ಮುಂಗಾರು ಮಳೆ ಕ್ಷೀಣ; ಬಿತ್ತನೆ ಕುಂಠಿತ


Team Udayavani, Jul 24, 2023, 1:27 PM IST

ಮುಂಗಾರು ಮಳೆ ಕ್ಷೀಣ; ಬಿತ್ತನೆ ಕುಂಠಿತ

ರಾಮನಗರ: ಈ ವರ್ಷ ಮುಂಗಾರು ಕ್ಷೀಣಿಸುವ ಸಾಧ್ಯತೆ ಸ್ಪಷ್ಟವಾಗಿದ್ದು, ಜಿಲ್ಲೆಯಲ್ಲಿ ಶೇ.90ರಷ್ಟು ಬಿತ್ತನೆ ಕಾರ್ಯ ಕುಂಠಿತಗೊಂಡಿದೆ. ಮುಂಗಾರು ಆರಂಭಗೊಂಡು 53 ದಿನಗಳು ಕಳೆದರೂ ಜಿಲ್ಲೆಯಲ್ಲಿ ಬಿತ್ತನೆಗೆ ಹದವಾದ ಮಳೆ ಸುರಿದಿಲ್ಲ. ಕಳೆ ವರ್ಷ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಜಿಲ್ಲೆಯಲ್ಲಿ ಈ ಬಾರಿ ಅನಾವೃಷ್ಟಿಯ ಲಕ್ಷಣಗಳ ಕಾಣಿಸುತ್ತಿವೆ.

ಸಕಾಲದಲ್ಲಿ ಮಳೆ ಸುರಿದಿದ್ದರೆ ಈವೇಳೆಗಾಗಲೇ ಬಿತ್ತನೆ ಕಾರ್ಯ ಪೂರ್ಣಗೊಂಡು , ಮೇಲುಗೊಬ್ಬರ ನೀಡಲು, ಕಳೆ ತೆಗೆಯುವುದು ಮೊದಲಾದ ಕೆಲಸಗಳನ್ನು ರೈತರು ಮಾಡಬೇಕಿತ್ತು. ಆದರೆ, ಜಿಲ್ಲೆಯಲ್ಲಿ ಬಹು ತೇಕ ರೈತರು ಇನ್ನೂ ಮೊದಲ ಬಾರಿ ಉಳುಮೆಯನ್ನೇ ಮಾಡಿಲ್ಲ. ಬಿತ್ತನೆಗೆ ಭೂಮಿಯನ್ನು ಹದಗೊಳಿಸಿಲ್ಲ, ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಕಾಣುತ್ತಿದೆ.

ಭೂಮಿ ತಾಕದ ಮಳೆ: ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಹಗರು ಮಳೆಯಾಗುತ್ತಿದೆ. ಆದರೆ, ಈ ಮಳೆ ಭೂಮಿ ತಾಕುತ್ತಿಲ್ಲ. ಮಳೆಯ ಜೊತೆಗೆ ಜೋರು ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಭೂಮಿಯ ಮೇಲಿನ ತೇವಾಂಶವೆಲ್ಲಾ ಗಾಳಿಗೆ ಹಾರಿಹೋಗುತ್ತಿದೆ. ಮೋಡ ಕವಿದ ವಾತಾವರಣ ಇದ್ದರೂ ಉಷ್ಣಾಂಶ ಸಹ ಹೆಚ್ಚಿದ್ದು, ಈ ವಾತಾವರಣ ಕೃಷಿ ಚಟುವಟಿಕೆಗೆ ಯಾವುದೇ ಪ್ರಯೋಜನ ವಿಲ್ಲದಂತಾಗಿದೆ.

ಮಾಸಾಂತ್ಯದವರೆಗೆ ಮಳೆ ಅನುಮಾನ: ಜಿಲ್ಲೆಯಲ್ಲಿ ಈ ತಿಂಗಳ ಅಂತ್ಯದ ವರೆಗೆ ಮಳೆ ಸುರಿಯುವ ಸಾಧ್ಯತೆ ಕ್ಷೀಣವಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಮುಂಗಾರು ಮಳೆ ಶೇ.40 ರಷ್ಟು ಕಡಿಮೆಯಾಗಿದೆ. ಜುಲೆ„ ತಿಂಗಳಲ್ಲಿ ಶೇ.27 ರಷ್ಟು ಮಳೆ ಕ್ಷೀಣವಾಗಿದ್ದು, ಹವಾ ಮಾನ ಇಲಾಖೆ ನೀಡಿರುವ ವರದಿ ಅನ್ವಯ ಇನ್ನೂ ಒಂದುವಾರ ಹಗುರ ಮಳೆ ಮಾತ್ರ ಸುರಿಯಲಿದೆ. ಜೂನ್‌ ತಿಂಗಳ ಅಂತ್ಯದ ವರೆಗೆ ಮಳೆ ಕ್ಷೀಣಿಸುವ ಹಿನ್ನೆಲೆಯಲ್ಲಿ ಬಿತ್ತನೆ ಕಾರ್ಯ ಮಾಸಾಂತ್ಯದ ವರೆಗೆ ನಡೆಯುವುದು ಅನುಮಾನ ಎನಿಸಿದೆ.

