ಕೆಐಎಡಿಬಿಯಿಂದ ಫ‌ಲವತ್ತಾದ ಭೂಮಿ ಸ್ವಾಧೀನ ಬೇಡ


Team Udayavani, Feb 14, 2023, 12:56 PM IST

tdy-12

ಮಾಗಡಿ: ನಾರಸಂದ್ರ-ಮರೂರು ವ್ಯಾಪ್ತಿಯ ರೈತರ ಫ‌ಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆ ಸ್ಥಾಪನೆ ಮಾಡುವುದನ್ನು ವಿರೋಧಿಸಿ ಎರಡು ವರ್ಷದಿಂದ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯ ಕಂಡಿದೆ. ಅಂದರೆ, ಕೊನೆಗೂ ಶಾಸಕ ಎ.ಮಂಜುನಾಥ್‌ ಅವರು, ಕೆಐಎಡಿಬಿ ಭೂ ಸ್ವಾಧೀನ ಕೈಬಿಡುವಂತೆ ಪತ್ರ ಬರೆದುಕೊಟ್ಟು ರೈತರ ಹೋರಾಟಕ್ಕೆ ಮಣಿದಿದ್ದಾರೆ.

ತಾಲೂಕಿನ ನಾರಸಂದ್ರ, ಮರೂರು ಶಿವನಸಂದ್ರ ಗ್ರಾಮದ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿತ್ತು. ಕೆಐಎಡಿಬಿ ಕೈಗಾರಿಕೆ ಸ್ಥಾಪನೆಗೆ ಶಾಸಕರು ಪತ್ರ ಬರೆದಿದ್ದರು. ಈ ವೇಳೆ, ರೈತರು ತಮ್ಮ ಫ‌ಲವತ್ತಾದ ಜಮೀನನ್ನು ಎಲ್ಲಿ ಕಳೆದುಕೊಂಡು ಬೀದಿಪಾಲಾಗುತ್ತೇವೆಯೋ ಎಂದು ತಿಳಿದು ಶಾಸಕರ ವಿರುದ್ಧ ನಿರಂತರವಾಗಿ ಹೋರಾಟ, ಶಾಸಕರ ಕಾರಿಗೆ ಮುತ್ತಿಗೆ, ಬಹಿಷ್ಕಾರ ಯತ್ನ ಸೇರಿದಂತೆ ಹಲವು ಪ್ರತಿಭಟನೆಗಳನ್ನು ನಡೆಸಿದ್ದರು.

ಮುತ್ತಿಗೆ ಹಾಕಿದ್ದರು: ಇನ್ನು ಶನಿವಾರ ಕುದೂರಿಗೆ ತೆರಳುತ್ತಿದ್ದ ವೇಳೆ ಮರೂರು ಬಳಿ ಶಾಸಕರ ಕಾರು ತಡೆದು ರೈತರು ಮುತ್ತಿಗೆ ಹಾಕಲು ಯತ್ನಿಸಿದರು. ಅಲ್ಲದೇ, ಕೈಗಾರಿಕಾ ಪ್ರದೇಶವನ್ನು ಕೈಬಿಡುವಂತೆ ಕೆಐಎಡಿಬಿಗೆ ಪತ್ರ ಬರೆದುಕೊಡುವಂತೆ ಪಟ್ಟು ಹಿಡಿದರು.

ಈ ವೇಳೆ ಶಾಸಕರು, ರೈತರ ವಿರೋಧದ ನಡುವೆ ಕೈಗಾರಿಕೆ ಸ್ಥಾಪನೆ ಬೇಡವೆನ್ನುವುದಾದರೆ ಶಾಸಕರ ಭವನಕ್ಕೆ ಬನ್ನಿ. ಪತ್ರ ಬರೆದುಕೊಡುವುದಾಗಿ ರೈತರ ಮನವೊಲಿಸಿದ್ದರು. ಅದರಂತೆ ರೈತರ ನಿಯೋಗ ಸೋಮವಾರ ಶಾಸಕರ ಭವನ ದಲ್ಲಿ ಶಾಸಕರನ್ನು ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ಶಾಸಕರು, ಕೈಗಾರಿಕಾ ಪ್ರದೇಶವನ್ನು ಕೈ ಬಿಡುವ ಕುರಿತು ಕೆಐಎಡಿಬಿ ಅಧಿಕಾರಿಗಳಿಗೆ ಪತ್ರ ಬರೆದುಕೊಟ್ಟರು.

