Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

ಕನಕಪುರ, ಬನ್ನೇರುಘಟ್ಟ ಅರಣ್ಯದಲ್ಲಿ ಮೃತದೇಹ ಪತ್ತೆ

Team Udayavani, Apr 8, 2024, 1:13 AM IST

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

ರಾಮನಗರ: ರಾಜ್ಯದಲ್ಲಿ ಬಿಸಿಲ ಝಳಕ್ಕೆ ಜನರ ಜತೆಗೆ ಪ್ರಾಣಿಗಳೂ ಬಸವಳಿದಿವೆ. ಅದಕ್ಕೆ ಪೂರಕವಾಗಿ ರಾಜ್ಯದಲ್ಲಿ ಎರಡು ಕಾಡಾನೆಗಳು ಬಿಸಿಲ ಝಳ, ನೀರಿಲ್ಲದೆ ಜೀವ ಕಳೆದುಕೊಂಡಿವೆ ಎಂಬ ಶಂಕೆ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿ ಹಳ್ಳಿ ಹೋಬಳಿ ಗರಳಾಪುರ ಗ್ರಾಮದ ಸಮೀಪ 14 ವರ್ಷದ ಕಾಡಾನೆಯ ಮೃತದೇಹ ಪತ್ತೆಯಾಗಿದೆ. ಇದೇ ಹೋಬಳಿಯ ಯಳವನಾಥ ಗ್ರಾಮದ ಅರಣ್ಯದಲ್ಲಿ 34 ವರ್ಷದ ಮತ್ತೊಂದು ಆನೆ ಸಾವಿಗೀಡಾಗಿದೆ.

ನಿತ್ರಾಣಗೊಂಡಿದ್ದ ಆನೆ
ಮೂರು ದಿನಗಳ ಹಿಂದೆ 14 ವರ್ಷದ ಗಂಡಾನೆ ಬಿಸಿಲ ಬೇಗೆಯಿಂದಾಗಿ ಪೂರ್ಣ ನಿತ್ರಾಣಗೊಂಡಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಯನ್ನು ಉಪಚರಿಸಿ ಮತ್ತೆ ಅರಣ್ಯಕ್ಕೆ ಬಿಟ್ಟಿದ್ದರು. ಈಗ ಅದೇ ಆನೆ ಸಾವಿಗೀಡಾಗಿದೆ.

ಮತ್ತೊಂದು ಆನೆ ಕನಕಪುರ ತಾಲೂಕಿನ ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಸೇರಿದ್ದ ಸ್ಥಳದಲ್ಲಿ ಸಾವಿಗೀಡಾಗಿದ್ದು, ಬಿಸಿಲಿನ ತಾಪಮಾನ ಹೆಚ್ಚಾಗಿರುವುದೇ ಆನೆಗಳ ಸಾವಿಗೆ ಕಾರಣ ಎನ್ನಲಾಗಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಮನಗರ ಡಿಎಫ್ಒ ರಾಮಕೃಷ್ಣಪ್ಪ, “ಗರಳಾಪುರ ಗ್ರಾಮದ ಬಳಿ ಆನೆ ಸಾವಿಗೀಡಾಗಲು ಹೊಟ್ಟೆ ಉಬ್ಬರ ಕಾರಣ. ಬೇರೇನೂ ಮೇವು ಸಿಗದೆ ಮಾವಿನ ಕಾಯಿಯನ್ನು ಹೆಚ್ಚಿನ ಪ್ರಮಾಣದಲ್ಲಿ ತಿಂದು ಆಮ್ಲಿàಯತೆ ಹೆಚ್ಚಾಗಿ ಮೆಟೋಬಾಲಿಕ್‌ ಆಸಿಡೋಸಿಸ್‌ ನಿಂದ ಸಾವಿಗೀಡಾಗಿದೆ’ ಎಂದಿದ್ದಾರೆ.

ಹೊಟ್ಟೆಯಲ್ಲಿತ್ತು ಮಾವಿನಕಾಯಿ
ಗರಳಾಪುರ ಬಳಿ ಸಾವಿಗೀಡಾಗಿರುವ 14 ವರ್ಷದ ಕಾಡಾನೆಯ ಮರಣೋತ್ತರ ಪರೀಕ್ಷೆ ವೇಳೆ ಹೊಟ್ಟೆಯಲ್ಲಿ ಮಾವಿನಕಾಯಿ ಕಂಡುಬಂದಿದೆ. ಇನ್ನು 35 ವರ್ಷದ ಆನೆಯ ಸಾವಿಗೆ ಸೋಂಕು ಕಾರಣ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಆದರೆ ಸ್ಥಳೀಯರ ಪ್ರಕಾರ ಆನೆಗೆ ಬೇಕಾದ ಮೇವು ಮತ್ತು ನೀರು ವನ್ಯ ಜೀವಿ ಪ್ರದೇಶದಲ್ಲಿ ಸಿಗದಿರುವುದು ಸಾವಿನ ಕಾರಣಗಳಿಗೆ ಸೇರಿವೆ.

ರಾಯಚೂರಲ್ಲಿ ವೃದ್ಧ ಸಾವು
ರಾಯಚೂರು: ಬಿಸಿಲ ಝಳಕ್ಕೆ ವೃದ್ಧನೊಬ್ಬ ಬಸವಳಿದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಕ್ಲಾಸಪುರ ಗ್ರಾಮದ ರಾಮಣ್ಣ ಕಬ್ಬೇರ್‌ (70) ಮೃತಪಟ್ಟ ವರು. ಭಿಕ್ಷೆ ಬೇಡಿ ಜೀವಿಸುತ್ತಿದ್ದ ಅವರು ರವಿವಾರ ಹೊಟೇಲ್‌ ಬಳಿ ನಿಶ್ಶಕ್ತಿಯಿಂದ ಮಲಗಿದ್ದು ಅಲ್ಲಿಯೇ ಮೃತಪಟ್ಟರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.