ಕಳೆದ ಸಾಲಿನಲ್ಲಿ ಜುಲೈ ತಿಂಗಳಲ್ಲಿ ಆಶಾದಾಯ ಮಳೆಸುರಿದಿತ್ತು. ವಾಡಿಕೆ ಮಳೆ 82.8 ಮಿಮೀ ಇದ್ದು, 148.7ಮಿಮೀ ಮಳೆ ಸುರಿದಿತ್ತು. ಆದರೆ ಈ ವರ್ಷ ಇದುವರೆಗೆ ಕೇವಲ 26 ಮಿಮೀ ಮಾತ್ರ ಸುರಿದಿದ್ದು, ಇನ್ನೂ ಒಂದು ವಾರ ಮಳೆ ಸುರಿಯುವುದು ಅನುಮಾನ ಎನಿಸಿದೆ. ಜೂನ್‌ ತಿಂಗಳಲ್ಲಿ ಸಹ ಜಿಲ್ಲೆಯಲ್ಲಿ ಶೇ.50ರಷ್ಟು ಮಳೆ ಕ್ಷೀಣವಾಗಿತ್ತು. ಜುಲೆ„ ತಿಂಗಳಲ್ಲಿ ಸಹ ಮಳೆ ಇನ್ನಷ್ಟು ಕ್ಷೀಣವಾಗಲಿದ್ದು, ಬಿತ್ತನೆ ಕಾರ್ಯದ ಮೇಲೆ ಪರಿಣಾಮ ಬೀರಲಿದೆ.

ಅಲ್ಪಾವಧಿ ತಳಿಗಳಿಗೆ ಶಿಫಾರಸ್ಸು: ಜಿಲ್ಲೆಯಲ್ಲಿ ಮುಂಗಾರು ಎರಡು ತಿಂಗಳಾದರೂ ಸಮರ್ಪಕವಾಗಿ ಸುರಿಯದ ಹಿನ್ನೆಲೆಯಲ್ಲಿ ತಡವಾಗಿ ಬಿತ್ತನೆ ಕಾರ್ಯ ನಡೆಯಬಹುದು ಎಂದು ಅಂದಾಜಿಸಿರುವ ಕೃಷಿ ಇಲಾಖೆ ಅಧಿಕಾರಿಗಳು ರಾಗಿ ಬಿತ್ತನೆಗೆ ಅಲ್ಪಾವಧಿ ತಳಿಗಳನ್ನು ಶಿಫಾರಸ್ಸು ಮಾಡಿದ್ದಾರೆ. ಐದು ತಿಂಗಳುಗಳ ಅವಧಿಯ ಎಂಆರ್‌ ತಳಿಯ ರಾಗಿಗಳು ಸೂಕ್ತವಲ್ಲದಿದ್ದು, ಜಿಲ್ಲೆಯಲ್ಲಿ ಬಿತ್ತನೆ ಮಾಡಲು 95 ರಿಂದ 110 ದಿನಗಳ ಒಳಗೆ ಕಟಾವಗೆ ಬರುವ ರಾಗಿ ತಳಿಗಳಾದ ಎಂ.ಎಲ್‌.65, ಇಸಿ-28,ಜಿಪಿಯು-28, ಕೆಎಂಆರ್‌-301 ತಳಿಯ ರಾಗಿಗಳನ್ನು ಬಿತ್ತನೆ ಮಾಡುವಂತೆ ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