ರೈತರಿಗೆ ನೆಮ್ಮದಿ: ಮಾಗಡಿ ಕೆಂಪೇಗೌಡ ಭೂ ಹೋರಾಟ ಸಮಿತಿ ಅಧ್ಯಕ್ಷ ಜಯರಾಮು (ಬಾಬು )ಮಾತನಾಡಿ, ರೈತರ ಹೋರಾಟಕ್ಕೆ ಜಯಸಿಕ್ಕಿದ್ದು, ಸಂತಸ ತಂದಿದೆ. ನಮಗೆ ಇದು ನೆಮ್ಮದಿಯ ದಿನವಾಗಿದೆ. ನಾವು ಜಮೀನು ಕಳೆದುಕೊಂಡು ಬೀದಿಗೆ ಬೀಳುತ್ತೇವೆ ಎಂದು ಭಯಗೊಂಡಿದ್ದೆವು. ಇದರಿಂದ ಮುಂದಿನ ಜೀವನ ಹೇಗೆ ಎಂದು ರೈತರು ಕಳೆದ ಎರಡು ವರ್ಷಗಳಿಂದ ನೆಮ್ಮದಿ ಕಳೆದುಕೊಂಡಿದ್ದರು. ಸೋಮವಾರ ಶಾಸಕರು ರೈತರ ಬಗ್ಗೆ ಕಾಳಜಿ ವಹಿಸಿ, ಪಕ್ಷದ ಸಿದ್ಧಾಂತದ ವಿರುದ್ಧ ನಡೆದುಕೊಳ್ಳಬಾರದು, ರೈತರು ಉಳಿಯಬೇಕೆಂದು ಕೈಗಾರಿಕೆ ಬೇಡ, ಭೂಸ್ವಾಧೀನ ಕೈಬಿಡುವಂತೆ ಕೆಐಎಡಿಬಿ, ಮುಖ್ಯಮಂತ್ರಿ, ಕೈಗಾರಿಕಾ ಸಚಿವರಿಗೆ ಶಾಸಕರು ಪತ್ರ ಬರೆದಿದ್ದಾರೆ. ರೈತರೆಲ್ಲರೂ ಶಾಸಕರಿಗೆ ಚಿರಋಣಿಯಾಗಿದ್ದೇವೆ. ಶಾಸಕರು ರೈತ ವಿರೋಧಿ ಪಟ್ಟ ಅಳಿಸಿಕೊಂಡಿದ್ದಾರೆ. ರೈತರು ನೆಮ್ಮದಿ ಯಾಗಿ ಇರುವಂತೆ ತಿಳಿಸಿದ್ದಾರೆಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಶಿವ ಪ್ರಸಾದ್‌, ಮರೂರು ಸಾಗರ್‌ ಗೌಡ, ಶಂಕರಪ್ಪ, ಮರೂರು ಕುಮಾರ್‌, ನರಸೇಗೌಡ, ನಾಗರಾಜು, ಗೋವಿಂ ದಯ್ಯ, ಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು.

ಶಾಸಕರು ಬರೆದಿರುವ ಪತ್ರದ ಸಾರಾಂಶ ಏನು? : ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ರೈತರ ಜಮೀನು ಫ‌ಲವತ್ತಾದ ಭೂಮಿ, ತೆಂಗು, ಅಡಕೆ, ಮಾವು ಸೇರಿದಂತೆ ತೋಟಗಾರಿಕೆ, ರೇಷ್ಮೆ, ಹೈನುಗಾರಿಕೆ ಒಳಗೊಂಡಿದೆ. ಬಹುಪಾಲು ರೈತರು ಭೂಸ್ವಾಧೀನ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟು ರೈತರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವ್ಯವಸಾಯಕ್ಕೆ ಯೋಗ್ಯವಲ್ಲದ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವುದು ಸೂಕ್ತವೆಂದು ಕೈಗಾರಿಕಾ ಸಚಿವ ಮುರುಗೇಶ್‌ ಆರ್‌.ನಿರಾಣಿ ಅವರಿಗೆ ಶಾಸಕ ಎ.ಮಂಜುನಾಥ್‌ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.