- Wednesday 11 Dec 2019
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ
ಚುನಾವಣೆಯಲ್ಲಿ ಒಟ್ಟು 65 ಮಂದಿ ಮತ, ಚಲಾವಣೆ ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭ
Team Udayavani, Jul 5, 2019, 12:05 PM IST
ರಾಮನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ತು ಸದಸ್ಯ ಸ್ಥಾನಕ್ಕೆ ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಸಿದರು.
ರಾಮನಗರ: 2019-24ನೇ ಅವಧಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ತು ಸದಸ್ಯ ಸ್ಥಾನಕ್ಕೆ ಇದೇ ಜುಲೈ 11 ರಂದು ಚುನಾವಣೆ ನಿಗದಿಯಾಗಿದೆ. ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ನಿಕಟ ಪೂರ್ವ ಅಧ್ಯಕ್ಷ ಆರ್.ಕೆ.ಬೈರಲಿಂಗಯ್ಯ, ರಾಜ್ಯ ಪರಿಷತ್ತು ಸದಸ್ಯ ಸ್ಥಾನಕ್ಕೆ ಕೆ.ಸತೀಶ್ ಮತ್ತು ಖಜಾಂಚಿ ಸ್ಥಾನಕ್ಕೆ ನರಸಯ್ಯ ಅವರುಗಳು ಗುರುವಾರ ನಾಮಪತ್ರ ಸಲ್ಲಿಸಿದರು.
ಅಧ್ಯಕ್ಷ, ಖಜಾಂಚಿ ಸ್ಥಾನಕ್ಕೆ ಚುನಾವಣೆ: ನಗರದ ಜಿಲ್ಲಾ ಸರ್ಕಾರಿ ನೌಕರರ ಸ್ಫೂರ್ತಿ ಭವನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಂತರ ಆರ್.ಕೆ.ಬೈರಲಿಂಗಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ, ರಾಜ್ಯ ಪರಿಷತ್ತು ಮತ್ತು ಖಜಾಂಚಿ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲಾ ಕೇಂದ್ರ ಸ್ಥಾನದಲ್ಲಿ 62 ನಿರ್ದೇಶಕರು ಮತ್ತು 3 ತಾಲೂಕಿನ ಅಧ್ಯಕ್ಷರು ಸೇರಿ ಒಟ್ಟು 65 ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.
ಆಯ್ಕೆಯಾಗುವ ವಿಶ್ವಾಸ: ಇತ್ತೀಚೆಗಷ್ಟೆ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ತಮ್ಮ ಸಿಂಡಿಕೇಟ್ನ ಬಹುತೇಖ ಸದಸ್ಯರು ಆಯ್ಕೆಯಾಗಿದ್ದಾರೆ. ಅವರೆಲ್ಲರ ಸಹಕಾರದಿಂದ ತಾವು, ಸತೀಶ್ ಹಾಗೂ ನರಸಯ್ಯ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ಅವಧಿಯಲ್ಲಿ ಸದಸ್ಯರೆಲ್ಲ ಸಹಕಾರದಲ್ಲಿ ಸಂಘ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದೆ. ತಮ್ಮ ಕಾರ್ಯನಿರ್ವಹಣೆಯ ಬಗ್ಗೆಯೂ ತಮಗೆ ತೃಪ್ತಿ ಇದೆ. ಮೂರನೇ ಬಾರಿಗೂ ತಾವು ಅಧ್ಯಕ್ಷರಾಗಿ ಆಯ್ಕೆಯಾಗುವ ವಿಶ್ವಾಸವಿದೆ. ಇದಕ್ಕೆ ನಿರ್ದೇಶಕರು ತಮಗೆ ಶಕ್ತಿ ತುಂಬಲಿದ್ದಾರೆ ಎಂದು ತಿಳಿಸಿದರು.
ಸಂಘ ಬಲಿಷ್ಟಗೊಳಿಸಲು ಚಿಂತನೆ: ಸಂಘವನ್ನು ಇನ್ನಷ್ಟು ಬಲಿಷ್ಟಗೊಳಿಸುವ ಉದ್ದೇಶವಿದೆ. ಇದಕ್ಕೆ ಪೂರಕವೆಂಬಂತೆ ಉತ್ತಮ ಚಿಂತನೆ ಮಾಡುವ ನಿರ್ದೇಶಕರ ತಂಡ ತಮ್ಮೊಂದಿಗಿದೆ. ಸಂಘದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಉಳಿದ ಪದಾಧಿಕಾರಿಗಳನ್ನು ನೂತನ ಅಧ್ಯಕ್ಷರೇ ನೇಮಕ ಮಾಡಲಿದ್ದಾರೆ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ನಾಮಪತ್ರ ಸಲ್ಲಿಸುವ ವೇಳೆ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ನಿರ್ದೇಶಕರಾದ ಸತೀಶ್, ನರಸಯ್ಯ, ಶಿವಸ್ವಾಮಿ, ಎಂ.ರಾಜೇಗೌಡ, ಪುಟ್ಟಸ್ವಾಮಿಗೌಡ, ಮಂಜುನಾಥ್, ಮಹೇಶ್, ಯೋಗೇಶ್ಗೌಡ, ಎಂ. ಅನಿತಾ, ಸಂಜೀವೇಗೌಡ, ಕೃಷ್ಣೇಗೌಡ, ಹೊನ್ನಯ್ಯ, ಪ್ರೌಢಶಾಲಾ ಶಿಕ್ಷಕರಾದ ಕರಡೀಗೌಡ, ಸತೀಶ್ ಸೇರಿದಂತೆ ಅನೇಕರು ಹಾಜರಿದ್ದರು. ಚುನಾವಣಾಧಿಕಾರಿಯಾಗಿ ಕರೀಗೌಡ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ವೆಂಕಟಪ್ಪ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ರಾಮನಗರ: ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷವಹಿಸುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತೆ ಶಿಪಾರಸ್ಸು ಮಾಡುವುದಾಗಿ ಮಾಗಡಿ ಕ್ಷೇತ್ರದ ಶಾಸಕ...
