![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
LS polls 2024: ಡಿ.ಕೆ.ಸುರೇಶ್ಗೆ ಹಸ್ತಲಾಘವ ನೀಡಿದ ಮುನಿರತ್ನ, ಕಾಲೆಳೆದ ಯೋಗೇಶ್ವರ್
Team Udayavani, Apr 4, 2024, 8:36 PM IST
![15](https://www.udayavani.com/wp-content/uploads/2024/04/15-2-620x372.jpg)
ರಾಮನಗರ: ನಾಮಪತ್ರ ಸಲ್ಲಿಕೆ ವೇಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಡಿ.ಕೆ.ಸುರೇಶ್ ಮತ್ತು ಅವರ ರಾಜಕೀಯ ಬದ್ಧ ವೈರಿಗಳಾದ ಬಿಜೆಪಿ ಮುಖಂಡರು ಮುಖಾಮುಖಿಯಾದ ಪ್ರಸಂಗ ಗುರುವಾರ ನಡೆಯಿತು.
ನಾಮಪತ್ರ ಸಲ್ಲಿಸಿ ಬರುತ್ತಿದ್ದ ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಮುನಿರತ್ನ ಅವರು ಎದುರಾಗುತ್ತಿದ್ದಂತೆ ಡಿ.ಕೆ.ಸುರೇಶ್, “ಏನ್ರಿ ಶಾಸಕರೇ ಹೇಗಿದ್ದೀರಾ’ ಎಂದು ನಗುತ್ತಾ ಕೈಕುಲುಕಿದರು. ಇದಕ್ಕೆ ಪ್ರತಿಯಾಗಿ ಮುನಿರತ್ನ ಕೂಡ ಹಸ್ತಲಾಘವ ನೀಡಿದರು. ಅನಂತರ ಎದುರಾದ ಬಿಜೆಪಿ ಅಭ್ಯರ್ಥಿ ಡಾ| ಮಂಜುನಾಥ್ ಅವರನ್ನು, “ಹೇಗಿದ್ದೀರಾ? ಆರೋಗ್ಯ ಚೆನ್ನಾಗಿದೆಯಾ’ ಎಂದು ಸುರೇಶ್ ಮಾತನಾಡಿಸಿದರು. ಇದಕ್ಕೆ ಪ್ರತಿಯಾಗಿ ಡಾ| ಮಂಜುನಾಥ್ ಕೂಡ ಸುರೇಶ್ ಅವರ ಯೋಗಕ್ಷೇಮ ವಿಚಾರಿಸಿದರು.
ಕಾಲೆಳೆದ ಯೋಗೇಶ್ವರ್:
ಇದೇ ಸಮಯದಲ್ಲಿ ಎದುರಾದ ಎಂಎಲ್ಸಿ ಯೋಗೇಶ್ವರ್ ಅವರು ಡಿ.ಕೆ.ಸುರೇಶ್ ಅವರ ಕೆನ್ನೆ ಸವರಿ “ಏನಿದು ಇಷ್ಟೊಂದು ಕಪ್ಪಾಗಿ ಬಿಟ್ಟಿದ್ದೀಯಾ’ ಎಂದು ಕಾಲೆಳೆದರು. ಆದರೆ ಈ ಹಿಂದೆ ಇದೇ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವೇದಿಕೆಯಲ್ಲೇ ಬೈದಾಡಿಕೊಂಡಿದ್ದ ಡಾ| ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಮಾತನಾಡಿಸುವ ಗೋಜಿಗೆ ಡಿ.ಕೆ.ಸುರೇಶ್ ಹೋಗಲಿಲ್ಲ. ಅಶ್ವತ್ಥನಾರಾಯಣ ಕೂಡ ಮಾತನಾಡಿಸಲಿಲ್ಲ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ](https://www.udayavani.com/wp-content/uploads/2024/06/PM-1-150x101.jpg)
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
![Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!](https://www.udayavani.com/wp-content/uploads/2024/06/Gopi-1-150x80.jpg)
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
![1-sadsadasd](https://www.udayavani.com/wp-content/uploads/2024/06/1-sadsadasd-150x92.jpg)
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
![Sometimes governments topple in a single day…: Mamata gives big hint](https://www.udayavani.com/wp-content/uploads/2024/06/mamata-1-150x83.jpg)
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
![Modi pays homage to Mahatma Gandhi and Vajpayee memorial before taking oath](https://www.udayavani.com/wp-content/uploads/2024/06/rajghat-150x83.jpg)
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.