ಬರಗೂರು ರಾಮಚಂದ್ರಪ್ಪ ವಿರುದ್ಧ ಆಕ್ರೋಶ
Team Udayavani, Aug 23, 2022, 3:38 PM IST
ಚನ್ನಪಟ್ಟಣ: ಗಂಗಾಮಾತೆ ಹಾಗೂ ರಾಷ್ಟ್ರಗೀತೆಯ ಬಗ್ಗೆ ತಮ್ಮ ಕೃತಿಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ಬಹಿರಂಗವಾಗಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ಮಾಜಿ ಉಪಾಧ್ಯಕ್ಷ ಎಲೆಕೇರಿ ಈಶ್ವರಪ್ಪ ಆಗ್ರಹಿಸಿದರು.
ನಗರದಲ್ಲಿ ನಡೆದ ಜಿಲ್ಲಾ ಗಂಗಾಮತಸ್ಥರ ಸಭೆಯಲ್ಲಿ ಮಾತನಾಡಿ, ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ತಮ್ಮ ಭರತನಗರಿ ಎಂಬ ಪುಸ್ತಕದಲ್ಲಿ ನಮ್ಮ ಸಮುದಾಯದ ಕುಲದೇವತೆ ಗಂಗಾಮಾತೆ ಹಾಗೂ ರಾಷ್ಟ್ರಗೀತೆಯ ಬಗ್ಗೆ ಅವ ಹೇಳನಕಾರಿಯಾಗಿ ಬರೆದಿದ್ದಾರೆ. ನಮ್ಮ ಸಮು ದಾಯದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕ್ಷಮೆಯಾಚಿಸಿ: ಜಿಲ್ಲಾ ಗಂಗಾಮತಸ್ಥರ ಸಂಘದ ಸಹ ಕಾರ್ಯದರ್ಶಿ, ನಿವೃತ್ತ ಶಿಕ್ಷಕ ಸೋಗಾಲ ರಾಮು ಮಾತನಾಡಿ, ಬರಗೂರು ರಾಮಚಂದ್ರಪ್ಪ ಅವರು ಒಂದು ಸಮುದಾಯ ಹಾಗೂ ರಾಷ್ಟ್ರ ಗೀತೆ ವಿಚಾರದಲ್ಲಿ ಅವಹೇಳನಕಾರಿಯಾಗಿ ಬರೆ ದಿರುವುದು ದುರದೃಷ್ಟಕರ ಹಾಗೂ ಕಳವಳಕಾರಿ ಯಾಗಿದೆ. ಈ ದಿಕ್ಕಿನಲ್ಲಿ ಅವರು ಕೂಡಲೇ ಸರ್ವ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಬರಗೂರು ರಾಮಚಂದ್ರಪ್ಪ ಬಹಿರಂಗವಾಗಿ ಮಾಧ್ಯಮಗಳ ಸಮ್ಮುಖದಲ್ಲಿ ನಮ್ಮ ಸಮಾಜದ ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ಹೋರಾಟ ಹಾಗೂ ರೂಪುರೇಷೆ ಸಿದ್ಧಪಡಿಸಿ, ರಾಮಚಂದ್ರಪ್ಪ ಎಲ್ಲೆಲ್ಲಿ ಕಾಣುತ್ತಾರೋ ಅಲ್ಲಿ ಪ್ರತಿಭಟನೆ ಹಾಗೂ ಘೇರಾವ್ ಮಾಡಲಾಗುವುದು ಎಂದು ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನಿಸಲಾಯಿತು.
ಸಂಘದ ಚನ್ನಪಟ್ಟಣ ತಾಲೂಕು ಅಧ್ಯಕ್ಷ ಹನುಮಂತು, ಖಜಾಂಚಿ ವೆಂಕಟಪ್ಪ, ಸಹ ಕಾರ್ಯದರ್ಶಿ ಗಂಗರಾಜು, ಕನಕಪುರ ತಾಲೂಕು ಅಧ್ಯಕ್ಷ ಚಿಕ್ಕಣ್ಣ, ಪದಾಧಿಕಾರಿಗಳಾದ ಮಹದೇವು, ಪುಟ್ಟರಾಜು, ಗೋಪಾಲ್, ನಾಗೇಂದ್ರ, ಕುಮಾರ ಸ್ವಾಮಿ, ಮಲ್ಲಿಕಾರ್ಜುನ, ನಾಗರಾಜು ಮುನಿ ಸ್ವಾಮಿ, ಮಲ್ಲಯ್ಯ ಗಂಗರಾಜು, ಪುಟ್ಟಸ್ವಾಮಿ ಹಾಗೂ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್