ಅನುದಾನ ಬಳಕೆಗೆ ಶಾಸಕರ ವಿರೋಧ


Team Udayavani, Jun 9, 2021, 9:57 AM IST

ಅನುದಾನ ಬಳಕೆಗೆ ಶಾಸಕರ ವಿರೋಧ

ರಾಮನಗರ: ಕೋವಿಡ್‌ ಹಿನ್ನೆಲೆಯಲ್ಲಿ 15ನೇ ಹಣ ಕಾಸು ಯೋಜನೆಯಡಿ ಸ್ಥಳೀಯ ಸಂಸ್ಥೆಗಳು ನಾಗರಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಸರ್ಕಾರದ ಆದೇಶವೇ ಇದೆ. ಆದರೆ, ರಾಮನಗರ ವಿಧಾನಸಭಾ ಕ್ಷೇತ್ರದ ಮಾಜಿ ಮತ್ತು ಹಾಲಿ ಶಾಸಕರು (ಪರೋಕ್ಷವಾಗಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ) ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್‌ ಹುಸೇನ್‌ ದೂರಿದರು.

ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 15ನೇ ಹಣಕಾಸು ಯೋಜನೆಯಡಿ ಕೋವಿಡ್‌ ಹಿನ್ನೆಲೆಯಲ್ಲಿ ನಾಗರಿಕರಿಗೆ ಆಹಾರ್‌ ಕಿಟ್‌ ಸೇರಿದಂತೆ ಅಗತ್ಯ ನೆರವು ನೀಡಲು ಸರ್ಕಾರದ ಆದೇಶವಿದೆ. ಆದರೆ, ರಾಮನಗರ ವಿಧಾನಸಭಾ ಕ್ಷೇತ್ರದ ಮಾಜಿ ಮತ್ತು ಹಾಲಿ ಶಾಸಕರು ಗ್ರಾಪಂ ಪಿಡಿಒಗಳು, ಜಿಪಂ ಸಿಇಒಗೆ ಬೆದರಿಕೆ ಹಾಕಿ, 15ನೇ ಹಣಕಾಸು ಯೋಜನೆಯ ಅನುದಾನವನ್ನು ಬಳಸಬಾರದೆಂದು, ಹಾಗೊಮ್ಮೆ ಬಳಸಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಬೆದರಿಸಿದ್ದಾರೆ.

ಆದರೆ ತಾವು ಮತ್ತು ಸಂಸದರು ಸರ್ಕಾರದ ಆದೇಶವನ್ನು ಅಧಿಕಾರಿಗಳಿಗೆ ತೋರಿಸಿ ಅಗತ್ಯ ನೆರವನ್ನು ಕೊಡಿಸಿದ್ದಾಗಿ ತಿಳಿಸಿದರು. ಕೋವಿಡ್‌ನ‌ಲ್ಲೂ ಕಾಂಗ್ರೆಸ್‌ ಸೇವೆ: ಮೊದಲನೆ ಅಲೆಯ ವೇಳೆ ಕಾಂಗ್ರೆಸ್‌ ನಾಗರಿಕರಿಗೆ ತನ್ನ ಸಹಾಯ ಹಸ್ತವನ್ನು ಚಾಚಿತ್ತು. ಆರೋಗ್ಯ ಸೇವೆ ಕಾರ್ಯಕ್ರಮದಡಿ ಜನರ ಆರೋಗ್ಯ ಕಲೆ ಹಾಕಲಾಗಿತ್ತು. ಅಗತ್ಯವಿದ್ದವರಿಗೆ ವೈದ್ಯಕೀಯ ನೆರವು ನೀಡಲಾಗಿತ್ತು. ರೈತರಿಂದ ತರಕಾರಿ ಖರೀದಿಸಿ, ನಾಗರಿಕರಿಗೆ ಉಚಿತವಾಗಿ ವಿತರಿಸಲಾಗಿತ್ತು. ಎರಡನೇ ಅಲೆಯ ವೇಳೆ ಸೋಂಕಿತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ತಮ್ಮ ಚಾರಿಟಬಲ್‌ ಟ್ರಸ್ಟ್‌ ಮೂಲಕ ಮೆಡಿಕಲ್‌ ಕಿಟ್‌ ವಿತರಿಸಿದ್ದಾರೆ. ಅಲ್ಲದೆ, ಚಿಕಿತ್ಸೆಗಾಗಿ ಬೆಡ್‌, ಆಕ್ಸಿಜನ್‌ ಹೀಗೆ ಅಗತ್ಯ ನೆರವು ನೀಡಲಾಗಿದೆ ಎಂದು ವಿವರಿಸಿದರು.

