ಅ.1ರಿಂದ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ


Team Udayavani, Sep 29, 2019, 3:17 PM IST

rn-tdy-1

ರಾಮನಗರ: ಪ್ಲಾಸ್ಟಿಕ್‌ ಮುಕ್ತ ಗ್ರಾಮ ಪಂಚಾಯ್ತಿ ಪರಿವರ್ತನೆಗಾಗಿ ಅ.1ರಿಂದ ಪ್ಲಾಸ್ಟಿಕ್‌ ಮುಕ್ತ ಗ್ರಾಮ ಅಭಿಯಾನ ನಡೆಯಲಿದೆ ಎಂದು ತಾಪಂ ಅಧ್ಯಕ್ಷ ಗಾಣಕಲ್‌ ನಟರಾಜ್‌ ತಿಳಿಸಿದರು.

ನಗರದ ಮಿನಿ ವಿಧಾನಸೌಧದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಪಿಡಿಒಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಅಕ್ಟೋಬರ್‌ ತಿಂಗಳಲ್ಲಿ ಪಿಡಿಒಗಳು ವ್ಯಾಪಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಮೀಣ ಭಾಗದ ಜನರಲ್ಲಿ ಪ್ಲಾಸ್ಟಿಕ್‌ನಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು. ಪ್ಲಾಸ್ಟಿಕ್‌ ಮುಕ್ತ ನಗರಗಳಿಗಾಗಿ ನಿರಂತರ ಅಭಿಯಾನ ನಡೆಯುತ್ತಿದೆ. ಗ್ರಾಮೀಣ ಮಟ್ಟದ ಜನರಲ್ಲೂ ಪ್ಲಾಸ್ಟಿಕ್‌ ಸಮಸ್ಯೆಗಳ ಬಗ್ಗೆ ಅರಿವು ಉಂಟಾಗಬೇಕಾಗಿದೆ. ಪ್ಲಾಸ್ಟಿಕ್‌ ಮುಕ್ತ ಗ್ರಾಮಗಳು ಇಂದಿನ ಅವಶ್ಯವಿದೆ ಎಂದರು.

ಪ್ಲಾಸ್ಟಿಕ್‌ ವಶಕ್ಕೆ ತೆಗೆದುಕೊಳ್ಳಿ: ಪಿಡಿಒಗಳು ತಮ್ಮ ವ್ಯಾಪ್ತಿಯ ವ್ಯಾಪಾರಿ ಮಳಿಗೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್‌ ಕವರ್‌ ಇತ್ಯಾದಿ ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳ ಬಳಕೆ, ಮಾರಾಟ ಬೇಡ ಎಂದು ಎಚ್ಚರಿಸಿ, ಆದಾಗ್ಯೂ ಮಾರಾಟ, ಬಳಕೆ ಮುಂದುವರಿದರೆ ಅದನ್ನು ವಶಪಡಿಸಿಕೊಳ್ಳಬೇಕು. ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್‌ ನಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳನ್ನು ವಿವರಿಸಿ, ಪರ್ಯಾಯ ಬಳಕೆಯ ಬಗ್ಗೆ ತಿಳವಳಿಕೆ ಮೂಡಿಸಬೇಕು ಎಂದು ಹೇಳಿದರು.

ಅಂತರ್ಜಲ ವೃದ್ಧಿಗೆ ಮಳೆ ಕೊಯ್ಲು ಅನಿವಾರ್ಯ: ಅಂತರ್ಜಲ ವೃದ್ಧಿಗಾಗಿ ಮಳೆ ಕೊಯ್ಲು ಪದ್ಧತಿ ಅನಿವಾರ್ಯವಾಗಿದೆ. ಮಳೆ ಕೊಯ್ಲು ಪದ್ಧತಿಯನ್ನು ಪ್ರತಿಯೊಂದು ಕಟ್ಟಡದಲ್ಲೂ ಅಳವಡಿಕೆಯಾಗಬೇಕು. ಸಾರ್ವಜನಿಕರಿಗೆ ಮಾದರಿಯಾಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕನಿಷ್ಠ 2 ಸರ್ಕಾರಿ ಕಟ್ಟಡಗಳಲ್ಲಿ ಮಳೆ ಕೊಯ್ಲು ಪದ್ಧತಿಯನ್ನು ನವೆಂಬರ್‌ ಮಾಸದ ಅಂತ್ಯದೊಳಗೆ ಅಳವಡಿಸಬೇಕು. ಹೀಗೆ ಮಳೆಕೊಯ್ಲು ಪದ್ಧತಿಯನ್ನು ಅಳವಡಿಸಿಕೊಂಡು ಕನಿಷ್ಠ 50 ಸಾವಿರ ಲೀಟರ್‌ ನೀರನ್ನು ಶೇಖರಿಸಿ, ಗಿಡ, ಮರಗಳಿಗೆ ಹಾಯಿಸುವುದು, ಸ್ವಚ್ಛತೆಗೆ ಬಳಸಿ, ಹೆಚ್ಚುವರಿ ನೀರನ್ನು ಕೊಳವೆ ಬಾವಿಗಳ ರೀಚಾರ್ಜ್‌ಗೆ ಬಳಸಿ ಎಂದು ಸಲಹೆ ನೀಡಿದರು.

ತೆರಿಗೆ ಸಂಗ್ರಹಕ್ಕೆ ಸೂಚನೆ: ಪಿಡಿಒಗಳು ತಮ್ಮ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡಬೇಕು. ತಾಲೂಕು ಪಂಚಾಯ್ತಿ ವ್ಯಾಪ್ತಿಯಲ್ಲಿ 12 ಕೋಟಿ ರೂ. ತೆರಿಗೆ ಸಂಗ್ರಹ ಬಾಕಿ ಇತ್ತು. ಸೆಪ್ಟಂಬರ್‌ನಲ್ಲಿ ಆಂದೋಲನ ಹಮ್ಮಿಕೊಂಡು ಸುಮಾರು 3 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ ಎಂದರು.

ಇ-ಖಾತೆ ಶೇ.97ರಷ್ಟು ಮುಕ್ತಾಯ: ಪಂಚಾಯ್ತಿಗಳಲ್ಲಿ ಇ-ಖಾತೆಗಳಿಗೆ ಸಲ್ಲಿಕೆಯಾಗಿದ್ದ ಅರ್ಜಿಗಳ ಪೈಕಿ ಶೇ.97ರಷ್ಟು ಕಾರ್ಯ ಮುಗಿದಿದೆ. ಉಳಿದವುಗಳನ್ನು ಸಹ ಶೀಘ್ರದಲ್ಲಿಯೇ ಮುಗಿಸಿಕೊಡುವುದಾಗಿ ತಿಳಿಸಿದರು. ಇ-ಖಾತಾ ಅರ್ಜಿಗಳ ವಿಲೇವಾರಿಗೆ ಶ್ರಮಿಸಿದ ಪಿಡಿಒಗಳಿಗೆ ಅಧ್ಯಕ್ಷರು ಶ್ಲಾಘಿಸಿದರು. ಸಭೆಯಲ್ಲಿ ಇಒ ಶಿವಕುಮಾರ್‌ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.