ನನ್ನ ಸೋಲಿನ ಬಗ್ಗೆ ಪಕ್ಷಾತೀತವಾಗಿ ಜನ ಬೇಸರ ವ್ಯಕ್ತಪಡಿಸಿದ್ದಾರೆ: ನಿಖಿಲ್
ನನಗಿನ್ನೂ ವಯಸ್ಸಿದೆ,ಜನಸೇವೆ ಮಾಡುತ್ತೇನೆ
Team Udayavani, May 18, 2023, 2:55 PM IST
ರಾಮನಗರ: ರಾಮನಗರದಲ್ಲಿ ನನ್ನ ಸೋಲಿನ ವಿಚಾರದ ಬಗ್ಗೆ ಪಕ್ಷಾತೀತವಾಗಿ ಜನ ಬೇಸರ ವ್ಯಕ್ತಪಡಿಸಿದ್ದಾರೆ. ನನಗಿನ್ನೂ ವಯಸ್ಸಿದೆ, ಹೆಚ್.ಡಿ. ದೇವೇಗೌಡರು ಹೆಚ್.ಡಿ.ಕುಮಾರಸ್ವಾಮಿಯವರಂತೆ ಜನಸೇವೆ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ನಿಖಿಲ್ , ಕುಮಾರಸ್ವಾಮಿ ಅವರು ನಿಮ್ಮ ನಂಬಿ ಸ್ಪರ್ಧೆ ಮಾಡಿದರು. ನೀವು ಕೈಹಿಡಿದ್ರಿ,
ಪಕ್ಷ ಅಧಿಕಾರಕ್ಕೆ ತರಲು ಪಂಚರತ್ನ ಯಾತ್ರೆ ಮಾಡಿದರು. ಅವರ ಅನುಪಸ್ಥಿತಿಯಲ್ಲಿ ಇಲ್ಲಿನ ಜನ ಅವರನ್ನು ಗೆಲ್ಲಿಸಿದರು. ಗೆಲ್ಲುವ ಕುರಿತು ನನಗೆ ಭರವಸೆ ಇತ್ತು.ಇಲ್ಲಿ ಸುನಾಮಿಯನನ್ನೆ ಎಬ್ಬಿಸಿದರು. ಯುವಕರು, ರೈತರು ಎಲ್ಲರೂ ಕೈಹಿಡಿದರು ಎಂದರು.
ಕುಮಾರಣ್ಣನ ಮೇಲಿನ ಜನ ಪ್ರೀತಿ ಕಂಡು ಬೆರಗಾದೆ. ರಾಮನಗರ ಜಿಲ್ಲೆಯಲ್ಲೇ ನಿಷ್ಠಾವಂತ ಕಾರ್ಯಕರ್ತರು ಅತಿ ಹೆಚ್ಚು ಇರುವುದು ಚನ್ನಪಟ್ಟಣದಲ್ಲೇ. ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಮನಗರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ.ನಾನು ಸೋತಿರಬಹುದು ಆದರೆ ರಾಮನಗರದ ಜನ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ. ಅದು ವರ್ಣಿಸಲು ಸಾಧ್ಯವಿಲ್ಲ. ಎಂದಿಗೂ ನಾನು ಚಿರಋಣಿ. ನಿಮ್ಮ ಜೊತೆಯಲ್ಲಿ ನಾನು ನನ್ನ ಕುಟುಂಬ ಇರುತ್ತದೆ. ಸೋತ ಮಾತ್ರಕ್ಕೆ ಮನೆಯಲ್ಲಿ ಕೂರುವುದಿಲ್ಲ. ನಿಮ್ಮ ಜತೆ ಇರುತ್ತೇನೆ.ಸೋಲು ಗೆಲುವು ನಮ್ಮ ಕುಟುಂಬಕ್ಕೆ ಹೊಸತಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