕೊಂಡುಹೋಗುವುದನ್ನು ನಿಷೇಧಿಸಲಾಗಿದೆ. ಕೊಠಡಿಯ ಹೊರಗೆ ಮೊಬೈಲ್‌ ಇಡುವ ವ್ಯವಸ್ಥೆ ಮಾಡಿ. ಮತದಾನವು ಗ್ರಾಪಂ ಕಚೇರಿ ಹಾಗೂ ನಗರ ಸ್ಥಳೀಯ ಸಂಸ್ಥೆಯ ಕಚೇರಿಗಳಲ್ಲಿ ನಡೆಸಬೇಕು. ಹೀಗಾಗಿ ಈ ಕೇಂದ್ರಗಳಲ್ಲಿ ಡಿ.10ರಂದು ಮತದಾನದ ಕೆಲಸದ ಹೊರತುಕಚೇರಿ ಕೆಲಸಗಳು ನಡೆಯದಂತೆ ಎಚ್ಚರಿಕೆ ವಹಿಸಿ ಸೂಚನೆ ಕೊಟ್ಟರು. ಸಿದ್ಧತೆ ಬಗ್ಗೆ ಪರಿಶೀಲನೆ: ಮಸ್ಟರಿಂಗ್‌ ಮತ್ತು ಡಿಮಸ್ಟರಿಂಗ್‌ ಕೆಲಸಗಳು ತಾಲೂಕು ಕೇಂದ್ರದಲ್ಲಿನಡೆಸಿ. ಮತಗಟ್ಟೆಗಳ ರೂಟ್‌ ಮ್ಯಾಪ್‌ ಮಾಡಿಕೊಂಡುಬೇಕಿರುವ ವಾಹನದ ವ್ಯವಸ್ಥೆಗಳನ್ನು ಮಾಡಿಕೊಳ್ಳಿ ಎಂದರು.

ಇದೇ ವೇಳೆ ಅವರು ಚುನಾವಣೆಗೆ ನಿಯೋಜಿಸಿರುವ ಸಿಬ್ಬಂದಿ ಸಂಖ್ಯೆ, ಅವರು ಪಡೆದಿರುವ ತರಬೇತಿ ಕುರಿತು ಮಾಹಿತಿ ಪಡೆದರು.

ಜಿಲ್ಲೆಯಲ್ಲಿ 2062 ಮತದಾರರು: ಜಿಲ್ಲಾಧಿಕಾರಿ ಡಾ: ರಾಕೇಶ್‌ ಕುಮಾರ್‌ ಕೆ ಅವರು ಮಾತನಾಡಿ ಜಿಲ್ಲೆಯಲ್ಲಿ 973 ಪುರುಷರು ಹಾಗೂ 1089 ಮಹಿಳೆಯರು ಸೇರಿ ಒಟ್ಟು 2062 ಮತದಾರರಿದ್ದಾರೆ. 122 ಗ್ರಾಪಂ ಹಾಗೂ 4 ನಗರ ಸ್ಥಳೀಯ ಸಂಸ್ಥೆಗಳು ಸೇರಿ ಒಟ್ಟು 126 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಇದರಲ್ಲಿ 24 ಮತಗಟ್ಟೆ ಗಳನ್ನು ಅತಿ ಸೂಕ್ಷ್ಮ ಹಾಗೂ 49 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ ಎಂದರು.

ನೋಡಲ್‌ ಅಧಿಕಾರಿಗಳ ನೇಮಕ: ಮಸ್ಟರಿಂಗ್‌ ಮತ್ತು ಡಿಮಸ್ಟರಿಂಗ್‌ ಕೇಂದ್ರಗಳಿಗೆ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. 145 ಪಿಆರ್‌ಒಗಳು, 145ಎಪಿಆ ರ್‌ಒ, 145 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಿ ತರಬೇತಿ ನೀಡಲಾಗಿದೆ. ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಪ್ರತಿತಾಲೂಕಿಗೆ ಎರಡು ತಂಡ ರಚಿಸಿ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ವೀಕ್ಷಕರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒಇಕ್ರಮ್‌, ಎಸ್ಪಿ ಎಸ್‌.ಗಿರೀಶ್‌, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಪಂ ಉಪಕಾರ್ಯದರ್ಶಿ ರಮೇಶ್‌, ತಹಶೀಲ್ದಾರರು ಗಳಾದ ವಿಜಯ್‌ ಕುಮಾರ್‌, ವಿಶ್ವನಾಥ್‌, ಶ್ರೀನಿವಾಸ್‌ ಪ್ರಸಾದ್‌ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.