ಕಂಚುಗಾರನಹಳ್ಳಿ ಗ್ರಾಪಂ ವ್ಯಾಪ್ತಿ ಭೂ ಸ್ವಾಧೀನಕ್ಕೆ ಆಕ್ಷೇಪ


Team Udayavani, Feb 1, 2020, 5:31 PM IST

rn-tdy-1

ರಾಮನಗರ: ಕೈಗಾರಿಕಾ ಪ್ರದೇಶ ಸ್ಥಾಪನೆಗೆಂದು ತಾಲೂಕಿನ ಬಿಡದಿ ಹೋಬಳಿ ಕಂಚುಗಾರನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಗ್ರಾಮದ ರೈತರು ಆಕ್ಷೇಪ ವ್ಯಕ್ತಪಡಿಸಿದ್ದು, ಕೆಐಎಡಿಬಿ ಅಧಿಕಾರಿಗಳು ಸಭೆ ಮುಂದೂಡಿದರು.

ಶುಕ್ರವಾರ ತಾಲೂಕಿನ ಕಂಚುಗಾರನಹಳ್ಳಿ ಗ್ರಾಪಂ ಕಚೇರಿಯಲ್ಲಿ ಸಭೆ ಆಯೋಜಿಸಿತ್ತು. ಗ್ರಾಪಂ ವ್ಯಾಪ್ತಿಯಲ್ಲಿ ಸ್ವಾಧೀನಕ್ಕೆ ಗುರುತಿಸಲಾಗಿರುವಭೂಮಿಯ ಮಾಲೀಕರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಕಂಚು ಗಾರನಹಳ್ಳಿ ಗ್ರಾಮಕ್ಕೆ ಸಂಬಂಧಿಸಿದ ಸುಮಾರು 500 ಎಕರೆ ಭೂಮಿಯ ಮಾಲಿಕರು ಮತ್ತು ರೈತರು ಸ್ವಾಧೀನಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಆಕ್ಷೇಪಣೆ ಏಕೆ? ಜೆಡಿಎಸ್‌-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಬಿಡದಿ ಸಮೀಪ ಉಪನಗರ(ಟೌನ್‌ ಶಿಫ್) ಮಾಡುವ ಉದ್ದೇಶದಿಂದ ಬೈರಮಂಗಲ ಮತ್ತು ಕಂಚುಗಾರನಹಳ್ಳಿಯ ಗ್ರಾಮಪಂಚಯ್ತಿಗಳ ವ್ಯಾಪ್ತಿಯಲ್ಲಿ 9600 ಎಕರೆ ಪ್ರದೇಶವನ್ನು ಕೆಂಪು ವಲಯ(ರೆಡ್‌ ಜೋನ್‌)ವೆಂದು ಘೋಷಿಸಿದೆ.

ವರ್ಷಗಳು ಉರುಳಿದರೂ ಟೌನ್‌ಶಿಪ್‌ ನಿರ್ಮಿಸುವ ಕಾರ್ಯ ನಡೆಯಲಿಲ್ಲ. ಇನ್ನೊಂದೆಡೆ ರೆಡ್‌ ಜೋನ್‌ ಎಂದು ಘೋಷಿಸಿದ್ದರಿಂದ ರೈತರು, ಭೂ ಮಾಲೀಕರು ಭೂಮಿಯ ಅಭಿವೃದ್ದಿ ಮಾಡುವು ದಾಗಲಿ, ಮಾರಾಟ ಮಾಡುವುದಾಗಲಿ ಸಾಧ್ಯವಾಗಿರಲಿಲ್ಲ. ಇದು ರೈತರಲ್ಲಿ ಸಹಜವಾಗಿ ಆಕ್ರೋಶಕ್ಕೆ ಕಾರಣವಾಗಿತ್ತು.

ಭೂ ಸ್ವಾಧೀನಕ್ಕೆ ಬಂದಿದ್ದ ಅಧಿಕಾರಿಗಳು: ಇದೀಗ ಬಿಡದಿ ಹೋಬಳಿ ಕಂಚುಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಕಂಚುಗಾರನಹಳ್ಳಿ ಮತ್ತು ಕಂಚುಗಾರನಹಳ್ಳಿ ಕಾವಲ್‌ ಗ್ರಾಮಗಳು, ಕನಕಪುರ ತಾಲೂಕಿನ ಹಾರೋಹಳ್ಳಿ ಗ್ರಾಪಂ ವ್ಯಾಪ್ತಿಯ ಎರೆಹಳ್ಳಿ ಮತ್ತು ಮುಡೇನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸುವ ಸಲುವಾಗಿ 1118 ಎಕರೆ ಭೂಮಿಯ ಸ್ವಾಧೀನಕ್ಕೆ (ಈ ಭೂಮಿಯೂ ರೆಡ್‌ ಜೋನ್‌ ವ್ಯಾಪ್ತಿಗೆ ಒಳಪಟ್ಟಿದೆ) ಕೆಐಎಡಿಬಿ ಮುಂದಾಗಿದ್ದು, ಇದೇ ವಿಚಾರದಲ್ಲಿ ಭೂ ಮಾಲಿಕರೊಂದಿಗೆ ಚರ್ಚೆಗೆ ಅಧಿಕಾರಿಗಳು ಆಗಮಿಸಿದ್ದರು.

