ಅಧಿಕಾರಿಗಳ ನಡೆಗೆ ಆಕ್ರೋಶ


Team Udayavani, Jan 25, 2020, 6:12 PM IST

rn-tdy-1

ಚನ್ನಪಟ್ಟಣ: ಪ್ರಸಕ್ತ ಸಾಲಿನ ಆಯವ್ಯಯ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಸಾರ್ವಜನಿಕರು ಬೆವರಿಳಿಸಿದ ಪ್ರಸಂಗ ನಗರಸಭೆ ಸಭಾಂಗಣದಲ್ಲಿ ನಡೆಯಿತು.

ನಗರಸೆಭೆ ಬಜೆಟ್‌ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಲಹೆ ಸ್ವೀಕರಿಸಲು ಸಭೆ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕರು, ಹಿಂದಿನಬಜೆಟ್‌ಗಳಲ್ಲಿ ಸೇರಿಸಿದ್ದ ಎಷ್ಟು ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಗೊಳಿಸಿದ್ದೀರಿ. ನಿಮ್ಮಿಷ್ಟ ಬಂದಂತೆ ಬಜೆಟ್‌ ಸಿದ್ಧಪಡಿಸಿ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಏನು ನಿರೀಕ್ಷೆ ಮಾಡಲು ಸಾಧ್ಯ: ಪಟ್ಟಣ ವ್ಯಾಪ್ತಿಯಲ್ಲಿ ಚರಂಡಿ, ರಸ್ತೆ, ಬೀದಿ ದೀಪ, ಕುಡಿಯುವ ನೀರಿನ ಸಮಸ್ಯೆ ಸಾಕಷ್ಟಿದೆ. ಕಸದ ಸಮಸ್ಯೆ ವರ್ಷಗಳಾದರೂ ಸರಿಯಾಗಿಲ್ಲ, ಪ್ರತಿ ಮನೆಗಳ ಬಳಿ ಕಸ ಸಂಗ್ರಹಿಸಲು ಆಗಮಿಸುತ್ತಿದ್ದ ಆಟೋಗಳು ತಿಂಗಳಿ ನಿಂದ ಸ್ಥಗಿತಗೊಂಡಿವೆ. ಎಲೇಕೇರಿ ಬಳಿ ಕಸ ವಿಂಗಡಣಾ ಘಟಕ ನಿರ್ಮಾಣಕ್ಕೆ ಲಕ್ಷಾಂತರರೂ. ವ್ಯಯಿಸಿದ್ದೀರಿ ಅದು ಆರಂಭ ವಾಗಿಲ್ಲ. ಕಸ ವಿಲೇವಾರಿಗೆ ತಾತ್ಕಾಲಿಕ ಜಾಗ ಹುಡು ಕಲು ಆಗುತ್ತಿಲ್ಲ. ನಿಮ್ಮಿಂದ ಏನು ನಿರೀಕ್ಷೆ  ಮಾಡಲು ಸಾಧ್ಯ ಎಂದು ಹರಿಹಾಯ್ದರು.

ಕಾಟಾಚಾರದ ಸಭೆ: ಸಾರ್ವಜನಿಕರ ಹಣ ಪೋಲು ಮಾಡುವುದರಲ್ಲಿ ಅಧಿಕಾರಿಗಳದ್ದು, ಎತ್ತಿದ ಕೈ ಯಾವೊಬ್ಬ ಅಧಿಕಾರಿಯೂ ತಮ್ಮ ವ್ಯಾಪ್ತಿಯ ಕೆಲಸ ಮಾಡುವುದಿಲ್ಲ. ಪಟ್ಟಣ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳು ನೂರಾರಿವೆ. ಆಗಬೇಕಿರುವ ಕೆಲಸಗಳು ಸಾಕಷ್ಟಿವೆ. ಎಲ್ಲ ತಿಳಿದಿದ್ದರೂ, ಹೊಸದಾಗಿ ಏತಕ್ಕೆ ಸಲಹೆ ಕೇಳುತ್ತೀರಿ, ಆಡಳಿತವಿದ್ದಾಗ ಏನೇನು ಕೆಲಸಗಳು ಆಗಬೇಕು ಎನ್ನುವ ಪಟ್ಟಿಯನ್ನು ಈಗಾಗಲೇ ಪಡೆದುಕೊಂಡಿದ್ದೀರಿ, ಈಗ ಹೊಸದಾಗಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಎನ್ನುವ ಕಾಟಾಚಾರದ ಸಭೆ ಆಯೋಜನೆ ಮಾಡಿದ್ದೀರಿ ಎಂದು ಕಿಡಿಕಾರಿದರು.

ಚರಂಡಿ ದುರಸ್ತಿಗೊಳಿ: ಚಾನಲ್‌ ರಸ್ತೆಯಲ್ಲಿನ ಕಾಲುವೆ ಸಮಸ್ಯೆ ಸರಿಪಡಿಸಿಲ್ಲ. ಮೇಲ್ಭಾಗ ಮುಚ್ಚದೆ ಇರುವುದರಿಂದ ಚಾನಲ್‌ ಪಕ್ಕದ ನಿವಾಸಿಗಳು ನಿತ್ಯ ಗಬ್ಬು ವಾಸನೆ ಸಹಿಸಿಕೊಂಡು ಜೀವನ ಸಾಗಿಸಬೇಕು. ಕೆಲವು ವಾರ್ಡ್‌ಗಳಲ್ಲಿ ಚರಂಡಿನಿರ್ಮಾಣ ಮಾಡಲಾಗಿದೆ. ಆದರೆ ಕೊನೆಯಲ್ಲಿ ಯಾವ ಕಾಲುವೆಗೂ ಸಂಪರ್ಕ ನೀಡಿಲ್ಲ. ಇದರಿಂದ ನೀರು ಹರಿಯದೆ ಕೊಳೆಕು ಉಂಟಾಗಿ ರೋಗ ಹರಡಲು ಕಾರಣವಾಗುತ್ತಿದೆ. ಇನ್ನಾದರೂ ನಿರ್ಮಾಣವಾಗಿರುವ ಚರಂಡಿಗಳ ಮೇಲೆ ಮೇಲು ಹಾಸು ನಿರ್ಮಿಸುವ ಜತೆಗೆ ಚರಂಡಿ ಗಳ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಿ ಎಂದರು.

ನೀರು ಗಂಟಿಗಳು, ಬೀದಿ ದೀಪ ಸರಿಪಡಿಸುವ ಗುತ್ತಿಗೆ ಹೊತ್ತವರು ಅಧಿಕಾರಿಗಳ ಮಾತನ್ನು ಕೇಳುತ್ತಿಲ್ಲ. ನಗರಸಭೆಯಲ್ಲಿ ಕೆಲಸ ಮಾಡಿಸಿಕೊಳ್ಳಲು ಸಾರ್ವಜನಿಕರು ದಿನ ನಿತ್ಯಅಲೆಯಬೇಕು. ಮೊದಲು ಅವುಗಳನ್ನು ಸರಿಪಡಿಸಿ ಸಿಬ್ಬಂದಿಯ ಬಗ್ಗೆ ನಿಗಾ ವಹಿಸಿ ಸಾರ್ವಜನಿಕರ ಕೆಲಸ ಮಾಡಿಕೊಡಿ ಎನ್ನುವ ಸಲಹೆಗಳು ವ್ಯಕ್ತವಾದವು.

ಸಂದರ್ಭದಲ್ಲಿ ನಗರಸಭೆ ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.