ರಾಮನಗರ: ಇ-ಖಾತೆ ಅಕ್ರಮ; ಪಿಡಿಒ ಆತ್ಮಹತ್ಯೆ


Team Udayavani, May 1, 2022, 1:31 PM IST

Untitled-1

ರಾಮನಗರ: ಇ-ಖಾತೆ ಅಕ್ರಮದ ಆರೋಪದ ಮೇಲೆ ಅಮಾನತುಗೊಂಡಿದ್ದ ಬಿಡದಿ ಹೋಬಳಿ ಬೈರಮಂಗಲ ಗ್ರಾಮ ಪಂಚಾಯ್ತಿ ಪಿಡಿಒ ರವಿ ಕುಮಾರ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಿಲ್ಲೆಯ ಕನಕಪುರ ತಾಲೂಕಿನ ಕೊಳ್ಳಿಗ ನಹಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪಿಡಿಒ ರವಿ ಕುಮಾರ್‌ ಶವ ಪತ್ತೆಯಾಗಿದೆ.

ಚನ್ನಹಳ್ಳಿ ಗ್ರಾಪಂನಲ್ಲಿ ಅಕ್ರಮ ಪತ್ತೆ!: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ದೇವನಹಳ್ಳಿ ತಾಲೂಕು ಚನ್ನ ಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 2021ರ ಸೆಪ್ಟಂಬರ್‌ನಲ್ಲಿ ಅಪರಿಚಿತ ವ್ಯಕ್ತಿಯ ಡಾಂಗಲ್‌ ಉಪಯೋಗಿಸಿ, ಇ-ಸ್ವತ್ತು ಲಾಗಿನ್‌ನಲ್ಲಿ ಅಲ್ಲಿನ ಪಂಚಾಯ್ತಿ ಅಭಿವೃದ್ಧಿ ಅಧಿ ಕಾರಿಯ ಡಿಜಿಟಲ್‌ ಸಹಿ ಇಲ್ಲದೆ 36 ಖಾತೆಗಳನ್ನು ಅಕ್ರಮವಾಗಿ ಅನುಮೋದನೆಯಾಗಿದೆ ಎಂದು ದೇವ ನಹಳ್ಳಿ ತಾಲೂಕು ಪಂಚಾಯ್ತಿ ಇಒ ವಸಂತ ಕುಮಾರ್‌ ಅವರು ನೀಡಿರುವ ದೂರಿನ ಹಿನ್ನೆಲೆಯಲ್ಲಿ (ಎಫ್.ಐ. ಆರ್‌ ಮಾಹಿತಿ- ಅಪರಾಧ ಸಂಖ್ಯೆ 0727/2021, ದಿನಾಂಕ 4ನೇ ಡಿಸೆಂಬರ್‌ 2021) ತನಿಖೆ ಕೈಗೆತ್ತಿ ಕೊಂಡಿದ್ದರು.

ದೇವನಹಳ್ಳಿ ತಾಲೂಕು ಪಂಚಾಯ್ತಿ ಇಒ ವಸಂತ ಕುಮಾರ್‌ ಅವರು ಸೈಬರ್‌ ಕ್ರೈಂ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಗುರುಪ್ರಸಾದ್‌.ಎಚ್‌.ಎನ್‌ ಎಂಬ ಅಪರಿಚಿತ ವ್ಯಕ್ತಿಯ ಹೆಸರಿನ ಡಾಂಗಲ್‌ ಅಸೈನ್‌ ಮಾಡಿ, ಚನ್ನಹಳ್ಳಿ ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿ ಕಾರಿಯವರ ಇ-ಸ್ವತ್ತು ಲಾಗಿನ್‌ ದುರ್ಬಳಕೆ ಮಾಡಿಕೊಂಡು ಶ್ರೀ ತಿರುಪತಿ ರೆಡ್ಡಿ ಬಿನ್‌ ಬಾಬ್‌ ರೆಡ್ಡಿ ಮತ್ತು ಅಜಯ್‌ ಎಂಬುವರ ಹೆಸರಿಗೆ 36 ಇ-ಸ್ವತ್ತು ಖಾತೆಗಳು ಅಕ್ರಮವಾಗಿ ಅನುಮೋದನೆಯಾಗಿದೆ ಎಂದು ದೂರಿದ್ದರು. ಕಾನೂನು ಬಾಹೀರವಾಗಿ ತಮ್ಮ ಇ-ಸ್ವತ್ತು ಲಾಗಿನ್‌ ಅನ್ನು ದುರ್ಬಳಕೆ ಮಾಡಿಕೊಂಡು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅವರ ಇ-ಸ್ವತ್ತು ಖಾತೆಗಳನ್ನು ಅಕ್ರಮವಾಗಿ ಅನುಮೋದಿಸಿರುವ ಸದರಿ ಆಸಾಮಿಯನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಬೇಕು ಎಂದು ದೂರು ಸಲ್ಲಿಸಿದ್ದರು.

