ವಾಹನ ಸವಾರರಿಗೆ ಕಂಟಕಪ್ರಾಯವಾದ ಹೆದ್ದಾರಿ ರಸ್ತೆ


Team Udayavani, Jun 28, 2022, 2:50 PM IST

ವಾಹನ ಸವಾರರಿಗೆ ಕಂಟಕಪ್ರಾಯವಾದ ಹೆದ್ದಾರಿ ರಸ್ತೆ

ಕನಕಪುರ: ನಗರಸಭೆ ಅಧಿಕಾರಿಗಳ ಬೇಜವಾ ಬ್ದಾರಿಯಿಂದ ಅಗೆದು ಹಾಕಿರುವ ರಸ್ತೆ ಗುಂಡಿಗಳು, ಸಾರ್ವಜನಿಕರ ಪ್ರಾಣಕ್ಕೆ ಕಂಟಕ ಪ್ರಾಯವಾಗಿ ಪರಿಣಮಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಯುಜಿಡಿ ಕಾಮಗಾರಿ ನೆಪದಲ್ಲಿ ಹೆದ್ದಾರಿ ರಸ್ತೆ ಅಗೆದು ಹಾಕಿರುವ ನಗರಸಭೆ ಅಧಿಕಾರಿಗಳು, ತಿಂಗಳು ಕಳೆದರೂ, ರಸ್ತೆ ಸರಿಯಾಗಿ ಮುಚ್ಚದೆ ಹೆದ್ದಾರಿಯಲ್ಲಿ ಓಡಾಡುವ ಸವಾರರು ಅಪಘಾತಕ್ಕೀಡಾಗುವ ಪರಿಸ್ಥಿತಿ ನಿರ್ಮಾಣ ಮಾಡಿರುವ ನಗರಸಭೆ ಅಧಿಕಾರಿಗಳ ವರ್ತನೆಗೆ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.

ನಗರದಲ್ಲಿ ಕೊಳಾಯಿ ಸಂಪರ್ಕ, ದುರಸ್ತಿ, ಯುಜಿಡಿ ಕಾಮಗಾರಿ ಸೇರಿದಂತೆ ನಾನಾ ಕಾರಣಗಳಿಗೆ ರಸ್ತೆಯನ್ನು ಅಗೆಯುವ ನಗರಸಭೆ ಅಧಿಕಾರಿಗಳು ಗುಂಡಿಗಳನ್ನು ಸರಿಯಾಗಿ ಮುಚ್ಚದೆ ಇರುವುದು ಅಧಿಕಾರಿಗಳ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಂತಿದೆ.

ಕಾಟಾಚಾರಕ್ಕೆ ಗುಂಡಿ ಮುಚ್ಚಿದ್ದಾರೆ: ಯಾವುದೇ ರಸ್ತೆಗಳಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೂ ಮುನ್ನ ಯುಜಿಡಿ ಮತ್ತು ಕೊಳಾಯಿ ಸಂಪರ್ಕ ಕಲ್ಪಿಸಿ ನಂತರ ವೈಜ್ಞಾನಿಕವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು. ಆದರೆ, ನಗರಸಭೆ ಅಧಿಕಾರಿಗಳು ಅಭಿವೃದ್ಧಿಯಾಗಿರುವ ಕಾಂಕ್ರೀಟ್‌ ರಸ್ತೆಗಳನ್ನು ಅಗೆದು ಗುಂಡಿಗಳು ಬಿದ್ದಿದ್ದರೂ, ಅದರ ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ. ರಸ್ತೆಗಳನ್ನು ಅಗೆದು ಕೆಲಸ ಮುಗಿದ ನಂತರ ಕಾಟಾಚಾರಕ್ಕೆ ಗುಂಡಿ ಮುಚ್ಚಿ ಕೈತೊಳೆದುಕೊಳ್ಳುವ ಅಧಿಕಾರಿಗಳು, ರಸ್ತೆ ಗುಂಡಿ ಸರಿಯಾಗಿ ಮುಚ್ಚಿದ್ದಾರೂ, ಇಲ್ಲವೂ ಎಂದು ತಿರುಗಿ ಸಹ ನೋಡುವುದಿಲ್ಲ ಎಂಬುದು ಸಾರ್ವಜನಿಕರಿಂದ ಕೇಳಿ ಬಂದಿರುವ ಆರೋಪ.

ಕಾಮಗಾರಿ ನೆಪದಲ್ಲಿ ರಸ್ತೆ ಅಗೆದ ಅಧಿಕಾರಿಗಳು: ನಗರದ ಕೆಎನ್‌ಎಸ್‌ ವೃತ್ತದ ಸಮೀಪವಿರುವ ಎಸ್‌ಬಿಎಂ ಬ್ಯಾಂಕಿನ ಮುಂಭಾಗದಲ್ಲಿ 209 ರಾಷ್ಟ್ರೀಯ ಹೆದ್ದಾರಿ ರಸ್ತೆ ಯುಜಿಡಿ ಕಾಮಗಾರಿ ನೆಪದಲ್ಲಿ ಅಗೆದು ಹಾಕಿರುವ ನಗರಸಭೆ ಅಧಿಕಾರಿಗಳು, ಗುಂಡಿಗಳನ್ನು ಮುಚ್ಚದೆ ಇರುವುದು ಸಾರ್ವಜನಿಕರ ಪ್ರಾಣಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿದೆ. ಯುಜಿಡಿ ಕಾಮಗಾರಿ ನೆಪದಲ್ಲಿ ರಸ್ತೆ ಅಗೆದ ನಗರಸಭೆ ಅಧಿಕಾರಿಗಳು ಕಾಮಗಾರಿ ಮುಗಿದು ತಿಂಗಳು ಕಳೆದರೂ ರಸ್ತೆ ಗುಂಡಿಯನ್ನು ಸರಿಯಾಗಿ ಮುಚ್ಚಿ ಸಮತಟ್ಟು ಮಾಡುವ ಗೋಜಿಗೆ ಹೋಗಿಲ್ಲ.

ಹೆದ್ದಾರಿ ರಸ್ತೆ ದುರಸ್ತಿಗೊಳಿಸಿ: ಗುಂಡಿ ಬಗೆದ ಮಣ್ಣನ್ನು ಬೇಕಾಬಿಟ್ಟಿಯಾಗಿ ಹಾಕಿರುವುದು ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಅಪಾಯಕ್ಕೆ ಅಹ್ವಾನ ನೀಡುತ್ತಿದೆ. ಹೆದ್ದಾರಿಯಲ್ಲಿ ವೇಗವಾಗಿ ಓಡಾಡುವ ಸವಾರರು ಗುಂಡಿಗಳಲ್ಲಿ ವಾಹನಗಳನ್ನು ಚಲಾಯಿಸಿ ಸ್ವಲ್ಪದರಲ್ಲೇ ಅಪಾಯಗಳಿಂದ ಪಾರಾಗಿರುವ ಉದಾಹರಣೆಗಳು ಸಾಕಷ್ಟಿವೆ. ವಾಹನ ಸವಾರರು ಅಪಘಾತಕ್ಕೀಡಾಗಿ ಅಪಾಯ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ಹೆದ್ದಾರಿ ರಸ್ತೆ ದುರಸ್ತಿಗೊಳಿಸಬೇಕು ಎಂಬುದು ಸಾರ್ವ ಜನಿಕರ ಆಗ್ರಹ.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.