ನಿದ್ದೆ ಮಾಡದೇ ಆಧಾರ್‌ಗಾಗಿ ಕಾದು ನಿಂತರು

ಸರ್ಕಾರಿ ಶುಲ್ಕ 100 ರೂ.ಮಾತ್ರ ನೀಡಿ ಎಂದ ತಹಶೀಲ್ದಾರ್‌ ವರ್ಷಾ ಒಡೆಯರ್‌

Team Udayavani, Sep 13, 2020, 2:24 PM IST

ನಿದ್ದೆ ಮಾಡದೇ ಆಧಾರ್‌ಗಾಗಿ ಕಾದು ನಿಂತರು

ಸಾಂದರ್ಭಿಕ ಚಿತ್ರ

ಕನಕಪುರ: ಊಟ, ನಿದ್ದೆ ಬಿಟ್ಟು ಆಧಾರ್‌ಗಾಗಿ ರಾತ್ರಿ 3 ಗಂಟೆಯಿಂದ ಕಾದುಕುಳಿತ ಸಾರ್ವಜನಿಕರಿಗೆ ಬೆಳಗ್ಗೆ 10 ಗಂಟೆಯಾದರೂ ಟೋಕನ್‌ ನೀಡದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಪ್ರತಿಯೊಂದು ಸರ್ಕಾರಿ ಸೌಲಭ್ಯಗಳಿಗೆ ಮತ್ತು ಇತರೆ ಕೆಲಸಗಳಿಗೂ ಆಧಾರ್‌ ಕಡ್ಡಾಯಗೊಳಿಸಿದೆ. ತಾಲೂಕಿನಾದ್ಯಂತ ಹೋಬಳಿ ಮಟ್ಟದಲ್ಲಿ ಆಧಾರ್‌ ಕೇಂದ್ರ ಸ್ಥಗಿತಗೊಂಡು ತಾಲೂಕು ಕೇಂದ್ರಕ್ಕೆ ಊಟ ನಿದ್ದೆ ಬಿಟ್ಟು ಬೆಳಗ್ಗೆ 3ರಿಂದ ಕಾದು ಕುಳಿತುಕೊಳ್ಳುತ್ತಿದ್ದಾರೆ. ಬುಧವಾರ ತಹಶೀಲ್ದಾರ್‌ ಅವರು ಸಹಿ ಇರುವ ಟೋಕನ್‌ಗಳು ಲಭ್ಯವಿರಲಿಲ್ಲ. ಇದರಿಂದ ಕಾದು ಕುಳಿತಿದ್ದ ಸಾರ್ವಜನಿಕರು ತಾಳ್ಮೆಕಳೆದುಕೊಂಡು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಸಾರ್ವಜನಿಕರ ಆರೋಪ: ಕೋವಿಡ್ ಪೂರ್ವದಲ್ಲಿಪ್ರತಿ ಹೋಬಳಿ ಕೇಂದ್ರ ಮತ್ತು ನಾಡ ಕಚೇರಿಗಳಲ್ಲಿ ಆಧಾರ್‌ ತಿದ್ದುಪಡಿ ಮತ್ತು ಹೊಸ ಆಧಾರ್‌ ಕಾರ್ಡ್‌ ಪಡೆಯಲು ಅವಕಾಶವಿತ್ತು. ಆದರೆ ಕೋವಿಡ್ ನಂತರ ಸ್ಥಗಿತಗೊಳಿಸಿರುವ ಕೇಂದ್ರಗಳನ್ನು ಇನ್ನೂ ತೆರದಿಲ್ಲ. ಒಂದು ಆಧಾರ್‌ ತಿದ್ದುಪಡಿ ಮಾಡಲು 200 ರಿಂದ 250 ರೂ. ವಸೂಲಿ ಮಾಡುತ್ತಿದ್ದಾರೆ. ಅಧಿಕಾರಿಗಳು ಮತ್ತು ತಾಲೂಕು ಆಡಳಿತ ಕಮಿಷನ್‌ ಆಸೆಗೆ ಬಿದ್ದಿದ್ದಾರಾ ಎಂಬ ಅನುಮಾನ ವ್ಯಕ್ತವಾಗುತ್ತಿವೆ ಎಂದು ಆರೋಪಿಸಿದರು. ಮಧ್ಯವರ್ತಿಗಳಿಗೆ 1 ರೂ. ತಿದ್ದುಪಡಿ ನಕಲು ಅರ್ಜಿಗೆ 5 ರೂ. ಕೊಡಬೇಕು. ಅವಿದ್ಯಾವಂತರು ಬಂದರೆ ಅರ್ಜಿ ತುಂಬಲು 30 ರೂ. ಕೊಡಬೇಕು. ಹಣವಿಲ್ಲದೆ ಯಾವುದೇ ಕೆಲಸ ಆಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕರ ಗೋಳು ಕೇಳಿ ಮಾಧ್ಯಮ ಪ್ರತಿನಿಧಿಗಳು ತಹಶೀಲ್ದಾರ್‌ ಅವರಿಗೆ ಕರೆಮಾಡಿದ ನಂತರ ಆಗಮಿಸಿದ ತಹಶೀಲ್ದಾರ್‌ ವರ್ಷಾ ಒಡೆಯರ್‌, ಏಕಾಏಕಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.ಟೋಕನ್‌ಗಳು ಮುಗಿದಿದೆ ಎಂದು ತನಗೆ ಏಕೆ ಮೊದಲೇ ತಿಳಿಸಲಿಲ್ಲ. ಸಾರ್ವಜನಿಕರನ್ನು ತಾಸು ಗಟ್ಟಲೇ ಕಾಯುವಂತೆ ಮಾಡಿದ್ದೀರಿ ಎಂದು ಗರಂ ಆದರು. 100 ಸರ್ಕಾರಿ ಶುಲ್ಕ ಬಿಟ್ಟು ಹೆಚ್ಚುವರಿ ಯಾರೂ ಹಣ ನೀಡಬಾರದು ಎಂದರು. ನಂತರ ಸರತಿ ಸಾಲಿನಲ್ಲಿ ನಿಂತಿದ್ದ ನೂರಕ್ಕೂ ಹೆಚ್ಚು ಜನರಿಗೆ ಕೈ ಬರಹದಲ್ಲೇ ಟೋಕನ್‌ ನೀಡಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.