ಜೆಡಿಎಸ್‌, ಎಚ್‌ಡಿಕೆ ವಿರುದ್ಧ ಸಂಸದ ಸುರೇಶ್‌ ವಾಗ್ಧಾಳಿ


Team Udayavani, Feb 6, 2023, 1:25 PM IST

TDY-11

ರಾಮನಗರ: ರೇಷ್ಮೇನಗರಿ ನಾಲ್ವರು ಮುಖ್ಯಮಂತ್ರಿ ನೀಡಿರುವ ಕ್ಷೇತ್ರ ಆದರೂ, ಮೂಲಭೂತ ಸೌಕರ್ಯಗಳೇ ಇಲ್ಲವಾಗಿರುವುದು ದುರಂತದ ವಿಚಾರವಾಗಿದೆ. ಇನ್ನಾದರೂ ಅಭಿವೃದ್ಧಿ ಚಿಂತನೆಗೆ ನೀವು ಸಹಕಾರ ನೀಡಬೇಕು. ಒಂದೇ ಕುಟುಂಬ ಮತ್ತು ಪಕ್ಷವನ್ನು ನಂಬಿ ಪದೇ ಪದೆ ಮೋಸ ಹೋಗ ಬೇಡಿ ಎಂದು ಸಂಸದ ಡಿ.ಕೆ. ಸುರೇಶ್‌ ಜೆಡಿಎಸ್‌ ಹಾಗೂ ಎಚ್‌ಡಿಕೆ ವಿರುದ್ಧ ವಾಗ್ಧಾಳಿ ನಡೆಸಿದರು.

ತಾಲೂಕಿನ ತುಂಬೇನಹಳ್ಳಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಅತ್ಯುನ್ನತ ಹುದ್ದೆಯಾದ ಮುಖ್ಯಮಂತ್ರಿ ಸ್ಥಾನವನ್ನು ನಾಲ್ಕು ಬಾರಿ ರಾಮನಗರ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದೆ. ನಿಮ್ಮಿಂದ ಮತ ಪಡೆದು ಹುದ್ದೆಗೇರಿದವರು ಕೃತಜ್ಞತೆಗಾದರೂ ನಿಮ್ಮ ಸಮಸ್ಯೆ ಬಗೆಹರಿಸಬೇಕಿತ್ತು. ಆದರೆ, ಇಲ್ಲಿನ ಜನ ಇನ್ನೂ ಸಹ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದಾರೆ. ಇದು ಅವರ ಅಭಿವೃದ್ಧಿ ರಹಿತ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ ಎಂದರು.

