Lack of dialysis: ಡಯಾಲಿಸಿಸ್‌ ಇಲ್ಲದೇ ಸಂಕಷ್ಟದಲ್ಲಿ ರೋಗಿಗಳು!


Team Udayavani, Dec 3, 2023, 4:08 PM IST

Lack of dialysis: ಡಯಾಲಿಸಿಸ್‌ ಇಲ್ಲದೇ ಸಂಕಷ್ಟದಲ್ಲಿ ರೋಗಿಗಳು!

ರಾಮನಗರ: ಡಯಾಲಿಸಿಸ್‌ ಸಿಬ್ಬಂದಿ ಪ್ರತಿಭಟನೆ ಆರಂಭಿಸಿದ್ದು, ಮೂರು ದಿನಗಳಿಂದ ಜಿಲ್ಲೆಯ ನಾಲ್ಕು ಆಸ್ಪತ್ರೆಗಳ ಡಯಾಲಿಸಿಸ್‌ ಕೇಂದ್ರಗಳು ಬಂದ್‌ ಆಗಿದೆ. 700ಕ್ಕೂ ಹೆಚ್ಚು ರೋಗಿಗಳಿಗೆ ಇದೀಗ ಮುಂದೇನು ಎಂಬ ಆತಂಕ ಎದುರಾಗಿದೆ. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿದ್ದ ರೋಗಿಗಳು ಡಯಾಲಿಸಿಸ್‌ ಕೇಂದ್ರಗಳು ಬಂದ್‌ ಆಗಿರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮೂತ್ರಪಿಂಡ ಸೋಂಕಿನಿಂದ ಬಳಲು ತ್ತಿರು ವವರು ಡಯಾಲಿಸಿಸ್‌ ಮಾಡಿಸಿ ಕೊಳ್ಳಲು ಹಿಂದೆಲ್ಲಾ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಬೇಕಿತ್ತು. ರೋಗಿಗಳನ್ನು ಬೆಂಗಳೂರಿನ ವರೆಗೆ ಕರೆದೊಯ್ದು ಡಯಾಲಿಸಿಸ್‌ ಮಾಡಿಸುವುದು ಕುಟುಂಬದವರಿಗೆ ಸವಾಲಿನ ಕೆಲಸವಾಗಿ ತ್ತು. ಇನ್ನು ಬಡಕುಟುಂಬಗಳಿಗೆ ಡಯಾಲಿಸಿಸ್‌ ನಿಲುಕದ ನಕ್ಷತ್ರವಾಗಿತ್ತು. ಇಂತಹ ಸಂದರ್ಭದಲ್ಲಿ ಸರ್ಕಾರ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಕೇಂದ್ರ ಆರಂಭಿ ಸಿದ್ದು, ಬಡರೋಗಿಗಳಿಗೆ ಸಾಕಷ್ಟು ಅನುಕೂಲವಾಗಿತ್ತು. ಇದೀಗ ಮತ್ತೆ ಸಮಸ್ಯೆ ಎದುರಾಗಿದ್ದು, ಡಯಾಲಿಸಿಸ್‌ ಇಲ್ಲದೆ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಿಲ್ಲೆಯಲ್ಲಿವೆ 16 ಯಂತ್ರಗಳು: ಜಿಲ್ಲಾಸ್ಪತ್ರೆ ಹಾಗೂ ಮೂರು ತಾಲೂಕು ಆಸ್ಪತ್ರೆಗಳು ಸೇರಿ ಜಿಲ್ಲೆಯಲ್ಲಿ 16 ಡಯಾಲಿಸಿಸ್‌ ಯಂತ್ರಗಳು ಕೆಲಸ ಮಾಡುತ್ತಿವೆ. ಜಿಲ್ಲಾಸ್ಪತ್ರೆಯಲ್ಲಿ 7, ಉಳಿದ ಮೂರು ತಾಲೂಕು ಆಸ್ಪತ್ರೆಗಳಲ್ಲಿ ತಲಾ 3 ಯಂತ್ರಗಳು ಕಾರ್ಯನಿರ್ವ ಹಿಸುತ್ತಿದ್ದು, ಜಿಲ್ಲೆಯಲ್ಲಿ 19 ಮಂದಿ ಸಿಬ್ಬಂದಿ ಡ ಯಾಲಿಸಿಸ್‌ ಕಾರ್ಯದಲ್ಲಿ ನಿರತವಾಗಿದ್ದಾರೆ. ಪ್ರತಿ ವ್ಯಕ್ತಿಗೆ ಡಯಾಲಿಸಿಸ್‌ ಮಾಡಲು 4ರಿಂದ 6 ತಾಸುಗಳು ಬೇಕಿದ್ದು, ಪ್ರತಿದಿನ ಒಂದು ಯಂತ್ರದಲ್ಲಿ ಎರಡ ರಿಂದ ಮೂರು ಮಂದಿಗೆ ಡಯಾಲಿಸಿಸ್‌ ಮಾಡಲಾಗುತಿತ್ತು.

