ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್‌ನಿಂದ ಸಂಚಾರಕ್ಕೆ ತೊಂದರೆ


Team Udayavani, May 4, 2019, 2:54 PM IST

ramanagar-tdy-5…

ಮಾಗಡಿಯ ಕಲ್ಯಾಗೇಟ್‌ನಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿರುವುದು.

ಮಾಗಡಿ: ಪಟ್ಟಣದಲ್ಲಿ ಅಡ್ಡಾದಿಡ್ಡಿ ವಾಹನಗಳ ಪಾರ್ಕಿಂಗ್‌ನಿಂದ ವಾಹನಗಳ ಸಂಚಾರ ಮತ್ತು ಪಾದಚಾರಿಗಳಿಗೆ ಪ್ರಾಣ ಸಂಕಟವಾಗಿದೆ.

ಪಟ್ಟಣದ ಕಲ್ಯಾಗೇಟ್, ರಾಜಕುಮಾರ್‌ ರಸ್ತೆ, ಕೆಂಪೇಗೌಡ ವೃತ್ತ ಇತರೆಡೆ ದ್ವಿಚಕ್ರ ವಾಹನಗಳನ್ನು ರಸ್ತೆ ಬದಿ ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಇತರೆ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ತುಂಬ ತೊಂದರೆಯಾಗುತ್ತಿದೆ. ಪಟ್ಟಣದಲ್ಲಿ ಜನ ಸಂಖ್ಯೆ ಜಾಸ್ತಿಯಾದಂತೆ ದಿನೇ ದಿನೇ ವಾಹನ ಸಂಚಾರದ ದಟ್ಟಣೆ ಹೆಚ್ಚಾಗುತ್ತಿದೆ. ಪಟ್ಟಣದ ಬಸ್‌ ನಿಲ್ದಾಣ, ಅರಳೇಪೇಟೆ, ರಾಜಕುಮಾರ್‌ ರಸ್ತೆ, ಕೆಂಪೇಗೌಡ ವೃತ್ತ, ಗೌರಮ್ಮನಕೆರೆ, ತಿರುಮಲೆ, ಹೊಸಪೇಟೆ, ಹೊಂಬಾಳಮ್ಮನಪೇಟೆ ಸೇರಿದಂತೆ ಇತರೆ ಭಾಗಗಳ ರಸ್ತೆಗಳ ವಾಹನ ಸಂಚಾರಕ್ಕೆ ಸವಾರರು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾಹನ ಸವಾರರು ನಿಯಮ ಪಾಲಿಸುತ್ತಿಲ್ಲ: ಪಟ್ಟಣದಲ್ಲಿ ವಾಹನ ಸವಾರರು ನಿಯಮ ಪಾಲನೆ ಮಾಡುತ್ತಿಲ್ಲ. ಬಹುತೇಕ ವಾಹನ ಸವಾರರಲ್ಲಿ ಪರವಾನಗಿಯೇ ಇಲ್ಲ. ಅದರಲ್ಲೂ ಚಿಕ್ಕ ಮಕ್ಕಳು ಸಹ ವಾಹನ ಚಾಲನೆ ಮಾಡುತ್ತಿದ್ದಾರೆ. ಇದರಿಂದಾಗಿ ವಾಹನವನ್ನು ಸರಿಯಾಗಿ ಓಡಿಸಲಾಗದೆ ರಸ್ತೆ ಮಧ್ಯೆಯೇ ಬಿದ್ದು, ಎದ್ದು ಕೈಕಾಲು ಮುರಿದುಕೊಂಡ ಪ್ರಸಂಗಗಳು ಆಗಾಗ್ಗೆ ನಡೆಯುತ್ತಿದೆ.

