ಸಹಜ ಸ್ಥಿತಿಯತ್ತ ಜನ ಜೀವನ, ವಹಿವಾಟು ಆರಂಭ
Team Udayavani, May 5, 2020, 6:17 PM IST
ಸಾಂದರ್ಭಿಕ ಚಿತ್ರ
ರಾಮನಗರ: ಸರ್ಕಾರ ಗ್ರೀನ್ ಜೋನ್ ರಾಮನಗರದಲ್ಲಿ ಲಾಕ್ಡೌನ್ ಸಡಿಲಗೊಳಿಸಿದ್ದು, ಆರ್ಥಿಕ ಚಟುವಟಿಕೆಗೆ ಅವಕಾಶ ಸಿಕ್ಕಿದೆ. ಈ ಹಿನ್ನೆಲೆಯಲಿ ಜಿಲ್ಲೆಯಲ್ಲಿ ಅಂಗಡಿ,
ಮುಂಗಟ್ಟು ತೆರೆದಿದ್ದು ವ್ಯಾಪಾರ ವಹಿವಾಟು ಆರಂಭವಾಗಿದ್ದು, ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.
ಕಳೆದ 40 ದಿನಗಳಿಂದ ಸ್ಥಬ್ದವಾಗಿದ್ದ ರಾಮ ನಗರ ಜಿಲ್ಲೆಯಲ್ಲಿ ವ್ಯಾಪಾರಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ. ಬಟ್ಟೆ, ಜ್ಯೂವೆಲ್ಲರಿ, ಎಲೆಕ್ಟ್ರಾನಿಕ್ಸ್, ಸ್ಟೇಷನರಿ ಸೇರಿದಂತೆ ಎಲ್ಲ ಬಗೆ ಅಂಗಡಿಗಳಿಗೂ ವ್ಯಾಪಾರಕ್ಕೆ ಅವಕಾಶ ಸಿಕ್ಕಿದೆ. ಹೋಟೆಲ್ಗಳು, ಟೀ ಅಂಗಡಿಗಳು, ಸಲೂನ್, ಬ್ಯೂಟಿ ಪಾರ್ಲರ್, ಜ್ಯೂಸ್ ಅಂಗಡಿ, ಸಮುದಾಯ ಭವನ, ಕಲ್ಯಾಣ ಮಂದಿರ, ಸಿನೆಮಾ ಮಂದಿರ ತೆರೆಯಲು ಅವಕಾಶ ನಿರಾಕರಿಸಲಾಗಿದೆ. ಸರ್ಕಾರಿ ಕಚೇರಿಗಳು, ಬ್ಯಾಂಕ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಸರ್ಕಾರಿ ರೇಷ್ಮೆಗೂಡು, ಮಾವು ಮಂಡಿ ಹಾಗೂ ಎಪಿಎಂಸಿ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಎಂದಿನಂತೆ ನಡೆಯುತ್ತಿದೆ.
ಬೆಳಿಗ್ಗೆ 7ರಿಂದ ಸಂಜೆ 7ರವೆಗೆ ಮಾತ್ರ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾಲ್ ಗಳು, ಚಲನಚಿತ್ರ ಮಂದಿರ ಮತ್ತು ಬೃಹತ್ ಅಂಗಡಿ ಮಳಿಗೆ ಹೊರತುಪಡಿಸಿ ನೆರೆಹೊರೆ
ಅಂಗಡಿಗಳು, ಒಂಟಿ ಅಂಗಡಿಗಳು ಮತ್ತು ವಸತಿ ಸಮುಚ್ಚಯದಲ್ಲಿರುವ ಅಂಗಡಿಗಳು ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಮಾತ್ರ ತೆರೆಯಲು ಅವಕಾಶವಿದೆ. ಬಹುತೇಕ ಅಂಗಡಿಗಳಲ್ಲಿ ಮಾಲಿಕರು, ಸಿಬ್ಬಂದಿ, ಗ್ರಾಹಕರು ಮಾಸ್ಕ್ ಧರಿಸಿದ್ದು ಕಂಡು ಬಂತು. ಆದರೆ ಬಹುತೇಕ ಅಂಗಡಿಗಳಲ್ಲಿ ಸ್ಯಾನಿಟೈಸ್ರ್ ಬಳಕೆಯಾಗಲಿಲ್ಲ.
ಬಸ್ನಲ್ಲಿ 30 ಮಂದಿಗೆ ಮಾತ್ರ ಅವಕಾಶ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ದ್ವಿಚಕ್ರ ವಾಹನಗಳ ಭರಾಟೆ ಹೆಚ್ಚಾಗಿತ್ತು. ಆಟೋ ರಿಕ್ಷಾಗಳು ರಸ್ತೆಗಿಳಿದಿದ್ದವು. ಬೆಂಗಳೂರು
ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಷ್ಟಾಗಿ ಕಾಣಲಿಲ್ಲ. ಜಿಲ್ಲೆ ಯಲ್ಲಿ ಕೆಎಸ್ಆರ್ ಟಿಸಿ ಬಸ್ಗಳು 30 ಬಸ್ಗಳು ಮಾತ್ರ ಸಂಚಾರ ಮಾಡಿದವು. ಖಾಸಗಿ ಬಸ್ಗಳು,
ಟ್ಯಾಕ್ಸಿ ಓಡಾಟ ಹೆಚ್ಚಾಗಿ ಕಾಣಲಿಲ್ಲ.
ಬಳೆ, ಕಾಸ್ಮೆಟಿಕ್ಸ್ ವ್ಯಾಪಾರಕ್ಕೆ ಜಿಲ್ಲಾಧಿಕಾರಿ ಅನುಮತಿ
ಜಿಲ್ಲಾಡಳಿತ ವೈನ್ ಸ್ಟೋರ್ಗಳು, ಜ್ಯೂವೆಲ್ಲರಿ ಅಂಗಡಿ ತೆರೆಯಲು ಅವಕಾಶ ನೀಡಿತ್ತಾದರೂ, ಬಳೆ ಅಂಗಡಿ, ಕಾಸ್ಮೆಟಿಕ್ಸ್ ವ್ಯಾಪಾರಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದ
ರಿಂದ ಈ ವ್ಯಾಪಾರಸ್ಥರು ಜಿಲ್ಲಾಧಿಕಾರಿ ಮತ್ತು ಎಸ್ಪಿ ಮೊರೆ ಹೋಗಿದ್ದರು. ನಂತರ ಈ ಅಧಿಕಾರಿಗಳ ಅನುಮತಿಯ ಮೇರೆಗೆ ಬಳೆ ಅಂಗಡಿಗಳು ವ್ಯಾಪಾರ ಆರಂಭಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