ಜಾಹೀರಾತಿಗೆ ಸ್ಥಳ ನಿಗದಿ; ಅನಧಿಕೃತಕ್ಕೆ ದಂಡ


Team Udayavani, Jan 16, 2022, 12:14 PM IST

ಜಾಹೀರಾತಿಗೆ ಸ್ಥಳ ನಿಗದಿ; ಅನಧಿಕೃತಕ್ಕೆ ದಂಡ

ಕನಕಪುರ: ನಗರದಲ್ಲಿ ಇನ್ನು ಮುಂದೆ ಸ್ಥಳೀಯ ಸಂಸ್ಥೆ ನಗರ ಸಭೆಯಿಂದ ಅನುಮತಿ ಪಡೆಯದೆ ಅನಧಿಕೃತ ಜಾಹೀರಾತು ಫ‌ಲಕ ಹಾಕುವಂತಿಲ್ಲ ಎಂದು ಪರಿಸರ ಇಲಾಖೆ ಪಾರ್ವತಿ ತಿಳಿಸಿದರು.

ಅನಧಿಕೃತ ಜಾಹೀರಾತು ನಾಮ ಫ‌ಲಕಕ್ಕೆ ನಿರ್ಬಂಧ ಹೇರುವುದು ಮತ್ತು ನಗರಸಭೆಗೆ ಆದಾಯಹೆಚ್ಚಿಸಿಕೊಳ್ಳುವ ಬಗ್ಗೆ ಸಂಘ ಸಂಸ್ಥೆಗಳಿಂದ ಸಲಹೆ ಸೂಚನೆ ಪಡೆಯಲು ನಗರ ಸಭೆ ಸಭಾಂಗಣದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಸಾರ್ವಜನಿಕವಾಗಿ ಜಾಹೀರಾತು ಫ‌ಲಕ ಹಾಕಲು ನಗರ ಸ್ಥಳೀಯ ಸಂಸ್ಥೆ, ಗ್ರಾಮಗಳ ಸ್ಥಳೀಯ ಸಂಸ್ಥೆ ಪರವಾನಗಿ ಪಡೆದಿರಬೇಕು. ಅನಧಿಕೃತವಾಗಿ ಜಾಹೀರಾತು ಪ್ರದರ್ಶನ ಮಾಡುವಂತಿಲ್ಲ ಎಂದು 1981ರಲ್ಲಿ ಈ ಕಾಯ್ದೆ ಜಾರಿಯಾಗಿದೆ.

ಆದರೆ ನಗರದಲ್ಲಿ ಎಲ್ಲೆಂದರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಜಾಹೀರಾತು ಪ್ರದರ್ಶನ ಮಾಡಲಾಗುತ್ತಿದೆ. ಇದರಿಂದ ನಗರದ ಅಂದವೂಹಾಳಾಗಲಿದೆ. ಹಾಗಾಗಿ ನಿಗದಿತ ಸ್ಥಳಗಳಲ್ಲಿ ಮಾತ್ರಜಾಹಿರಾತು ಪ್ರದರ್ಶನಕ್ಕೆ ಅವಕಾಶ ನೀಡಬೇಕು. ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಸ್ಥಳೀಯ ಸಂಸ್ಥೆ ಕ್ರಮ ಕೈಗೊಳ್ಳಬೇಕು ಎಂಬುದು ಸರ್ಕಾರದ ಆದೇಶವಾಗಿದೆ. ಹಾಗಾಗಿ ಈ ಸಭೆ ಕರೆಯಲಾಗಿದೆ ಎಂದು ಸ್ಪಷ್ಟ ಪಡಿಸಿದರು.

