ಕೋವಿಡ್ ನಿಯಮ ಪಾಲನೆಗೆ ಜಾಗೃತಿ
Team Udayavani, Apr 2, 2021, 12:06 PM IST
ರಾಮನಗರ: ಕೋವಿಡ್ ನಿಯಮ ಹಾಗೂ ದಂಡ ವಿಧಿಸುವ ಕುರಿತು ವಾಹನ ಸವಾರರಿಗೆ ಎಸ್ಪಿ ಗಿರೀಶ್ ಗುರುವಾರ ಅರಿವು ಮೂಡಿಸಿದರು. ಎಸ್ಪಿಯವರೊಟ್ಟಿಗೆ ನಗರ, ಐಜೂರು ಮತ್ತು ಗ್ರಾಮಾಂತರ ಠಾಣೆ ಅಧಿಕಾರಿಗಳು ಭಾಗವಹಿಸಿದ್ದರು. ಗುರುವಾರ ಸಂಜೆ 5ರ ವೇಳೆ ಐಜೂರು
ವೃತ್ತಕ್ಕೆ ಆಗಮಿಸಿದ ಪೊಲೀಸ್ ಪಡೆ, ಸಿಗ್ನಲ್ನಲ್ಲಿ ನಿಂತು ಸಾರ್ವಜನಿಕರಿಗೆ ಕೋವಿಡ್ ಬಗ್ಗೆ ಅರಿವು ಮೂಡಿಸಿದರು. ಮಾಸ್ಕ್, ಕರ ಪತ್ರ ಕೊಟ್ಟು ಕೋವಿಡ್ ಸೋಂಕು ನಿಯಂತ್ರಣಕ್ಕೆ ನಿಯಮಗಳ ಪಾಲನೆ ಅನಿವಾರ್ಯ ಎಂದು ಮಾಹಿತಿ ಕೊಟ್ಟರು. ಅಲ್ಲದೇ, ಉದ್ಧಟತನ ತೋರಿದ ಕೆಲವರಿಗೆ ಪೊಲೀಸರು ದಂಡ ವಿಧಿಸಿದರು. ಐಜೂರು ವೃತ್ತದಿಂದ ಕನಕಪುರ ವೃತ್ತದವರೆಗೂ ಜಾಥಾ ನಡೆಸಿದ ಪೊಲೀಸರು,ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಕೆಲ ಅಂಗಡಿಗಳ ವರ್ತಕರಿಗೂ ದಂಡ ವಿಧಿಸಿದರು.
ವಾಹನ ಚಾಲಕರು ಅಲ್ಲಲ್ಲೇ ವಾಹನಗಳನ್ನು ನಿಲ್ಲಿಸಿ ತರಾತುರಿಯಲ್ಲಿ ಮಾಸ್ಕ್, ಹೆಲ್ಮೆಟ್ ಧರಿಸಿಮುಂದೆ ಸಾಗುತ್ತಿದ್ದರು. ಶುಕ್ರವಾರದಿಂದ ಪ್ರತಿದಿನ ಆಯಾ ಠಾಣೆ ವ್ಯಾಪ್ತಿಯಲ್ಲಿ ನಿತ್ಯ 2 ಗಂಟೆ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿಯಮ ಪಾಲಿಸಬೇಕಾಗಿದೆ. ಕೆಲವರು ಪತ್ರಕರ್ತರ ಹೆಸರನ್ನು ದುರ್ಬಳಕೆ ಮಾಡಿಕೊಂಡು, ಪ್ರಸ್ ಬೋರ್ಡ್ಗಳನ್ನುವಾಹನಗಳ ಮೇಲೆ ಅಂಟಿಸಿಕೊಂಡು ಸಂಚರಿಸುತ್ತಿದ್ದಾರೆ. ಮುಂದಿನದಿನಗಳಲ್ಲಿ ಅಂತಹವರ ವಿರುದ್ಧ ಕಾರ್ಯಾಚರಣೆ ನಡೆಸಲಾಗುವುದು. ● ಎಸ್.ಗಿರೀಶ್, ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ, ರಾಮನಗರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