ಕೇಳುವವರೂ ಇಲ್ಲ : ಪಟ್ಟಣದಲ್ಲೊಂದು ಆರ್‌ಟಿಒ ಕಚೇರಿಯಿಲ್ಲ, ಕನಿಷ್ಠ ಪಕ್ಷ ಪೊಲೀಸರು ಸಹ ವಾಹನ ಸವಾರರಿಗೆ ನಿಯಮ ಪಾಲನೆ ಕುರಿತು ಯಾವುದೇ ಜಾಗೃತಿ ಫ‌ಲಕವನ್ನು ಸಹ ಹಾಕಿಲ್ಲ. ದ್ವಿಚಕ್ರ ವಾಹನದಲ್ಲಿ ಮೂರು ಮಂದಿ ಕುಳಿತುಕೊಂಡು ಸಂಚಾರ ಮಾಡುತ್ತಿದ್ದರೂ ಕೇಳುವವರೂ ಇಲ್ಲ ಎಂಬಂತಾಗಿದೆ. ರಸ್ತೆ ಮಧ್ಯೆಯೇ ಆಟೋ, ಕಾರುಗಳು, ಲಾರಿಗಳು ನಿಲ್ಲುತ್ತವೆ. ಕನಿಷ್ಠ ಪಕ್ಷ ರಸ್ತೆ ಬದಿಯಲ್ಲಿ ಪಾರ್ಕಿಂಗ್‌ ಮಾಡುವಂತೆ ತಿಳಿ ಹೇಳುವವರೇ ಇಲ್ಲ.

ಹೊರ ಠಾಣಿ ಸ್ಥಾಪನೆ ಅಗತ್ಯ: ಅಪಘಾತ ನಡೆದಾಗ ಒಂದೆರಡು ದಿನ ಪೊಲೀಸರನ್ನು ರಸ್ತೆಗಳಿಗೆ ಬಿಟ್ಟು ವಾಹನಗಳ ಗಾಜು ಪುಡಿ ಮಾಡುವುದು, ಅಮಾಯಕರಿಗೆ ಲಾಠಿ ರುಚಿ ತೋರಿಸಿ ಸುಮ್ಮನಾಗುತ್ತಾರೆ. ಇಷ್ಟೊಂದು ವಾಹನಗಳು ಪಟ್ಟಣದಲ್ಲಿ ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿದ್ದರೂ ಇಲ್ಲಿಯವರೆಗೂ ಕನಿಷ್ಠ ದೂರು ದಾಖಲಿಸಿಲ್ಲ, ನೋಟಿಸ್‌ ನೀಡಿಲ್ಲ. ಹೀಗಾದರೆ ಪಟ್ಟಣದಲ್ಲಿ ರಸ್ತೆಯಲ್ಲಿ ಸುಗಮ ಸಂಚಾರ ಕಾಣಲು ಅಸಾಧ್ಯ ಎಂಬ ಆರೋಪಗಳು ನಾಗರಿಕ ವಲಯದಲ್ಲಿ ಕೇಳಿ ಬರುತ್ತಿದೆ. ಸಂಬಂಧಪಟ್ಟ ಆರ್‌ಟಿಒ ಇಲಾಖೆ ಇಲ್ಲೊಂದು ಹೊರ ಠಾಣೆ ಸ್ಥಾಪನೆ ಮಾಡಿ ವಾಹನ ಸಂಚಾರದ ನಿಯಮ ಪಾಲನೆ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂಬ ಆಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಪಟ್ಟಣದ ಯಾವುದೇ ರಸ್ತೆಯಲ್ಲಿಯಾದರೂ ನೋಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಂತೆ ವಾಹನಗಳು ನಿಲ್ಲುತ್ತವೆ. ಅದರಲ್ಲೂ ಬಹುತೇಕ ಅಂಗಡಿ ಮಾಲೀಕರಿರಬಹುದು, ಇತರರು ಸಹ ತಮ್ಮ ವಾಹನಗಳನ್ನು ಅಂಗಡಿಯ ಬದಿಯ ಕಿರಿದಾದ ರಸ್ತೆಯಲ್ಲಿಯೇ ನಿಲ್ಲಿಸಿರುತ್ತಾರೆ. ಮತ್ತೂಂದು ವಾಹನ ಸಾಗಬೇಕಾದರೆ ನಿಜಕ್ಕೂ ಚಾಲಕ ಹರಸಾಹಸ ಪಡಬೇಕಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.