-
ರಾಮನಗರ: ಹಲವಾರು ವರ್ಷಗಳಿಂದ ಗ್ಯಾಸ್ ಗೋಡೌನ್ ಸ್ಥಳಾಂತರಕ್ಕೆ ನೀಡಿದ ಮನವಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ವಿವೇಕಾನಂದ ನಗರ ನಿವಾಸಿ ರಾಜು ಅವರು ಶಾಸಕಿ...
-
ಕನಕಪುರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಹನುಮ ಜಯಂತಿ ಅಂಗವಾಗಿ ನಗರದ ಹನುಮ ದೇವಾಲಯಗಳಲ್ಲಿ ವಿಶೇಷ ಪೂಜೆ ಅನ್ನಸಂತರ್ಪಣೆ ಏರ್ಪಡಿಸಿ ಅದ್ಧೂರಿಯಾಗಿ ಹನುಮ ಜಯಂತಿ...
-
ಕುದೂರು: ಐತಿಹಾಸಿಕ ಪ್ರಸಿದ್ಧ ಕುದೂರು ಭೈರವನ ದುರ್ಗ ಬೆಟ್ಟದಲ್ಲಿ ಕಿಡಿಗೇಡಿಗಳು ಶನಿವಾರ ರಾತ್ರಿ ನಿಧಿ ಶೋಧನೆ ನಡೆಸಿದ ಶಂಕೆ ವ್ಯಕ್ತವಾಗಿದೆ. ಭೈರವನದುರ್ಗ...
-
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ವಿಭೂತಿಕೆರೆ ಗ್ರಾಮದ ಮಾವಿನ ತೋಟವೊಂದರಲ್ಲಿ ಶನಿವಾರ ರಾತ್ರಿ ನಡೆಯುತ್ತಿದ್ದ ಅಕ್ರಮ ರೇವ್ ಪಾರ್ಟಿಯ ಮೇಲೆ ಗ್ರಾಮಾಂತರ...
ಹೊಸ ಸೇರ್ಪಡೆ
-
ಮಡಿಕೇರಿ: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವಿಪರೀತವಾಗಿದ್ದು, ಕಾಡಾನೆ ಹಾವಳಿಯಿಂದಾಗಿ ಮಾನವ ಪ್ರಾಣ ಹಾನಿ, ಬೆಳೆ ಹಾನಿ ಉಂಟಾಗುತ್ತಿದ್ದು, ಜನರು ಭಯ ಭೀತಿಯಿಂದ...
-
ಹೊಸದಿಲ್ಲಿ: ಕಳೆದ ಕೆಲವು ತಿಂಗಳಿನಿಂದ ಆರ್ಥಿಕ ವಲಯದಲ್ಲಾಗುತ್ತಿರುವ ಏರಿಳಿತ ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಲಿದೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ....
-
ಮಂಗಳೂರು: ದೇಶ, ಧರ್ಮ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಆಗುವುದಿಲ್ಲ, ಬಿಜೆಪಿಯ ಮುಂದಿನ ಚುನಾವಣಾ ವಿಷಯ ಇದು. ಎಲ್ಲರೂ ಒಂದಾಗಿ ಇದನ್ನು ವಿರೋಧಿಸಬೇಕು ಎಂದು...
-
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ಶಾಲೆ ಪ್ರಾರಂಭವಾದ ದಿನದಂದೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸುವಂತೆ ಕ್ರಮಕೈಗೊಳ್ಳಬೇಕು...
-
ನವದೆಹಲಿ: ಅಯೋಧ್ಯೆ ಭೂ ವಿವಾದದ ಕುರಿತು ನೀಡಿರುವ ತೀರ್ಪಿನ ಬಗ್ಗೆ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ತೆರೆದ ಕೋರ್ಟ್ (ಒಪನ್ ಕೋರ್ಟ್) ನಲ್ಲಿ...