ಚೀಲೂರು ಗ್ರಾಮದಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಭರ್ಜರಿ ಸ್ವಾಗತ


Team Udayavani, Mar 29, 2021, 12:19 PM IST

ಚೀಲೂರು ಗ್ರಾಮದಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಭರ್ಜರಿ ಸ್ವಾಗತ

ಕನಕಪುರ: ಚರ್ಚೆಗೆ ಗ್ರಾಸವಾಗಿದ್ದ ಚೀಲೂರು ಗ್ರಾಮದ ಘಟನೆ ಸಂಬಂಧ ಸ್ಪಷ್ಟನೆ ನೀಡಲು ಬಂದಿದ್ದ ನಿಖಿಲ್ ಕುಮಾರ ಸ್ವಾಮಿಗೆ ಗ್ರಾಮದ ಜನರು ಭರ್ಜರಿ ಸ್ವಾಗತ ನೀಡಿದ್ದಾರೆ.

ತಾಲೂಕಿನ ಮರಳವಾಡಿ ಹೋಬಳಿಯ ಚೀಲೂರು ಗ್ರಾಮದಲ್ಲಿ ಮಾ.23ರ ಮಂಗಳವಾರ ನಡೆದ ಪೌರಾಣಿಕ ನಾಟಕ ಪ್ರದರ್ಶನಕ್ಕೆ ಆಹ್ವಾನದ ಮೇರೆಗೆ ಬಂದಿದ್ದರು. ಈ ವೇಳೆ ಭಾಷಣಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಕೆಂಡಾಮಂಡಲವಾಗಿದ್ದ ನಿಖಿಲ್ ಕುಮಾರಸ್ವಾಮಿ ನೀವು ಏನ್‌ ದಬ್ಬಾಕ್ಕಿದ್ದೀರಾ ಬಂದು ಹೇಳಿ ಎಂದು ಸವಾಲು ಹಾಕಿದರು. ಬಳಿಕ ಅಲ್ಲಿಂದ ನಿರ್ಗಮಿಸಿದರು.

ಈ ವಿಚಾರ ತಡವಾಗಿ ಬೆಳಕಿಗೆ ಬಂದುಚೆರ್ಚೆಗೆ ಗ್ರಾಸವಾಗಿ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿಸ್ಪಷ್ಟನೆ ನೀಡಲು ಭಾನುವಾರ ಚೀಲೂರು ಗ್ರಾಮಕ್ಕೆ ಭೇಟಿ ನೀಡಿದ್ದ ನಿಖಿಲ್ ಕುಮಾರಸ್ವಾಮಿಗೆ ಗ್ರಾಮದ ಮಹಿಳೆಯರುಆರತಿ ಎತ್ತಿ ಹಣೆಗೆ ತಿಲಕ ಇಟ್ಟುಬರಮಾಡಿಕೊಂಡರು. ಯುವ ಕಾರ್ಯಕರ್ತರು ಪಟಾಕಿ ಸಿಡಿಸಿ ನಿಖೀಲ್‌ಕುಮಾರ ಸ್ವಾಮಿ ಅವರನ್ನು ಹೆಗಲ ಮೇಲೆಹೊತ್ತು ಮೆರವಣಿಗೆ ಮಾಡಿ ಭರ್ಜರಿಯಾಗಿ ಸ್ವಾಗತ ಮಾಡಿದರು.

