ಒಮಿಕ್ರಾನ್‌ ಪ್ರಕರಣಗಳ ಸ್ಪಷ್ಟೀಕರಣ ಕಷ್ಟಸಾಧ್ಯ


Team Udayavani, Jan 23, 2022, 1:40 PM IST

ಒಮಿಕ್ರಾನ್‌ ಪ್ರಕರಣಗಳ ಸ್ಪಷ್ಟೀಕರಣ ಕಷ್ಟಸಾಧ್ಯ

ರಾಮನಗರ: ಜಿಲ್ಲೆಯಲ್ಲಿ ಸದ್ಯ ಇರುವ 1872 ಸಕ್ರಿಯ ಪ್ರಕರಣಗಳ ಪೈಕಿ ಬಹುತೇಕ ಒಮಿಕ್ರಾನ್‌ ಸೋಂಕು. ಆದರೆ ಇದನ್ನು ಅಧಿಕೃತವಾಗಿ ಆರೋಗ್ಯ ಇಲಾಖೆಹೇಳಲು ಸಾಧ್ಯವಾಗುತ್ತಿಲ್ಲ. ಕಾರಣ ಜಿನೋಂ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ಜಿಲ್ಲೆಯಿಂದ ಮಾದರಿಗಳೇ ರವಾನೆಯಾಗುತ್ತಿಲ್ಲ!

ಈ ವಿಚಾರವನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳೇ ಒಪ್ಪಿಕೊಳ್ಳುತ್ತಾರೆ. ಒಮಿಕ್ರಾನ್‌ ಸೋಂಕು ಪತ್ತೆಗಾಗಿ ಜಿನೋಂ ಸೀಕ್ವೆನ್ಸಿಂಗ್‌ ಪರೀಕ್ಷಾ ವ್ಯವಸ್ಥೆ ಜಿಲ್ಲೆಯಲ್ಲಿ ಲಭ್ಯವಿಲ್ಲ. ಬೆಂಗಳೂರಿನಲ್ಲಿರುವ ಪ್ರಯೋಗಾಲಯಗಳಲ್ಲಿ ಒತ್ತಡಹೆಚ್ಚಾಗಿರುವುದರಿಂದ ಮಾದರಿಗಳನ್ನುಜಿಲ್ಲೆಯಿಂದ ಕಳುಹಿಸುತ್ತಲೇ ಇಲ್ಲ ಎಂಬ ಅಂಶ ಬಯಲಿಗೆ ಬಂದಿದೆ.

ಕೋವಿಡ್‌ 3ನೇ ಅಲೆ ಆರಂಭವಾದ ನಂತರ ಕೆಲದಿನಗಳು ಜಿನೋಂ ಸೀಕ್ವೆನ್ಸಿಂಗ್‌ ಪರೀಕ್ಷೆಗಾಗಿ ಕೆಲವು ಮಾದರಿಗಳನ್ನು ಕಳುಹಿಸಲಾಗಿತ್ತು. ಆ ಫ‌ಲಿತಾಂಶಗಳಲ್ಲಿ ಒಮಿಕ್ರಾನ್‌ ಪತ್ತೆಯಾಗಿರಲಿಲ್ಲ. ಜಿನೋಂ ಸೀಕ್ವೆನ್ಸಿಂಗ್‌ ಪತ್ತೆಗಾಗಿ ರಾಜ್ಯದಲ್ಲಿ ಇರುವುದೇ 4 ಪ್ರಯೋಗಾಲಯಗಳು. ಹೀಗಾಗಿ ಈ ಪ್ರಯೋಗಾಲಯಗಳ ಮೇಲೆ ಒತ್ತಡವಿದೆ. ಅಲ್ಲದೆ ಜಿಲ್ಲೆಯಲ್ಲಿಯೂ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸುತ್ತಿದ್ದು ಎಲ್ಲ ಮಾದರಿಗಳನ್ನು ಪ್ರಯೋಗಾಲಯಗಳಿಗೆ ಕಳುಹಿಸಲು ಸಾಧ್ಯವಿಲ್ಲ , ಹೀಗಾಗಿಮಾದರಿಗಳನ್ನು ಕಳುಹಿಸುವುದನ್ನೇ ನಿಲ್ಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಒಮಿಕ್ರಾನ್‌ ಕೇಸ್‌ ಅಲ್ಲ, ಡಿಎಚ್‌ಒ:ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳುದಿನೇದಿನೇ ಏರಿಕೆಯಾಗುತ್ತಿದೆ. ಸದ್ಯಬೆಂಗಳೂರು ಒಮಿಕ್ರಾನ್‌ ಹಾಟ್‌ಸ್ಪಾಟ್‌ಆಗಿದೆ. ಬೆಂಗಳೂರು ಮಗ್ಗಲಲ್ಲೇಇರುವ ರಾಮನಗರ ಜಿಲ್ಲೆಯ ಬಹುತೇಕ ಮಂದಿ ಉದ್ಯೋಗ ಸೇರಿದಂತೆ ವಿವಿಧಕಾರಣಗಳಿಗೆ ಬೆಂಗಳೂರನ್ನು ಅವಲಂಭಿಸಿದ್ದಾರೆ. ಆದರೂ ರಾಮನಗರಜಿಲ್ಲೆಯಲ್ಲಿ ಒಮಿಕ್ರಾನ್‌ ಪ್ರಕರಣಗಳುಪತ್ತೆಯಾಗಿಲ್ಲ ಎಂಬ ಸೋಜಿಗವನ್ನುಜಿಲ್ಲೆಯ ಜನತೆ ವ್ಯಕ್ತಪಡಿಸಿದ್ದರು.ಈ ವಿಚಾರದಲ್ಲಿ ಪತ್ರಿಕೆ ಡಿಎಚ್‌ಒಡಾ.ನಿರಂಜನ್‌ ಅವರನ್ನು ಪ್ರಶ್ನಿಸಿದಾಗ ಜಿಲ್ಲೆಯಲ್ಲಿ ಒಮಿಕ್ರಾನ್‌ ಪ್ರಕರಣಗಳುಪತ್ತೆಯಾಗಿಲ್ಲ ಎಂದು ತಿಳಿಸಿದ್ದರು.

