ಅನಧಿಕೃತ ಕಾಮಗಾರಿಗೆ ನಗರಸಭೆ ಅಧಿಕಾರಿಗಳ ತಡೆ


Team Udayavani, Jan 29, 2020, 5:37 PM IST

rn-tdy-1

ರಾಮನಗರ: ಕೆಂಗಲ್‌ ಹನುಮಂತಯ್ಯ ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರದ ಆವರಣದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ನಗರಸಭೆ ಅಧಿಕಾರಿಗಳು ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.

ಈ ಸಂಬಂಧ ಪತ್ರಿಕೆಯೊಂದಿಗೆ ಮಾತನಾಡಿದ ನಗರಸಭಾ ಎಇ ರಾಜೇಗೌಡ, ನಗರದ ವಾರ್ಡ್‌ ಸಂಖ್ಯೆ 27 ಜೀಗೇನಹಳ್ಳಿಯಲ್ಲಿ ಕೆಂಗಲ್‌ ಹನು ಮಂತಯ್ಯ ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರವಿದ್ದು, ಸದರಿ ಜಾಗ ಸರ್ಕಾರಿ ರಸ್ತೆ ಮತ್ತು ಉದ್ಯಾನವನದ ಜಾಗ ಎಂದು ನಗರಸಭೆಯ ದಾಖಲೆಗಳು ಹೇಳುತ್ತಿವೆ. ಇಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದದ್ದನ್ನು ಗಮನಿಸಿ ನಾಲ್ಕು ದಿನಗಳ ಹಿಂದೆಯೇ ನೋಟಿಸ್‌ ನೀಡಿ ಯಾರು ಕಾಮಗಾರಿ ಕೈಗೊಳ್ಳದಿರುವಂತೆ ಸೂಚಿಸಲಾಗಿತ್ತು. ನಗರಸಭೆಯ ನೋಟಿಸನ್ನು ಧಿಕ್ಕರಿಸಿ ಕಾಮಗಾರಿ ಮುಂದುವರೆಸಿದ್ದರಿಂದ ತಾವು ಕ್ರಮ ಕೈಗೊಳ್ಳಬೇಕಾಯಿತು ಎಂದು ಮಾಹಿತಿ ನೀಡಿದರು.

ನಗರಸಭೆ ವಾದ: ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರ ಸ್ಥಾಪಿಸಲು ನಗರ ಸಭೆಯಿಂದ ಉಚಿತ ನಿವೇಶನ ಕೊಡವಂತೆ 1997ರಲ್ಲೇ ಅರ್ಜಿ ಬಂದಿದೆ. 80/120 ಸ್ಥಳವನ್ನು ಕೊಡಲು ಸರ್ಕಾರದ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಬಹುದು ಎಂದು ನಗರಸಭೆಯಲ್ಲಿ ನಿರ್ಣಯವಾಗಿದೆ. ನಂತರ 2013ರ ಸೆಪ್ಟೆಂಬರ್‌ನಲ್ಲಿ ಕೇಂದ್ರದ ಕಾರ್ಯದರ್ಶಿಗಳು ನಗರದ ಯುವಕರಿಗೆ ಅನುಕೂಲವಾಗುವಂತೆಸಾಂಸ್ಕೃತಿಕ ಚಟುವಟಿಕೆ ನಡೆಸುವ ಉದ್ದೇಶಕ್ಕೆ ಜೀಗೇನಹಳ್ಳಿ ಗ್ರಾಮದ ಸರ್ವೆ ನಂಬರ್‌ 31/01 ಮತ್ತು 31/02ರಲ್ಲಿ ಸೈಟ್‌ ನಂಬರ್‌ 41 ಮತ್ತು 64 ಹಾಗೂ ಅಕ್ಕಪಕ್ಕದ ಜಾಗ ಸೇರಿ ಒಟ್ಟು 160/160 ಜಾಗವನ್ನು ಕೊಡುವಂತೆ ಯಾವುದೇ ಶುಲ್ಕವಿಲ್ಲದೇ ಮಂಜೂರು ಮಾಡಲು ಕೋರಿರುವ ವಿಚಾರ ಚರ್ಚೆಗೆ ಬಂದಿತು. ಈ ಸ್ಥಳದ ಬಗ್ಗೆಯೂ ಸರ್ಕಾರದ ಅನುಮೋದನೆಗೆ ಕಳುಹಿಸಹುದು ಎಂದು ನಿರ್ಣಯವಾಗಿದೆ.  ಆದರೆ ಈ ವಿಚಾರದಲ್ಲಿ ಸರ್ಕಾರದೊಂದಿಗೆ ಪತ್ರ ವ್ಯವಹಾರ ನಡೆದಿರುವ ಬಗ್ಗೆ ನಗರಸಭೆಯಲ್ಲಿ ದಾಖಲೆಗಳು ಇಲ್ಲ. ಹೀಗಾಗಿ ಇದು ಅಕ್ರಮ ನಿರ್ಮಾಣ ಎಂದು ವಿವರಿಸಿದರು.