ಕೇಂದ್ರದ ವಿರುದ್ಧ ಕಿಡಿ: ಕೇಂದ್ರದಲ್ಲಿ ಕಳೆದ 7 ವರ್ಷದಿಂದ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ಆದರೆ, ಜನರಿಗೆ ಸ್ಪಂದಿಸಿದ್ದು ಕಡಿಮೆ. ಮೊದಲನೆ ಅಲೆ ತಗ್ಗಿದ ನಂತರ ತಜ್ಞರು 2ನೇ ಅಲೆಯ ಬಗ್ಗೆ 2021ರ ಜನವರಿಯಲ್ಲೇ ಎಚ್ಚರಿಸಿದ್ದರು. ಆದರೆ, ಕೇಂದ್ರ ಸರ್ಕಾರ ಎಚ್ಚರಿಕೆಯನ್ನು ನಿರ್ಲಕ್ಷಿಸಿದ್ದೆ ಎರಡನೇ ಅಲೆಯ ಈ ಪ್ರಮಾಣದ ಭೀಕರತೆಗೆ ಕಾರಣವಾಗಿದೆ ಎಂದು ದೂರಿದರು.

ನಾಗರಿಕರಿಗೆ ಬೆಲೆ ಏರಿಕೆ ಬಿಸಿ: ತಾಪಂ ಮಾಜಿ ಅಧ್ಯಕ್ಷ ಕಾಂತರಾಜ ಪಟೇಲ್‌ ಮಾತನಾಡಿ. ಪೆಟ್ರೋಲ್‌-ಡೀಸಲ್‌ ಬೆಲೆಗಳು ಲೀಟರ್‌ಗೆ 100ರ ಗಡಿಯಲ್ಲಿವೆ. ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 150 ರೂ. ದಾಟಿದೆ. ಲಾಕ್‌ಡೌನ್‌ ಕಾರಣ ಜನರ ಆದಾಯ ಕುಸಿದಿದೆ. ಆದರೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿತಡೆಯಲಾಗುತ್ತಿಲ್ಲ. ಜನರ ಬವಣೆ ಸರ್ಕಾರಗಳಿಗೆ ಕಾಣುತ್ತಿಲ್ಲ. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಅನಿತಾ ಕುಮಾರಸ್ವಾಮಿಯವರು ಕೋವಿಡ್‌ ನಿಯಂತ್ರಣದ ವಿಚಾರದಲ್ಲಿ ಹೆಚ್ಚಿನ ಹೊಣೆ ಹೊರಬೇಕಿತ್ತು ಎಂದು ಹೇಳಿದರು.

ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎ.ಬಿ.ಚೇತನ್‌ ಕುಮಾರ್‌, ನಗರಸಭೆ ಮಾಜಿ ಅಧ್ಯಕ್ಷ ಲೋಹಿತ್‌ ಬಾಬು, ಸಾಮಾಜಿಕ ಜಾಲತಾಣ ವಿಭಾಗದ ಶ್ರೀನಿ ವಾಸ್‌, ಪ್ರಮುಖರಾದ ಜಗದೀಶ್‌, ನರಸಿಂಹ ಮೂರ್ತಿ, ವಾಸಿಂ, ಆರಿಫ್ ಉಪಸ್ಥಿತರಿದ್ದರು

ಮಾಧ್ಯಮಗಳ ಕಾಳಜಿಗೆ ಶ್ಲಾಘನೆ :

ಕೋವಿಡ್‌ ಭೀಕರತೆಯ ಬಗ್ಗೆ ಜನ ಸಾಮಾನ್ಯರನ್ನು ಮಾಧ್ಯಮಗಳು ಜಾಗೃತಿ ಮೂಡಿಸಿವೆಯಲ್ಲದೆ, ಕಾಲಕಾಲಕ್ಕೆ ಎಚ್ಚರಿಕೆಯ ಸಂದೇಶಗಳನ್ನು ರವಾನಿಸಿದೆ. ತಜ್ಞರ ಮೂಲಕ ಜನ ಸಾಮಾನ್ಯರಲ್ಲಿದ್ದ ಅನುಮಾನಗಳನ್ನು ಪರಿಹಾರ ನೀಡಿವೆ. ಮಾಧ್ಯಮ ಪ್ರತಿನಿಧಿಗಳು ತಮ್ಮ ಆರೋಗ್ಯವನ್ನು ಪಣಕ್ಕಿಟ್ಟು ಜನರಿಗೆ ದಿನನಿತ್ಯದ ಆಗುಹೋಗುಗಳ ಬಗ್ಗೆ ವರದಿ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ರಾಜು ಶ್ಲಾಘಿಸಿದರು

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.