ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್‌ನಿಂದ ಸಂಚಾರಕ್ಕೆ ತೊಂದರೆ


Team Udayavani, May 4, 2019, 2:54 PM IST

ramanagar-tdy-5…

ಮಾಗಡಿಯ ಕಲ್ಯಾಗೇಟ್‌ನಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿರುವುದು.

ಮಾಗಡಿ: ಪಟ್ಟಣದಲ್ಲಿ ಅಡ್ಡಾದಿಡ್ಡಿ ವಾಹನಗಳ ಪಾರ್ಕಿಂಗ್‌ನಿಂದ ವಾಹನಗಳ ಸಂಚಾರ ಮತ್ತು ಪಾದಚಾರಿಗಳಿಗೆ ಪ್ರಾಣ ಸಂಕಟವಾಗಿದೆ.

ಪಟ್ಟಣದ ಕಲ್ಯಾಗೇಟ್, ರಾಜಕುಮಾರ್‌ ರಸ್ತೆ, ಕೆಂಪೇಗೌಡ ವೃತ್ತ ಇತರೆಡೆ ದ್ವಿಚಕ್ರ ವಾಹನಗಳನ್ನು ರಸ್ತೆ ಬದಿ ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಇತರೆ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ತುಂಬ ತೊಂದರೆಯಾಗುತ್ತಿದೆ. ಪಟ್ಟಣದಲ್ಲಿ ಜನ ಸಂಖ್ಯೆ ಜಾಸ್ತಿಯಾದಂತೆ ದಿನೇ ದಿನೇ ವಾಹನ ಸಂಚಾರದ ದಟ್ಟಣೆ ಹೆಚ್ಚಾಗುತ್ತಿದೆ. ಪಟ್ಟಣದ ಬಸ್‌ ನಿಲ್ದಾಣ, ಅರಳೇಪೇಟೆ, ರಾಜಕುಮಾರ್‌ ರಸ್ತೆ, ಕೆಂಪೇಗೌಡ ವೃತ್ತ, ಗೌರಮ್ಮನಕೆರೆ, ತಿರುಮಲೆ, ಹೊಸಪೇಟೆ, ಹೊಂಬಾಳಮ್ಮನಪೇಟೆ ಸೇರಿದಂತೆ ಇತರೆ ಭಾಗಗಳ ರಸ್ತೆಗಳ ವಾಹನ ಸಂಚಾರಕ್ಕೆ ಸವಾರರು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾಹನ ಸವಾರರು ನಿಯಮ ಪಾಲಿಸುತ್ತಿಲ್ಲ: ಪಟ್ಟಣದಲ್ಲಿ ವಾಹನ ಸವಾರರು ನಿಯಮ ಪಾಲನೆ ಮಾಡುತ್ತಿಲ್ಲ. ಬಹುತೇಕ ವಾಹನ ಸವಾರರಲ್ಲಿ ಪರವಾನಗಿಯೇ ಇಲ್ಲ. ಅದರಲ್ಲೂ ಚಿಕ್ಕ ಮಕ್ಕಳು ಸಹ ವಾಹನ ಚಾಲನೆ ಮಾಡುತ್ತಿದ್ದಾರೆ. ಇದರಿಂದಾಗಿ ವಾಹನವನ್ನು ಸರಿಯಾಗಿ ಓಡಿಸಲಾಗದೆ ರಸ್ತೆ ಮಧ್ಯೆಯೇ ಬಿದ್ದು, ಎದ್ದು ಕೈಕಾಲು ಮುರಿದುಕೊಂಡ ಪ್ರಸಂಗಗಳು ಆಗಾಗ್ಗೆ ನಡೆಯುತ್ತಿದೆ.