ದೇವರಿಗೆ ವಿಶೇಷವಾದ ಪೂಜೆ ಸಲ್ಲಿಸಿದ ಅವರು ನಂತರ ಮಾತನಾಡಿ, ಮೊನ್ನೆ ನಡೆದ ಘಟನೆಗೆ ವಿಷಾದ ವ್ಯಕ್ತಪಡಿಸಿದರು. ನಾಟಕ ಪ್ರದರ್ಶನಕ್ಕೆ ಅತ್ಯಂತ ಪ್ರೀತಿಯಿಂದ ನೀವುನನ್ನನ್ನು ಬರ ಮಾಡಿಕೊಂಡಿದ್ರಿ. ನನ್ನಿಂದಲೇ ಗೊಂದಲ ಸೃಷ್ಟಿಯಾಯಿತು ಎಂಬ ನೋವು ಮನಸ್ಸಿನಲ್ಲಿ ಕಾಡುತ್ತಿತ್ತು. ಈ ವಿಚಾರದ ಬಗ್ಗೆಊರಿನ ಹಲವಾರು ಮುಖಂಡರಿಗೆ ಕರೆ ಮಾಡಿ ಸಲಹೆ ಪಡೆದುಕೊಂಡು ಮತ್ತೆ ಗ್ರಾಮಕ್ಕೆ ಭೇಟಿನೀಡಿ ಗೊಂದಲಕ್ಕೆ ತೆರೆ ಎಳೆಬೇಕು ಎಂದು ನಿರ್ಧಾರ ಮಾಡಿ ಬಂದಿದ್ದೇನೆ. ಮೊನ್ನೆ ನಡೆದಘಟನೆ ಮುಗಿದು ಹೋದ ಅಧ್ಯಾಯ ಅದನ್ನೇ ಮುಂದುವರಿಸೋದು ಬೇಡ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ನಾನು ಯಾವುದೇ ದುರುದ್ದೇಶ ಇಟ್ಟುಕೊಂಡು ಇಲ್ಲಿಗೆ ಬಂದಿಲ್ಲ.ದೇವೇಗೌಡರ ಕಾಲದಿಂದ ನೀವು ನಮ್ಮ ಪರ ನಿಂತಿದ್ದೀರಾ. ಕುಮಾರಣ್ಣ ಮೂಲತಃ ಹಾಸನದವರಾದ್ರೂ ರಾಜಕೀಯವಾಗಿ ರಾಮನಗರದಲ್ಲಿ ನೆಲೆ ಕಂಡುಕೊಂಡಿದ್ದಾರೆ. ಅದಕ್ಕೆಲ್ಲಾ ಕಾರಣಕರ್ತರು ನೀವು. ಈಗ ಬೇಸಿಗೆ ಆರಂಭವಾಗಿದೆಕುಡಿಯುವ ನೀರಿನ ಸಮಸ್ಯೆ ಬಗ್ಗೆಹರಿಸಲುಈಗಾಗಲೇ ಕೆಲವು ಟ್ಯಾಂಕರ್‌ಗಳನ್ನು ಖರೀದಿಮಾಡಿದ್ದೇನೆ. ಎಲ್ಲಿ ನೀರಿನ ಸಮಸ್ಯೆ ಇದೆ ಅಂಥ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರುಪೂರೈಸುವ ವ್ಯವಸ್ಥೆ ಮಾಡಿದ್ದೇವೆ. ಪ್ರತಿಪಂಚಾಯ್ತಿ ವ್ಯಾಪ್ತಿಯಲ್ಲಿ ಏನು ಸಮಸ್ಯೆ ಇದೆಅಂತಾ ಪಟ್ಟಿ ಮಾಡಿ ಕೊಡಲು ನಮ್ಮಕಾರ್ಯಕರ್ತರಿಗೆ ಹೇಳಿದ್ದೇನೆ. ನಿಮ್ಮ ಮನೆ ಮಗನ ಹಾಗೆ ನಿಮ್ಮ ಸಮಸ್ಯೆ ಬಗೆಹರಿಸುವ ಜವಾಬ್ದಾರಿ ಮತ್ತು ಹೊಣೆ ನನ್ನ ಮೇಲಿದೆ ಎಂದರು.

ಹಾರೋಹಳ್ಳಿ ಮತ್ತು ಮರಳವಾಡಿಹೋಬಳಿಯ ಜೆಡಿಎಸ್‌ ಮುಖಂಡರು ಕಾರ್ಯಕರ್ತರು ಚೀಲೂರು ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.