700 ಮಂದಿಗೆ ಡಯಾಲಿಸಿಸ್‌: ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ನೋಂದಾಯಿಸಿಕೊಂಡಿರುವ ರೋಗಿಗಳಿಗೆ ಸರದಿಯ ಮೇಲೆ ಡಯಾಲಿಸಿಸ್‌ ಮಾಡುತ್ತಿದ್ದು, ಪ್ರತಿಯೊಬ್ಬರಿಗೂ ದಿನಾಂಕ ನಿಗ ದಿ ಮಾಡಲಾಗಿದೆ. ಇದಕ್ಕೆ ಅನುಗುಣವಾಗಿ ಡಯಾಲಿಸಿಸ್‌ ನಡೆಯು ತ್ತಿದ್ದು, ಪ್ರತಿ ದಿನ ರಾಮನಗರದಲ್ಲಿ 37 ಮಂದಿಗೆ, ಚನ್ನಟ್ಟಣದಲ್ಲಿ 18 ಮಂದಿಗೆ, ಮಾಗಡಿಯಲ್ಲಿ 15 ಮಂದಿಗೆ, ಕನಕಪುರದಲ್ಲಿ 9 ಮಂದಿಗ ಡಯಾಲಿಸಿಸ್‌ ಮಾಡುತ್ತಿದ್ದು, ತಿಂಗಳಿಗೆ ರಾಮನಗರದಲ್ಲಿ 350 ಮಂದಿ, ಚನ್ನಪಟ್ಟಣದಲ್ಲಿ 150 ಮಂದಿ, ಮಾಗಡಿಯಲ್ಲಿ 100 ಮಂದಿ, ಕನಕಪುರದಲ್ಲಿ 80 ಮಂದಿ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದಾರೆ.

ಡಯಾಲಿಸಿಸ್‌ ಕೇಂದ್ರದ ಸಿಬ್ಬಂದಿ ಸಮಸ್ಯೆ ಏನು? : ಪದೇ ಪದೆ ವೇತನ ಕಡಿತ ಮಾಡುತ್ತಿರುವುದರಿಂದ ನಮಗೆ ಸಮಸ್ಯೆ ಎದುರಾಗಿದ್ದು, ಸೂಕ್ತ ವೇತನ ಹಾಗೂ ಇಎಸ್‌ಐ ಪಿಎಫ್‌ ಸೌಲಭ್ಯ ನೀಡಬೇಕು ಎಂಬುದು ಪ್ರತಿಭಟನಾ ನಿರತರ ಡಯಾಲಿಸಿಸ್‌ ಕೇಂದ್ರಗಳ ಸಿಬ್ಬಂದಿಯ ಆಗ್ರಹ. ಆರಂಭದಲ್ಲಿ ಬಿಆರ್‌ಎಸ್‌ ಸಂಸ್ಥೆ ಡಯಾಲಿಸಿಸ್‌ ಆರಂಭಿಸಿದಾಗ ಸಿಬ್ಬಂದಿಗಳಿಗೆ 20 ಸಾವಿರ ರೂ. ಇದ್ದ ವೇತನವನ್ನು, ಸರ್ಕಾರ ವಹಿಸಿಕೊಂಡಾಗ 14 ಸಾವಿರಕ್ಕೆ ಕಡಿತ ಮಾಡಲಾಗಿತ್ತು. ಬಳಿಕ 13,800ಕ್ಕೆ ಇಳಿಸಿದ್ದು, ಪ್ರಸ್ತುತ 13000 ರೂ. ಸಂದಾಯವಾಗುತ್ತಿದೆ. ಪದೇ ಪದೆ ವೇತನ ಕಡಿತವಾಗುತ್ತಿರುವುದು, ಇಎಸ್‌ಐ, ಪಿಎಫ್‌ ಸೌಲಭ್ಯ ಬೇಕು ಎಂಬುದು ಡಯಾಲಿಸಿಸ್‌ ಸಿಬ್ಬಂದಿಗಳ ಆಗ್ರಹವಾಗಿದೆ.