ಕೇಳುವವರೂ ಇಲ್ಲ : ಪಟ್ಟಣದಲ್ಲೊಂದು ಆರ್‌ಟಿಒ ಕಚೇರಿಯಿಲ್ಲ, ಕನಿಷ್ಠ ಪಕ್ಷ ಪೊಲೀಸರು ಸಹ ವಾಹನ ಸವಾರರಿಗೆ ನಿಯಮ ಪಾಲನೆ ಕುರಿತು ಯಾವುದೇ ಜಾಗೃತಿ ಫ‌ಲಕವನ್ನು ಸಹ ಹಾಕಿಲ್ಲ. ದ್ವಿಚಕ್ರ ವಾಹನದಲ್ಲಿ ಮೂರು ಮಂದಿ ಕುಳಿತುಕೊಂಡು ಸಂಚಾರ ಮಾಡುತ್ತಿದ್ದರೂ ಕೇಳುವವರೂ ಇಲ್ಲ ಎಂಬಂತಾಗಿದೆ. ರಸ್ತೆ ಮಧ್ಯೆಯೇ ಆಟೋ, ಕಾರುಗಳು, ಲಾರಿಗಳು ನಿಲ್ಲುತ್ತವೆ. ಕನಿಷ್ಠ ಪಕ್ಷ ರಸ್ತೆ ಬದಿಯಲ್ಲಿ ಪಾರ್ಕಿಂಗ್‌ ಮಾಡುವಂತೆ ತಿಳಿ ಹೇಳುವವರೇ ಇಲ್ಲ.

ಹೊರ ಠಾಣಿ ಸ್ಥಾಪನೆ ಅಗತ್ಯ: ಅಪಘಾತ ನಡೆದಾಗ ಒಂದೆರಡು ದಿನ ಪೊಲೀಸರನ್ನು ರಸ್ತೆಗಳಿಗೆ ಬಿಟ್ಟು ವಾಹನಗಳ ಗಾಜು ಪುಡಿ ಮಾಡುವುದು, ಅಮಾಯಕರಿಗೆ ಲಾಠಿ ರುಚಿ ತೋರಿಸಿ ಸುಮ್ಮನಾಗುತ್ತಾರೆ. ಇಷ್ಟೊಂದು ವಾಹನಗಳು ಪಟ್ಟಣದಲ್ಲಿ ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿದ್ದರೂ ಇಲ್ಲಿಯವರೆಗೂ ಕನಿಷ್ಠ ದೂರು ದಾಖಲಿಸಿಲ್ಲ, ನೋಟಿಸ್‌ ನೀಡಿಲ್ಲ. ಹೀಗಾದರೆ ಪಟ್ಟಣದಲ್ಲಿ ರಸ್ತೆಯಲ್ಲಿ ಸುಗಮ ಸಂಚಾರ ಕಾಣಲು ಅಸಾಧ್ಯ ಎಂಬ ಆರೋಪಗಳು ನಾಗರಿಕ ವಲಯದಲ್ಲಿ ಕೇಳಿ ಬರುತ್ತಿದೆ. ಸಂಬಂಧಪಟ್ಟ ಆರ್‌ಟಿಒ ಇಲಾಖೆ ಇಲ್ಲೊಂದು ಹೊರ ಠಾಣೆ ಸ್ಥಾಪನೆ ಮಾಡಿ ವಾಹನ ಸಂಚಾರದ ನಿಯಮ ಪಾಲನೆ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂಬ ಆಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಪಟ್ಟಣದ ಯಾವುದೇ ರಸ್ತೆಯಲ್ಲಿಯಾದರೂ ನೋಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಂತೆ ವಾಹನಗಳು ನಿಲ್ಲುತ್ತವೆ. ಅದರಲ್ಲೂ ಬಹುತೇಕ ಅಂಗಡಿ ಮಾಲೀಕರಿರಬಹುದು, ಇತರರು ಸಹ ತಮ್ಮ ವಾಹನಗಳನ್ನು ಅಂಗಡಿಯ ಬದಿಯ ಕಿರಿದಾದ ರಸ್ತೆಯಲ್ಲಿಯೇ ನಿಲ್ಲಿಸಿರುತ್ತಾರೆ. ಮತ್ತೂಂದು ವಾಹನ ಸಾಗಬೇಕಾದರೆ ನಿಜಕ್ಕೂ ಚಾಲಕ ಹರಸಾಹಸ ಪಡಬೇಕಾಗಿದೆ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.