ಜಾಹೀರಾತಿಗೆ ಸ್ಥಳ ನಿಗದಿ: ಈಗಾಗಲೇ ನಗರದಲ್ಲಿ ಸಾರ್ವಜನಿಕ ಜಾಹೀರಾತು ಪ್ರಕಟಿಸಲು ಐದು ಸ್ಥಳ ಗಳನ್ನು ಗುರುತಿಸಲಾಗಿದೆ. ಚನ್ನಬಸಪ್ಪ ವೃತ್ತ, ಕೆಎನ್‌ಎಸ್‌ ವೃತ್ತ, ಮಳಗಾಳು ವೃತ್ತ, ಗ್ರಾಮಾಂತರ ಠಾಣೆ, ಹಳೆ ಬಿಇಒ ಕಚೇರಿ ಈ ಐದು ಸ್ಥಳಗಳನ್ನು ಗುರುತಿಸಲಾಗಿದೆ. ಹೆಚ್ಚು ಜಾಹೀರಾತು ಬಂದರೆ ನಗರಸಭೆ ಅಧ್ಯಕ್ಷರು ಮತ್ತು ಪೌರಾಯುಕ್ತರು ಸೂಚಿಸುವ ಸ್ಥಳಗಳಲ್ಲಿ ಜಾಹೀರಾತು ಪ್ರಕಟಕ್ಕೆ ಅವಕಾಶ ನೀಡಲಾಗುವುದು. ಒಂದು ಜಾಹೀರಾತು ಫ‌ಲಕಕ್ಕೆ ಮೂರು ದಿನ ನಿಗದಿ ಪಡಿಸಲಾಗಿದೆ. ಅದರ ದರ ಎಷ್ಟು ಎಂಬುದು ಸಭೆಯಲ್ಲಿ ನಿರ್ಣಯವಾಗಿದೆ.

ನಿಯಮ ಉಲ್ಲಂಘಿಸುವಂತಿಲ್ಲ: ನಗರದಲ್ಲಿ ಸರ್ಕಾರದ ಯೋಜನೆಗಳ ಜಾಹೀರಾತುಗಳಿಗೆ ಫ್ಲೆಕ್ಸ್‌,ಬೋರ್ಡ್‌ ಹಾಕಲಾಗಿದೆ ಅಲ್ಲಿ ಖಾಸಗಿ ಜಾಹೀರಾತು ಫ‌ಲಕ ಹಾಕುವಂತಿಲ್ಲ. ಈ ನಿಯಮ ಉಲ್ಲಂ ಘಿಸುವಂತಿಲ್ಲ. ಖಾಸಗಿ ಜಾಹೀರಾತಿಗೆ ನಗರಸಭೆಯಲ್ಲಿ ಮೂರು ದಿನ ಮುಂಚಿತವಾಗಿಅನುಮತಿ ಪಡೆಯಬೇಕು. ಕಟ್ಟಡಗಳ ಮೇಲೆವೈಯಕ್ತಿಕ ಜಾಹೀರಾತು ಫ‌ಲಕ ಹಾಕಿದರೆ ನಗರಸಭೆಗೆತೆರಿಗೆ ಪಾವತಿ ಮಾಡಬೇಕು. ಅಲ್ಲಿ ಯಾವುದೇ ನಿರ್ಬಂಧಗಳಿಲ್ಲ. ನಗರದಲ್ಲಿರುವ ವಿದ್ಯುತ್‌ ಕಂಬಗಳಿಗೆ ಸ್ಯಾಂಡ್ವಿಚ್‌ ಮೀಡಿಯಾ ಫ್ಲೆಕ್ಸ್‌ಗಳನ್ನು ಒಂದು ವರ್ಷದ ಅವಧಿಗೆ ಅನುಮತಿ ಪಡೆದು ಜಾಹೀರಾತು ಪ್ರದರ್ಶನ ಮಾಡಬಹುದು.