ಕಟ್ಟಡ ತೆರವು ಎಚ್ಚರಿಕೆ: ಸದರಿ ಕಾಮಗಾರಿಯನ್ನು ಕೇಂದ್ರದವರ ಸ್ಥಗಿತಗೊಳಿಸಬೇಕಾಗಿದೆ. ಅವರ ಬಳಿ ಇರುವ ದಾಖಲೆಗಳನ್ನು ನಗರಸಭೆಗೆ ಹಾಜರುಪಡಿಸುವಂತೆ ಸೂಚಿಸಲಾಗಿದೆ. ಹಾಗೊಮ್ಮೆ ನಗರಸಭೆಯ ಸೂಚನೆಯನ್ನು ಧಿಕ್ಕರಿಸಿದರೆ ಪೊಲೀಸರ ರಕ್ಷಣೆಯಲ್ಲಿ ನಿರ್ಮಾಣ ಕಾಮಗಾರಿಯನ್ನು ತೆರವುಗೊಳಿಸಬೇಕಾಗುತ್ತದೆ ಎಂದು ಎಇಇ ರಾಜೇಗೌಡ ಎಚ್ಚರಿಸಿದ್ದಾರೆ. ಕ್ರೀಡಾ ಕೇಂದ್ರದ ಪದಾಧಿಕಾರಿಗಳ ವಾದವೇನು? ನಗರಸಭೆಯ ಕ್ರಮವನ್ನು ಖಂಡಿಸಿರುವ ಕೆಂಗಲ್‌ ಹನುಮಂತಯ್ಯ ಮತ್ತು ಕ್ರೀಡಾ ಕೇಂದ್ರದ ಪದಾಧಿಕಾರಿಗಳಾದ ಸತೀಶ್‌, ರಘು ಮುಂತಾದವರು ಪ್ರತಿಕ್ರಿಯಿಸಿ, ತಾವು ಕಾನೂನು ಬದ್ಧವಾಗಿಯೇ ಕೇಂದ್ರ ನಿರ್ಮಿಸುತ್ತಿದ್ದು, ಮುಖ್ಯ ಕಟ್ಟಡ ನಿರ್ಮಾಣಕ್ಕೆ ಬೇಕಾದ ನಕ್ಷೆಗೆ ನಗರಸಭೆಯ ಅಧಿಕಾರಿಗಳೇ ಅನುಮತಿ ನೀಡಿದ್ದಾರೆ. ಪಾರ್ಕಿಂಗ್‌ ಮತ್ತು ಯೋಗಾಭ್ಯಾಸಕ್ಕೆ ಹೆಚ್ಚುವರಿ ಸ್ಥಳ ಬೇಕಾದ್ದರಿಂದ ನಗರಸಭೆಯ ಅಧಿಕಾರಿಗಳ ಗಮನ ಸೆಳೆದೆ ಕಾಮಗಾರಿ ಆರಂಭಿಸಲಾಗಿದೆ. ಏಕಾ ಏಕಿ ನಿರ್ಮಾಣ ಕಾಮಗಾರಿಯನ್ನು ಧ್ವಂಸಗೊಳಿಸಿದ್ದು ಸರಿಯಲ್ಲ ಎಂದರು.

ಕೇಂದ್ರದಲ್ಲಿ ಟೆನ್ನಿಸ್‌, ಬ್ಯಾಡ್ಮಿಂಟನ್‌, ಯೋಗ ತರಬೇತಿ ನಡೆಯುತ್ತಿದೆ. ಉತ್ತಮ ದರ್ಜೆಯ ಬ್ಯಾಡ್ಮಿಂಟನ್‌ ಕೋರ್ಟ್‌ ಇಲ್ಲಿದೆ. ಸರ್ಕಾರದ ವಿವಿಧ ಇಲಾಖೆಗಳು ಇಲ್ಲಿ ಕ್ರೀಡಾ ಕೂಟಗಳನ್ನು ಆಯೋಜಿಸಿವೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.