ಗ್ರಾಪಂ ಗಣಕಯಂತ್ರ ವಶ: ಅಕ್ರಮದಲ್ಲಿ ಪತ್ತೆಯಾದ ಡಾಂಗಲ್‌ ಗುರುಪ್ರಸಾದ್‌ ಎಚ್‌.ಎನ್‌ ಅವರ ಹೆಸರಿನಲ್ಲಿದ್ದು, ಇವರು ಹಾರೋಹಳ್ಳಿ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷರಾಗಿದ್ದರು. ಹೀಗಾಗಿ ಸೈಬರ್‌ ಕ್ರೈಂ ಪೊಲೀಸರು 2022ರ ಮಾರ್ಚ್‌ನಲ್ಲಿ ಕನಕಪುರ ತಾಲೂಕು ಹಾರೋಹಳ್ಳಿ ಪಟ್ಟಣ ಪಂಚಾಯ್ತಿ ಮತ್ತು ರಾಮನಗರದ ಬಿಡದಿ ಹೋಬಳಿ ಬೈರಮಂಗಲ ಗ್ರಾಮ ಪಂಚಾಯ್ತಿಗಳಿಗೆ ಭೇಟಿ ಕೊಟ್ಟು ಗಣಕಯಂತ್ರಗಳನ್ನು ವಶಕ್ಕೆ ತೆಗೆದುಕೊಂಡು ಹೋಗಿದ್ದರು.

ನಂತರ ಹಾರೋಹಳ್ಳಿ ಪಟ್ಟಣ ಪಂಚಾಯ್ತಿಯಲ್ಲಿ ಕಂಪ್ಯೂಟರ್‌ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದ ಭರತ್‌ ಎಂಬುವನನ್ನು ಪೊಲೀಸರು ಬಂಧಿಸಿದ್ದರು. ಈತ ತನ್ನ ಸ್ವ -ಇಚ್ಚಾ ಹೇಳಿಕೆಯಲ್ಲಿ ಬೈರಮಂಗಲ ಗ್ರಾಮ ಪಂಚಾಯ್ತಿ ಪಿಡಿಒ ರವಿಕುಮಾರ್‌ ಜೆ.ಡಿ ಎಂಬುವರು ತಮಗೆ ಖಾಯಂ ಕೆಲಸದ ಆಮೀಷವೊಡ್ಡಿ ಹಾರೋಹಳ್ಳಿ ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರ (ಗುರುಪ್ರಸಾದ್‌) ಡಾಂಗಲ್‌ ಬಳಸಿ, ಎನಿ ಡೆಸ್ಕ್ ತಂತ್ರಾಂಶದ ಮೂಲಕ 36 ಇ-ಖಾತೆಗಳನ್ನು ಅಕ್ರಮವಾಗಿ ಅನುಮೋದಿಸಿರುವುದಾಗಿ ಹೇಳಿದ್ದ. ಸದರಿ ರವಿಕುಮಾರ್‌ ವಿರುದ್ಧ ವಿದ್ಯುನ್ಮಾನ ಸಾಕ್ಷ್ಯಗಳು ಲಭ್ಯವಾಗಿದ್ದವು. ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ, ಪಿಡಿಒ ಆಗಿದ್ದ ರವಿ ಕುಮಾರ್‌ ನಾಪತ್ತೆಯಾಗಿದ್ದ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಅವರು ಏಪ್ರಿಲ್‌ 6ರಂದು ಆದೇಶ ಹೊರೆಡಿಸಿ, ಬೈರಮಂಗಲ ಗ್ರಾಮ ಪಂಚಾಯ್ತಿ ಪಿಡಿಒ ರವಿಕುಮಾರ್‌.ಜೆ.ಡಿ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತುಗೊಳಿಸಿ ಆದೇಶಿಸಿದ್ದರು.

ಅಕ್ರಮದ ತನಿಖೆ ಪೂರ್ಣಗೊಂಡಿಲ್ಲ: ಇ-ಖಾತೆ ಅಕ್ರಮದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಅಷ್ಟರಲ್ಲಾಗಲೇ ಪಿಡಿಒ ರವಿ ಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಿಡಿಒ ರವಿ ಕುಮಾರ್‌ ಡೆತ್‌ನೋಟ್‌ ಬರೆದಿದ್ದಾನೆಯೇ? ಬರೆದಿದ್ದರೆ ಅದರಲ್ಲಿ ಯಾರ್ಯಾರ ಹೆಸರಿದೆ? ಆತ್ಮಹತ್ಯೆಗೆ ಪ್ರಚೋದನೆ ಏನಾಗಿತ್ತು? ಹೀಗೆ ಹತ್ತು ಹಲವು ಅನುಮಾನಗಳಿಗೆ ಕಾರಣವಾಗಿರುವ ಇಡೀ ಪ್ರಕರಣವ ಪಿಡಿಒ ರವಿ ಕುಮಾರ್‌ ಸಾವಿ ನಿಂದಾಗಿ ತನಿಖೆ ಹಳ್ಳಹಿಡಿಯದಿರಲಿ. ಪ್ರಕರಣದ ತನಿಖೆ ಮುಂದುವರಿಸಿ, ತಾರ್ಕಿಕ ಹಂತಕ್ಕೆ ತೆಗೆದುಕೊಂಡ ಹೋಗುವಂತೆ ನಾಗರಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.