ಜಿಲ್ಲೆಯಲ್ಲಿ 3 ದಿನದಿಂದ ಡಯಾಲಿಸಿಸ್‌ ಕೇಂದ್ರ ಬಂದ್‌ : ಕಳೆದ ಮೂರು ದಿನಗಳಿಂದ ಡಯಾಲಿಸಿಸ್‌ ಕೇಂದ್ರಗಳು ಏಕಾಏಕಿ ಬಂದ್‌ ಆಗಿದ್ದು, ಇದೀಗ ಈ ರೋಗಿಗಳು ಏನು ಮಾಡುವುದು ಎಂಬ ಜಿಜ್ಞಾಸೆಗೆ ಒಳಗಾಗಿದ್ದಾರೆ. ದುಬಾರಿ ಹಣತೆತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸಿಕೊಳ್ಳಾಗದೆ, ಬೆಂಗಳೂರು, ಮೈಸೂರಿನವರೆಗೆ ಪ್ರಯಾಣ ಬೆಳೆಸಲಾಗದೆ ಪರದಾಡುತ್ತಿರುವ ಬಡ ರೋಗಿಗಳು ಡಯಾಲಿಸಿಸ್‌ಗಾಗಿ ಮೊರೆ ಇಡುತ್ತಿದ್ದಾರೆ.

ಶುದ್ಧ ನೀರಿನ ಕೊರತೆ: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ನಡೆಸಲು ಬೇಕಿರುವ ಆರ್‌ಒ ಫ್ಲೂರಿಫೈ ನೀರಿನ ಕೊರತೆ ಎದುರಾಗಿದ್ದು, ಕೆಲವೊಮ್ಮೆ ಪರಿಪೂರ್ಣ ವಾದ ಡಯಾಲಿಸಿಸ್‌ ನಡೆಸಲು ಇದು ಸಮಸ್ಯೆ ಯಾಗಿ ಕಾಡುತ್ತಿದೆ. ಒಬ್ಬ ವ್ಯಕ್ತಿಗೆ ಡಯಾಲಿಸಿಸ್‌ ಮಾಡಲು 120 ಲೀಟರ್‌ ಶುದ್ಧ ನೀರಿನ ಅಗತ್ಯತೆ ಇದ್ದು, ಇದನ್ನು ಸಮರ್ಪಕ ಪ್ರಮಾಣದಲ್ಲಿ ನೀಡದ ಕಾರಣ ಡಯಾಲಿಸಿಸ್‌ಗೆ ಸಮಸ್ಯೆಯಾ ಗುತ್ತಿದೆ. ಇನ್ನು ಕೆಲವೆಡೆ ಡಯಾಲಿಸಿಸ್‌ ಯಂತ್ರದಲ್ಲಿ ಸಣ್ಣಪುಟ್ಟ ತಾಂತ್ರಿಕ ದೋಷಗಳು ಆಗ್ಗಾಗ್ಗೆ ಕಂಡು ಬರುತ್ತವೆ ಎಂಬುದನ್ನು ಹೊರತು ಪಡಿಸಿದರೆ, ಜಿಲ್ಲೆಯ 16 ಡಯಾಲಿಸಿಸ್‌ ಯಂತ್ರಗಳು ಕಾರ್ಯನಿರ್ವಹಿಸುತ್ತಿವೆ.

– ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.