ಮೋದಿ ಮತ್ತೂಮ್ಮೆಪ್ರಧಾನಿಯಾಗುವುದು ನಿಶ್ಚಿತ


Team Udayavani, Apr 13, 2019, 11:10 AM IST

ram-1

ಮಾಗಡಿ: ದೇಶದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನ ಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್‌. ಬಸವರಾಜು ತಿಳಿಸಿದರು.

ಪಟ್ಟಣದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣ ಪರ ಮತಯಾಚಿಸಿದ ಅವರು ಮಾತನಾಡಿ, ಮೈತ್ರಿ ಸರ್ಕಾರದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಸಮಯ ಸಾಧಕರು. ಮತದಾರರು ಇಬ್ಬರನ್ನು ನಂಬಬೇಡಿ, ಬಲಿಷ್ಠ ಭಾರತಕ್ಕಾಗಿ ನರೇಂದ್ರ ಮೋದಿ ಪ್ರಧಾನಿಯಾಗಬೇಕಾದರೆ ರಾಜ್ಯದ 28 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಮತದಾರರು ಮನಗಾಣಬೇಕಿದೆ. ಈ ಮೂಲಕ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಕು. ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಶಾ ಸಾರಥ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಬಿಜೆಪಿಯಿಂದ ಬಲಿಷ್ಠ ಭಾರತ ಸಾಧ್ಯ ಎಂದು ಮತದಾರರು ಈಗಾಗಲೇ ರ್ಮಾನಿಸಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣಗೆ ಅಧಿಕ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮೈತ್ರಿ ನಾಯಕರು ಹಾವು -ಮುಂಗಸಿ: ಮೈತ್ರಿ ಸರ್ಕಾರದ ನಾಯಕರೇ ಈಗ ಹಾವು ಮುಂಗಸಿ ರೀತಿಯಲ್ಲಿ ಕಿತ್ತಾಡುತ್ತಿದ್ದಾರೆ. ಹಾವು ಮುಂಗಸಿಗೆ ಒಂದೆಡೆ ಇರಲು ಸಾಧ್ಯವೇ ಎಂದು ಮತದಾರರು ಚಿಂತನೆ ಮಾಡಬೇಕು. ಲೋಕಸಭೆ ಚುನಾವಣೆ ನಂತರವೇ ಇದಕ್ಕೆ ಉತ್ತರ ಸಿಗುತ್ತದೆ. ಮೈತ್ರಿ ಸರ್ಕಾರದ ಡಿಕೆಶಿ ಬ್ರದರ್ ಸರ್ವಾಧಿಕಾರಿಯಂತೆ ಮೆರೆಯುತ್ತಿದ್ದಾರೆ. ಶೀಘ್ರದಲ್ಲಿಯೇ ಇವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೆಲಸ: ಕಾರ್ಮಿಕ ಸಂಘಟನೆಯಲ್ಲಿ ಬೆಳೆದಿರುವ ಅಶ್ವತ್ಥನಾರಾಯಣ ಅವರು ಸೇವಾ ಮನೋಭಾವದಿಂದ ಕೆಲಸ ಮಾಡಿದ್ದಾರೆ. ಇವರು ಈಗ ಬೆಂಗಳೂರು ಗ್ರಾಮಾಂತರ ಲೋಕಸಭಾ ಅಭ್ಯರ್ಥಿಯಾಗಿರುವ ಇವರು ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ನೀಡಲಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಲಿದ್ದಾರೆ. ಅಶ್ವತ್ಥನಾರಾಯಣ ಈ ಬಾರಿ ಬಹುಮತದಿಂದ ಗೆಲ್ಲಲಿದ್ದಾರೆ. ಎಲ್ಲೆಡೆ ಬಿಜೆಪಿಯ ರಾಷ್ಟ್ರ ನಾಯಕ ಮೋದಿ ಹವ ಇದೆ. ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗುತ್ತಾರೆ. ಮೋದಿ ಪ್ರಧಾನಿಯಾದರೆ ಮಾತ್ರ ದೇಶ ಪ್ರಗತಿಪಥದತ್ತ ಮುನ್ನಡೆಯಲು ಸಾಧ್ಯ ಎಂದು ತಿಳಿಸಿದರು.

ಈ ವೇಳೆಯಲ್ಲಿ ಬಿಜೆಪಿ ಮುಖಂಡರಾದ ಬಿ.ಎಂ.ಧನಂಜಯ, ಹನುಮಂತೇ ಗೌಡ, ಶಶಿಧರ್‌, ರಾಘವೇಂದ್ರ, ಕುಮಾರ್‌, ಮಾರಪ್ಪ, ಟಿ.ಆರ್‌ .ದಯಾನಂದ್‌, ಟಿ.ವಿ. ಕೃಷ್ಣ, ರಾಮಚಂದ್ರಯ್ಯ, ಮೂರ್ತಿ, ಎಂ.ಟಿ.ಶಿವಣ್ಣ, ಎಂ.ಮುನಿಕೃಷ್ಣ, ಶಿವರಾಜು, ರವಿಕುಮಾರ್‌, ಅಶ್ವಥ್‌, ವಿಜಯ ಕುಮಾರ್‌, ಪ್ರಭು ಹಾಜರಿದ್ದರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.