ಒಮಿಕ್ರಾನ್‌ ಸೋಂಕು ಪತ್ತೆಗಾಗಿ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿದೆ ಎಂದಿದ್ದರು. ಪ್ರಯೋಗಾಲಯಗಳ ಮೇಲಿನ ಒತ್ತಡದಿಂದಾಗಿ ಮಾದರಿಗಳನ್ನು ಕಳುಹಿಸಲಾಗುತ್ತಿಲ್ಲ ಎಂದು ಅವರ ಕಚೇರಿಯ ಮೂಲಗಳೇ ತಿಳಿಸಿವೆ.

ಬಹುತೇಕ ಒಮಿಕ್ರಾನ್‌ ಪ್ರಕರಣ: ಜಿಲ್ಲೆಯಲ್ಲಿ ಸದ್ಯ ಸಕ್ರಿಯವಾಗಿರುವ ಶೇ.80ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಒಮಿಕ್ರಾನ್‌ ವೈರಸ್‌ ಸೋಂಕುಎಂದು ಸರ್ಕಾರಿ ಮತ್ತು ಖಾಸಗಿ ವಲಯದ ವೈದ್ಯರು ಪ್ರತಿಕ್ರಿಯಿಸಿದ್ದಾರೆ.ಕೋವಿಡ್‌ ಡೆಲ್ಟಾ , ಡೆಲ್ಟಾ ಪ್ಲಸ್‌ರೂಪಾಂತರಿ ವೈರಸ್‌ಗಳ ಹಾಗೆ ಒಮಿಕ್ರಾನ್‌ ಹೆಚ್ಚು ಆಪಾಯಕಾರಿ ವೈರಸ್‌ಅಲ್ಲ. ಮೇಲಾಗಿ ಈಗಾಗಲೇ ಬಹುತೇಕಮಂದಿ ಕೋವಿಡ್‌ ಲಸಿಕೆ ಪಡೆದಿದ್ದಾರೆ.ಹೀಗಾಗಿ ಸಾಧಾರಣ ಚಿಕಿತ್ಸೆಯಿಂದಲೇಸೋಂಕಿತರು ಗುಣಮುಖರಾಗುತ್ತಿದ್ದಾರೆಎಂದು ವೈದ್ಯರು ಪ್ರತಿಕ್ರಿಯಿಸಿದ್ದಾರೆ.

ಮಾರ್ಗಸೂಚಿ ಪಾಲಿಸಿ: ಕೋವಿಡ್‌ ಸೋಂಕು ಇನ್ನು ಮುಗಿದಿಲ್ಲ, ಒಮಿ ಕ್ರಾನ್‌ ಸೋಂಕಿನ ಆರ್ಭಟ ಕಡಿಮೆಯಾಗಿಲ್ಲ. ಹೀಗಾಗಿ ನಾಗರಿಕರು ಮಾರ್ಗಸೂಚಿ ಪಾಲಿಸಿ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ನಾಗರಿಕರಿಗೆ ಮನವಿ ಮಾಡಿದ್ದಾರೆ.

-ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.