ಸಭೆಯಲ್ಲಿ ರೈತರ ಆಕ್ರೋಶದ ಕಟ್ಟೆ ಒಡೆಯಿತು. ಇಷ್ಟು ದಿನ ನಮಗೆ ಅನ್ಯಾಯವಾಗಿದೆ. ಮೊದಲು ರೆಡ್‌ ಜೋನ್‌ ನೋಟಫಿಕೇಷನ್‌ ತೆರವುಗೊಳಿಸಿ ನಂತರ ಭೂ ಸ್ವಾಧೀನಕ್ಕೆ ಬನ್ನಿ ಎಂದು ತಾಪಂ ಸದಸ್ಯ ಎಚ್‌.ಪ್ರಕಾಶ್‌, ಭೈರಮಂಗಲ ವಿಎಸ್‌ಎಸ್‌ಎನ್‌ ಅಧ್ಯಕ್ಷ ಎಚ್‌.ಎಸ್‌.ಸಿದ್ದರಾಜು ಹಾಗೂ ಗ್ರಾಪಂ ಸದಸ್ಯರಾದಿಯಾಗಿ ರೈತರು ಪಟ್ಟು ಹಿಡಿದರು. ಎಲ್ಲಾ 9600 ಎಕರೆ ಭೂಮಿಯನ್ನು ರೆಡ್‌ ಜೋನ್‌ನಿಂದ ತೆರವುಗೊಳಿಸಿ, ಇಲ್ಲವೇ ಟೌನ್‌ ಶಿಪ್‌ ಮಾಡಿ ಎಂದು ಆಗ್ರಹಿಸಿದರು.

ಇದೇ ವಿಚಾರದಲ್ಲಿ ಕೆಐಎ ಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ ಬಿ.ವೆಂಕಟೇಶ್‌ ಅವರಿಗೆ ಮನವಿ ಅರ್ಪಿಸಿದರು. ರೈತರ ಆಕ್ಷೇಪಕ್ಕೆ ಮಣಿದ ಅಧಿಕಾರಿಗಳು ಸಭೆ ಮುಂದೂಡಿ, ಹಾರೋಹಳ್ಳಿ ಎರೆಹಳ್ಳಿ ಮತ್ತು ಮುಡೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಭೂಸ್ವಾಧೀನ ಪ್ರಕ್ರಿಯೆ ಮಾತ್ರ ನಡೆಸುವುದಾಗಿ, ಸಮಸ್ಯೆ ಬಗೆ ಹರಿದ ನಂತರ ಮತ್ತೂಮ್ಮೆ ನೋಟಿಸ್‌ ಜಾರಿ ಮಾಡಿ ಸಭೆ ಅಯೋಜಿ ಸುವುದಾಗಿ ಹೇಳಿ ಸಭೆ ಮುಂದೂಡಿದರು.

ಘಟಕದ ಗುತ್ತಿಗೆದಾರರು ಅವಧಿ ಮುಗಿದರೂ ಗ್ರಾಪಂ ವ್ಯಾಪ್ತಿಗೆ ಬರುವ ನೀರು ವಿತರಕರಿಗೆ ಘಟಕದ ಜವಾಬ್ದಾರಿ ಆಯಾ ಗ್ರಾಪಂಗೆ ನೀಡದೆ ಹಣದ ಆಸೆಗೆ ಅವರೇ ಮುಂದುವರಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೂಡಲೇ ತಾಲೂಕಿನ ಎಲ್ಲಾ ಗ್ರಾಪಂ ಅಧಿಕಾರಿಗಳು ಹಾಗೂ ಘಟಕದ ಗುತ್ತಿಗೆದಾರರಿಗೆ ನೋಟಿಸ್‌ ನೀಡುತ್ತೇನೆ. ರಂಗಪ್ಪ, ಎಇಇ, ಕೊರಟಗೆರೆ

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.