ಮಾರುಕಟ್ಟೆ ಸ್ಥಳಾಂತರ ವಿರೋಧ ಸರಿಯಲ್ಲ


Team Udayavani, Feb 23, 2021, 12:20 PM IST

ಮಾರುಕಟ್ಟೆ ಸ್ಥಳಾಂತರ ವಿರೋಧ ಸರಿಯಲ್ಲ

ರಾಮನಗರ: ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯನ್ನು ಚನ್ನ ಪಟ್ಟಣಕ್ಕೆ ಸ್ಥಳಾಂತರ ಮಾಡುವುದು ಸೂಕ್ತವಾಗಿದೆ. ರೈತರನ್ನು ಗಮನದಲ್ಲಿಟ್ಟುಕೊಂಡೇ ವಿಶಾಲವಾಗಿ ನಿರ್ಮಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ನಗರದಲ್ಲಿ ಶ್ರೀಮತ್‌ ಕನ್ಯಕಾಪರಮೇಶ್ವರಿ ಅಮ್ಮನವರ ದೇವಾಲಯದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರೇಷ್ಮೆಗೂಡು ಮಾರುಕಟ್ಟೆ ಸ್ಥಳಾಂತರಕ್ಕೆ ರಾಜಕೀಯ ಕಾರಣಗಳೇನಿಲ್ಲ. ಪ್ರತಿಷ್ಠೆಯೂ ಇಲ್ಲ. ಈ ನಿರ್ಧಾರ ರೈತರಿಗಾಗಿಯೇ ಹೊರತು, ವ್ಯಾಪಾರಿಗಳಿಗಲ್ಲ ಎಂದರು.

ರೈತರಿಗೆ ಶಕ್ತಿ ತುಂಬಲು ಮಾರುಕಟ್ಟೆ ನಿರ್ಮಾಣ: ರೇಷ್ಮೆಗೂಡು ಮಾರುಕಟ್ಟೆ ಜಗತ್ತಿನಲ್ಲಿಯೇ ಪ್ರಸಿದ್ಧವಾದದ್ದು. ಹೀಗಾಗಿ ಇದನ್ನು ವಿಸ್ತರಿಸಿ ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಎಂಬ ಉದ್ದೇಶ ಸರ್ಕಾರಕ್ಕೆ ಇತ್ತು. ರಾಮನಗರದಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಲು ಕೆಲ ಅಡ್ಡಿಗಳಿದ್ದವು. ಈಗಿನ ಮಾರುಕಟ್ಟೆ ಪಕ್ಕದ ಜಮೀನು ಬಿಕ್ಕಟ್ಟು ನ್ಯಾಯಾಲಯದಲ್ಲಿದೆ. ಡೀಸಿ ಕಚೇರಿ ಪಕ್ಕದಲ್ಲಿ ಒಂದು ಎಕರೆ ಮಾತ್ರ ಸರ್ಕಾರಿ ಭೂಮಿಯಿದೆ. ಸ್ಥಳದ ಕೊರತೆ ಕಾರಣ ಅನಿ ವಾರ್ಯವಾಗಿ ವರ್ಗಾಯಿಸಬೇಕಾಗಿದೆ. ಹೀಗೆ ಅಡ್ಡಿಗಳು ಎದುರಾದ ಕಾರಣ ಚನ್ನಪಟ್ಟಣ ಬಳಿ ವಿಶಾಲ ಜಾಗದಲ್ಲಿ ಮಾರುಕಟ್ಟೆ ತಲೆ ಎತ್ತಲಿದೆ. ಹೈಟೆಕ್‌ ಮಾರುಕಟ್ಟೆ ನಿರ್ಮಿಸಿ ರೇಷ್ಮೆ ಕೃಷಿಕರಿಗೆ ಶಕ್ತಿ ತುಂಬಬೇಕಾಗಿದೆ ಎಂದರು.

ರಾಮನಗರಕ್ಕಿರುವ ರೇಷ್ಮೆ ನಗರಿ ಹೆಸರು ಕಳೆದುಕೊಳ್ಳುವ ಅಪಾಯವಿದೆ ಎಂಬ ಮಾತುಗಳು ನಾಗರಿಕರ ವಲಯದಲ್ಲ ಕೇಳಿ ಬರುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ಎಲ್ಲಾ ಬೆಳೆಗಾರರು ರಾಮನಗರದಲ್ಲೇ ಇದ್ದಾರೆ. ರಾಮನಗರದ ಆಶ್ರಯದಲ್ಲೇ ಮಾರುಕಟ್ಟೆ ನಿರ್ಮಾಣವಾಗಲಿದೆ ಎಂದು ತೇಲಿಸಿದರು.

ನ್ಯಾಯ ಸಮ್ಮತ ನಿರ್ಧಾರ :

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಂಬಂಧಿಸಿದಂತೆ ಸರ್ಕಾರ ಎಲ್ಲ ರೀತಿಯಲ್ಲೂ ಪರಿಶೀಲನೆ ಮಾಡುತ್ತಿದೆ. ಇನ್ನಿತರೆ ಸಮುದಾಯಗಳು ಸಹ ಮೀಸಲಾತಿಗೆ ಸರ್ಕಾರಕ್ಕೆ ಮನವಿ ಮಾಡಿವೆ. ಎಲ್ಲರ ಬೇಡಿಕೆಗಳನ್ನು ಗಮನದಲ್ಲಿ ಇಟ್ಟುಕೊಂಡು ನ್ಯಾಯ ಸಮ್ಮತವಾದ ರೀತಿಯಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಬೇಡ ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಪರವಾಗಿ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರು ನಡೆಸುತ್ತಿರುವ ಪ್ರತಿಭಟನೆ ಸರ್ಕಾರ ವಿರುದ್ಧ ಎಂದು ಅರ್ಥೈಸಬಾರದು. ಅವರು ತಮ್ಮ ಮತದಾರರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ. ಡಾ.ಸಿ.ಎನ್‌.ಅಶ್ವತ್ಥನಾರಾಯಣ ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.