ತಾಲೂಕಿನಲ್ಲಿ ಬಿತ್ತನೆಗೆ ಕೇವಲ 20 ದಿನ ಬಾಕಿ: ರಾಮನಗರ ಜಿಲ್ಲೆಯಲ್ಲಿ ಮಾಗಡಿ ತಾಲೂಕನ್ನು ಹೊರತು ಪಡಿಸಿದರೆ ಉಳಿದ ಮೂರು ತಾಲೂಕುಗಳ ವ್ಯಾಪ್ತಿಯಲ್ಲಿ ಸಾಮಾನ್ಯವಾಗಿ ಜು.15ರಿಂದ ಆ.15 ಒಳಗೆ ಬಿತ್ತನೆ ಕಾರ್ಯಗಳು ನಡೆಯುತ್ತವೆ. ಜಿಲ್ಲೆಯ ಪ್ರಮುಖ ಮಳೆ ಆಶ್ರಿತ ಬೆಳೆಯಾಗಿರುವ ರಾಗಿಗೆ ಹೆಚ್ಚಿನ ಪ್ರಮಾಣದಲ್ಲ ಮುಂಗಾರು ಅವಧಿಯಲ್ಲಿ ಬಿತ್ತನೆಯಾಗುತ್ತದೆ. ಜೂನ್‌ ತಿಂಗಳಲ್ಲಿ ಸುರಿಯುವ ಮಳೆಗೆ ಭೂಮಿಯಲ್ಲಿ ಚೊಚ್ಚಲ ಉಳುಮೆ ಮಾಡಿ ಹದಗೊಳಿಸಿ ಈ ಅವಧಿಯಲ್ಲಿ ಬಿತ್ತನೆ ಕಾರ್ಯ ನಡೆಸುವುದು ವಾಡಿಕೆ. ಆದರೆ, ಜಿಲ್ಲೆಯಲ್ಲಿ ಇನ್ನೂ ಬಿತ್ತನೆ ಕಾರ್ಯ ಆರಂಭಗೊಂಡಿಲ್ಲ. ಆ.15ರೊಳಗೆ ಬಿತ್ತನೆ ಕಾರ್ಯ ಪೂರ್ಣಗೊಳ್ಳಬೇಕಿದ್ದು, ಇನ್ನು 20 ದಿನಗಳ ಒಳಗೆ ಬಿತ್ತನೆಗೆ ಭೂಮಿಯನ್ನು ಹದಗೊಳಿಸಿ ಪೂರ್ಣಗೊಳಿಸುವ ಜರೂರತ್ತು ರೈತರಿಗೆ ಎದುರಾಗಿದೆ ಒಂದು ವೇಳೆ ಬಿತ್ತನೆ ಕಾರ್ಯ ಇಷ್ಟರೊಳಗೆ ನಡೆಯದಿದ್ದರೆ ಮುಂದೆ ಬಿತ್ತನೆ ಮಾಡುವುದು ಕಷ್ಟ ಸಾಧ್ಯ.

ಎರಡನೇ ವರ್ಷವೂ ಬಿತ್ತನೆಗೆ ಅಡ್ಡಿ : ಕಳೆದ ವರ್ಷ 50 ವರ್ಷಗಳ ಅವಧಿಯಲ್ಲೇ ದಾಖಲೆ ಎನ್ನಿಸುವಷ್ಟು ಮಳೆ ಜಿಲ್ಲೆಯಲ್ಲಿ ಸುರಿದಿತ್ತಾದರೂ, ರೈತರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಆಗಿದೆ. ನಿರಂತರ ಮಳೆ ಸುರಿದ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯವನ್ನು ಕೈಗೊಳ್ಳಲು ಸಾಧ್ಯವಾಗಲಿಲ್ಲ. ಇನ್ನು ಕೆಲವೆಡೆ ಬಿತ್ತನೆ ನಡೆದಿದ್ದರು ಹೆಚ್ಚು ಮಳೆಯಿಂದಾಗಿ ಪೈರುಗಳು ಕೊಳೆತು ರೈತರು ಸಂಕಷ್ಟಕ್ಕೆ ಸಿಲುಕಿದರು. ಆದರೆ, ಈವರ್ಷ ಮಳೆಯೇ ಬಾರದ ಹಿನ್ನೆಲೆಯಲ್ಲಿ ಬಿತ್ತನೆಗೆ ಮತ್ತೆ ಅಡ್ಡಿಯಾಗಿದೆ. ಆಗಸ್ಟ್‌ ಎರಡನೇ ವಾರದೊಳಗೆ ಮಳೆ ಸುರಿಯದೇ ಹೋದಲ್ಲಿ ಈ ವರ್ಷವೂ ಬಿತ್ತನೆ ನಡೆಯದೆ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಕಳೆದ 20ದಿನಗಳಿಂದ ಮೋಡಕವಿದ ವಾತಾವರಣವಿದ್ದರೂ ಭೂಮಿಗೆ ಹದವಾದ ಮಳೆ ಸುರಿದಿಲ್ಲ. ಬಿತ್ತನೆ ಕಾರ್ಯ ಜಿಲ್ಲೆಯಾದ್ಯಂತ ಕುಂಟಿತಗೊಂಡಿದ್ದು, ಕೃಷಿ ಇಲಾಖೆ ಬಿತ್ತನೆಗೆ ಅಗತ್ಯ ವಿರುವ ಬಿತ್ತನೆ ಬೀಜಗಳನ್ನು ದಾಸ್ತಾನು ಇರಿಸಿದೆ. ಆದರೆ, ಬಿತ್ತನೆ ಬೀಜ ಖರೀದಿ ಮಾಡಿಕೊಳ್ಳಲು ರೈತರು ಇನ್ನೂ ಮುಂದಾಗುತ್ತಿಲ್ಲ. ● ಬೊಮ್ಮೇಶ್‌, ಕೃಷಿ ತಾಂತ್ರಿಕ ಅಧಿಕಾರಿ, ಚನ್ನಪಟ್ಟಣ

– ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.