ಮೂಲಭೂತ ಸೌಕರ್ಯಗಳ ವಿಷಯದಲ್ಲಿ ರಾಮನಗರ ಮತ್ತು ಕನಕಪುರ ಕ್ಷೇತ್ರವನ್ನು ಹೋಲಿಸಿ ಜನತೆ ಮಾತನಾಡುತ್ತಿದ್ದಾರೆ. ಕನಕಪುರ ಕ್ಷೇತ್ರದ ಜನ ನೀಡಿದ ಮತಕ್ಕೆ ಖುಣಿಯಾಗಿ ಕೆಲಸ ಮಾಡಿದ್ದೇವೆ. ಅತ್ಯಂತ ಗುಣಮಟ್ಟದ ಮೂಲಭೂತ ಸೌಕರ್ಯ ಪಡೆದು ನೆಮ್ಮದಿಯಿಂದ ಜೀವನ ಮಾಡುತ್ತಿದ್ದಾರೆ. ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಸಮರ್ಪಕ ವಾಗಿ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ. ಮೋರಿ, ಚರಂಡಿ, ರಸ್ತೆ ವ್ಯವಸ್ಥೆಗೆ ಇನ್ನೂ ಪರದಾಡ ಬೇಕಾಗಿದೆ. ಇದರಿಂದ ಇಡೀ ಜಿಲ್ಲೆ ಮತ್ತು ರಾಮ ನಗರದ ಜನ ಬೇಸತ್ತು ಬದಲಾವಣೆ ಬಯಸುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿ: ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುವ ಎಲ್ಲಾ ಅವಕಾಶ ದೊರೆತಿದೆ. ರಾಜ್ಯದ ಜನ ಹೊಸ ನಾಯಕತ್ವ ಬಯಸುತ್ತಿದ್ದಾರೆ. ಜಾತಿ, ಮತ, ಧರ್ಮಗಳ ವಿಷಬೀಜ ಭಿತ್ತಿ ರಾಜಕೀಯ ಮಾಡುವವರಿಗೆ ಪಾಠ ಕಲಿಸಬೇಕು. ಸರ್ವರನ್ನೂ ಜೊತೆಗೆ ತೆಗೆದುಕೊಂಡು ಹೋಗುವ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿ. ಕೇಂದ್ರದ ಬಿಜೆಪಿ ಸರ್ಕಾರ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಕೇವಲ ಪೊಳ್ಳು ಭರವಸೆಗಳೊಂದಿಗೆ ಅಧಿಕಾರ ಗಿಟ್ಟಿಸಿಕೊಂಡಿದ್ದು, ಕೊಟ್ಟ ಯಾವ ಭರವಸೆಗಳನ್ನು ಈಡೇರಿಸಿಲ್ಲ. ರಾಜ್ಯ ಮತ್ತು ರಾಷ್ಟ್ರಕ್ಕೆ ಏನಾದರೂ ಬಿಜೆಪಿ ಕೊಡುಗೆ ಇದ್ದರೆ ಅದು ಬೆಲೆ ಏರಿಕೆ ಮಾತ್ರ. ಇದರಿಂದ ರಾಜ್ಯದ ಮತ್ತು ದೇಶದ ಬಡ ಮತ್ತು ಮಧ್ಯಮ ವರ್ಗದವರು ಬದುಕು ದುಸ್ತರವಾಗಿದೆ ಎಂದು ಹೇಳಿದರು.

200 ಯೂನಿಟ್‌ವರೆಗೆ ಉಚಿತ ವಿದ್ಯುತ್‌: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಂಧನ ಸಚಿವರಾಗಿದ್ದಾಗ ಯಶಸ್ವಿಯಾಗಿ ಖಾತೆಯನ್ನು ಕಾರ್ಯ ನಿರ್ವಹಿಸಿದ್ದಾರೆ. ರೈತರು ಕೇಳದಿದ್ದರೂ ಟಿಸಿಗಳನ್ನು ಹಾಕಿಕೊಟ್ಟಿದ್ದರು. ಜಿಲ್ಲಾದ್ಯಂತ 60 ಸಾವಿರ ರೈತರಿಗೆ ಉಚಿತವಾಗಿ ಟಿಸಿಗಳನ್ನು ಅಳವಡಿಸಿಕೊಟ್ಟರು. ಇದರಿಂದ ಪ್ರತಿ ರೈತರಿಗೆ ವರ್ಷಕ್ಕೆ 15 ಸಾವಿರ ಖರ್ಚು ಉಳಿತಾಯವಾಗಿದೆ ಎಂದರು.

ಮುಂದಿನ ದಿನಗಳಲ್ಲಿ ನೀವೆಲ್ಲಾ ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿ ಕೊಡಿ. ಜಿಲ್ಲಾದ್ಯಂತ ಗೃಹ ಬಳಕೆಗೆ 200ಕ್ಕೂ ಅಧಿಕ ಯೂನಿಟ್‌ಗಳನ್ನು ಬಳಸುತ್ತಿರುವುದು ಕೇವಲ 3500 ಜನ ಮಾತ್ರ. ಮುಂದೆ ಉಳಿದೆಲ್ಲಾ ಜನರಿಗೆ ಯಾವುದೇ ತಾರತಮ್ಯ ಇಲ್ಲದೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಲಾಗುವುದು ಎಂದು ಭರವಸೆ ನೀಡಿದರು.

ತುಂಬೇನಹಳ್ಳಿ ಗ್ರಾಪಂ ಸದಸ್ಯ ಪುನೀತ್‌ ಕುಮಾರ್‌ ಸೇರಿದಂತೆ ಹಲವು ಮುಖಂಡರು ಪಕ್ಷ ಸೇರ್ಪಡೆಗೊಂಡರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.