‘ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ…ನೆಮ್ಮದಿಯ ಸಾವನ್ನಷ್ಟೇ ಬಯಸುತ್ತೇನೆ’: ಮುತ್ತಪ್ಪ ರೈ


Team Udayavani, Jan 20, 2020, 6:10 PM IST

Mutthappa-Rai-730

ರಾಮನಗರ: ಒಂದು ಕಾಲದಲ್ಲಿ ಬೆಂಗಳೂರು ಭೂಗತ ಲೋಕವನ್ನು ಅಕ್ಷರಶಃ ಆಳಿದ್ದ ಮಾಜೀ ಡಾನ್, ಇದೀಗ ಸಮಾಜ ಸೇವೆಯಲ್ಲಿ ಹಾಗೂ ಧಾರ್ಮಿಕ ಸೇವೆಗಳಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿರುವ ಜಯ ಕರ್ನಾಟಕ ಸಂಘಟನೆಯ ಸ್ಥಾಪಕ ಮುತ್ತಪ್ಪ ರೈ ಅವರು ಸೋಮವಾರದಂದು ಇದ್ದಕ್ಕಿದ್ದಂತೆ ಪತ್ರಿಕಾಗೋಷ್ಠಿಯೊಂದನ್ನು ಕರೆದಿದ್ದರು.

ರಾಮನಗರದ ಬಿಡದಿಯಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಆಯೋಜಿಸಲಾಗಿದ್ದ ಈ ಪತ್ರಿಕಾಗೋಷ್ಠಿಯಲ್ಲಿ ಮುತ್ತಪ್ಪ ರೈ ಅವರು ಪತ್ರಕರ್ತರ ಮುಂದೆ ತಮ್ಮನ್ನು ಕಾಡುತ್ತಿರುವ ಆರೋಗ್ಯ ಸ್ಥಿತಿಯ ಮಾಹಿತಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಮುತ್ತಪ್ಪ ರೈ ಹೇಳಿದ್ದಿಷ್ಟು…
‘ಕೆಲವು ಸಮಯದ ಹಿಂದೆ, ಸಣ್ಣದಾಗಿ ಬೆನ್ನುನೋವು ಕಾಣಿಸಿಕೊಂಡಿತ್ತು ಪರೀಕ್ಷೆಗೆಂದು ಆಸ್ಪತ್ರೆಗೆ ಹೋದಾಗ ಸ್ಕ್ಯಾನಿಂಗ್ ಮತ್ತು ಬಯಾಪ್ಸಿ ಮಾಡಿಸಿದರು. ಅದರಲ್ಲಿ ಕ್ಯಾನ್ಸರ್ ಕಾಯಿಲೆ ಇರುವುದು ಪತ್ತೆಯಾಗಿತ್ತು ಮತ್ತು ಅದು ಲಿವರ್ ವರೆಗೂ ವ್ಯಾಪಿಸಿತ್ತು.

ಬಳಿಕ ದೆಹಲಿಯಲ್ಲಿ ಮ್ಯಾಕ್ಸ್ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದೆ ಅವರು ಖ್ಯಾತ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಕ್ಯಾನ್ಸರ್ ಸಮಸ್ಯೆಗೆ ಚಿಕಿತ್ಸೆ ನೀಡಿದ್ದ ವೈದ್ಯರಾಗಿದ್ದರು. ಅಲ್ಲಿ ಕಿಮೋ ಥೆರಪಿ, ರೇಡಿಯೋ ಥೆರಪಿಗಳಿಗೆ ಒಳಗಾದೆ. ಈ ಸಂದರ್ಭದಲ್ಲಿ ಬಹಳಷ್ಟು ಕಷ್ಟ ಆಯಿತು. ಸಾಕಷ್ಟು ಹಣ ಖರ್ಚು ಮಾಡಿದರೆ ಇದಕ್ಕೆ ಉತ್ತಮ ಚಿಕಿತ್ಸೆ ಕೊಡಿಸಬಹುದು ಎಂದು ಮ್ಯಾಕ್ಸ್ ಆಸ್ಪತ್ರೆಯ ವೈದ್ಯರು ನನಗೆ ಹೇಳಿದರು.’

‘ಹಣದ ಸಮಸ್ಯೆ ಇಲ್ಲ ಎಂದು ನಾನು ಅವರಿಗೆ ತಿಳಿಸಿದ್ದೆ. ಆದರೆ ಮಧ್ಯಮ ವರ್ಗದ ಅಥವಾ ಬಡವರ್ಗದ ವ್ಯಕ್ತಿಗೆ ಈ ಕಾಯಿಲೆ ಬಂದರೆ ಏನಿ ಗತಿ ಎಂದು ಯಾವಾಗಲೂ ಯೋಚಿಸುತ್ತಿದ್ದೇನೆ. ನನ್ನ ಶತ್ರುವಿಗೂ ಈ ಕಾಯಿಲೆ ಬರುವುದು ಬೇಡ ಎಂದು ಪ್ರಾರ್ಥಿಸುತ್ತೇನೆ.’

ಇದೀಗ ಮೆದುಳಿನ ಭಾಗಕ್ಕೂ ಕ್ಯಾನ್ಸರ್ ವ್ಯಾಪಿಸುತ್ತಿದೆ. ಈ ಮುತ್ತಪ್ಪ ರೈ ಸಾವಿಗೆ ಹೆದರುವ ಮನುಷ್ಯ ಅಲ್ಲ. 68 ವರ್ಷ ತುಂಬು ಜೀವನ ನಡೆಸಿದ್ದೇನೆ. ಯಾರಿಗೂ ತೊಂದರೆ ನೀಡದಂತೆ ನೆಮ್ಮದಿಯಾಗಿ ಸಾಯುವ ಅವಕಾಶವನ್ನು ಮಾತ್ರವೇ ದೇವರಲ್ಲಿ ಪ್ರತೀದಿನ ಪ್ರಾರ್ಥಿಸಿಕೊಳ್ಳುತ್ತಿದ್ದೇನೆ’ ಎಂದು ಅವರು ಭಾವುಕರಾಗಿ ನುಡಿದರು.

‘ನನ್ನಲ್ಲಿರುವ ಆಸ್ತಿಯ ಕುರಿತಾಗಿ ಈಗಾಗಲೇ ವಿಲ್ ಮಾಡಿಸಿಟ್ಟಿದ್ದೇನೆ. ಈ ಕುರಿತಾಗಿ ಮಕ್ಕಳಿಗೂ ಮಾಹಿತಿ ನೀಡಿದ್ದೇನೆ ಮಾತ್ರವಲ್ಲದೇ ಕಳೆದ 10-15 ವರ್ಷಗಳಿಂದ ನನ್ನ ಜೊತೆಯಲ್ಲೇ ಇರುವವರಿಗೆ ಒಂದೊಂದು ನಿವೇಶನ ಕೊಡುವಂತೆ ಸೂಚಿಸಿದ್ದೇನೆ. ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಿಸಿದ್ದೇನೆ’ ಎಂಬೆಲ್ಲಾ ಮಾಹಿತಿಯನ್ನು ಮುತ್ತಪ್ಪ ರೈ ಅವರು ಮಾಧ್ಯಮಗಳಿಗೆ ನೀಡಿದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.