ಪ್ಲಾಸ್ಟಿಕ್‌ ಬಳಕೆ ಜಾಹೀರಾತು ನಿಷೇಧ: ಪತ್ರಕರ್ತರ ಸಂಘದ ಸದಸ್ಯ ಜಗದೀಶ್‌ ಮಾತನಾಡಿ, ಈಗಾಗಲೇ ಪ್ಲಾಸ್ಟಿಕ್‌ ನಿಷೇಧ ಜಾರಿಯಲ್ಲಿದೆ. ನಗರ ಮತ್ತು ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಬಳಕೆಯ ಜಾಹೀರಾತು ಪ್ರದರ್ಶನ ಮಾಡುವಂತಿಲ್ಲ ಎಂದು ಕೋರ್ಟ್‌ ಸೂಚಿಸಿದೆ. ಎಲ್ಲ ಜಾಹಿರಾತು ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳಲ್ಲಿ ಪ್ಲಾಸ್ಟಿಕ್‌ ಕೋಟಿಂಗ್‌ ಇದೆ. ಹಾಗಾಗಿಪ್ಲಾಸ್ಟಿಕ್‌ ಬಳಕೆ ಇರುವ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳ ಪ್ರದರ್ಶನಕ್ಕೆ ನಗರ ಸಭೆಯಿಂದ ಅನುಮತಿ ಕೋಡಬಾರದು. ಪರಿಸರ ಸ್ನೇಹಿ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳಿಗೆ ಮಾತ್ರ ಅನುಮತಿ ಕೊಡಬೇಕು ಎಂದು ಸಲಹೆ ನೀಡಿದರು.

ಬ್ಯಾನರ್‌ಗೆ ನಿಷೇಧ ಹೇರಿ: ಬಿಜೆಪಿ ಕಾರ್ಯಕರ್ತ ಭರತ್‌ಕುಮಾರ್‌ ಮಾತನಾಡಿ, ನಗರದ ಚನ್ನಬಸಪ್ಪದಲ್ಲಿರುವ ಅಶೋಕ ಸ್ತಂಭದ ಸುತ್ತಲೂ ಶ್ರದ್ಧಾಂಜಲಿ ಬ್ಯಾನರ್‌ಗಳನ್ನು ಹಾಕಿ ಅಶೋಕ ಸ್ತಂಭಕ್ಕೆ ಅವಮಾನ ಮಾಡುತ್ತಿದ್ದಾರೆ. ಮೊದಲು ಚನ್ನಬಸಪ್ಪ ವೃತ್ತದ ಲ್ಲಿರುವ ಅಶೋಕ ಸ್ತಂಭಕ್ಕೆ ಯಾವುದೇ ಜಾಹೀರಾತು ಬ್ಯಾನರ್‌ಗಳನ್ನು ಹಾಕದಂತೆ ನಿಷೇಧ ಹೇರಬೇಕು ಎಂದರು.

ಈ ಸಭೆಯಲ್ಲಿ ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಭಾಸ್ಕರ್‌, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಶಿವಲಿಂಗಯ್ಯ, ನಗರ ಸಭೆ ಅಧ್ಯಕ್ಷ ವೆಂಕಟೇಶ್‌.ಸದಸ್ಯರಾಮದಾಸು,ಆರೋಗ್ಯ ಇಲಾಖೆಕುಸುಮ,ರಾಘವೇಂದ್ರ ಸೇರಿದಂತೆ ಹಲವು ಅಧಿಕಾರಿಗಳು ವಿವಿಧ ಸಂಘ ಸಂಸ್ಥೆ ಮುಖಂಡರು ಉಪಸ್ಥಿತರಿದ್ದರು.

ಪ್ಲಾಸ್ಟಿಕ್‌ ಬ್ಯಾನರ್‌ ಮುದ್ರಿಸುವಂತಿಲ್ಲ :  ಮುದ್ರಣ ಮಳಿಗೆ ಮಾಲಿಕರ ಸಭೆ ಕರೆದು ಇನ್ನು ಮುಂದೆ ಪ್ಲಾಸ್ಟಿಕ್‌ ಇರುವ ಬ್ಯಾನರ್‌ ಮುದ್ರಣ ಮಾಡುವಂತಿಲ್ಲ. ಪರಿಸರ ಮಾಲಿನ್ಯ ತಡೆಯಲು ಪ್ಲಾಸ್ಟಿಕ್‌ ರಹಿತವಾದ ಬ್ಯಾನರ್‌ ಮುದ್ರಣ ಮಾಡಬೇಕು ಎಂದು ಸೂಚನೆ ನೀಡಲಾಗುವುದು. ಫೈನಲ್‌ ನೋಟಿಫಿಕೇಶನ್‌ ಆದ ನಂತರ ಈ ನಿಯಮ ಅನ್ವಯವಾಗಲಿದೆ ಎಂದು ನಗರಸಭೆ ಪೌರಾಯುಕ್ತ ಶುಭ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.