ಅಕ್ರಮ ಮರಳು ಸಾಗಣೆ ತಡೆಗೆ ಪೊಲೀಸರು ವಿಫಲ

ನಿರ್ಬಂದ ಹಾಕಿದರೂ ಯಾವುದೇ ಪ್ರಯೋಜನವಾಗಿಲ್ಲ ಅಕ್ಕೂರು ಠಾಣೆ ವ್ಯಾಪ್ತಿಯಲ್ಲಿ ನಿರಂತರ ಮರಳು ಸಾಗಣೆ

Team Udayavani, Apr 24, 2019, 1:55 PM IST

ramanagr tdy 2

ಚನ್ನಪಟ್ಟಣ: ತಾಲೂಕಿನ ಅಕ್ಕೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಣೆ ರಾಜರೋಷವಾಗಿ ನಡೆಯುತ್ತಿದ್ದರೂ ತಾಲೂಕು ಆಡಳಿತ ಹಾಗೂ ಅಕ್ಕೂರು ಪೊಲೀಸರು ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ.

ಅಕ್ಕೂರು ಪೊಲೀಸ್‌ ಠಾಣೆ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ನಿರಂತರವಾಗಿ ಅಕ್ರಮ ಮರಳು ಸಾಗಣೆ ಎಗ್ಗಿಲ್ಲದೆ ಸಾಗಿದೆ. ಎತ್ತಿನ ಗಾಡಿ, ಟ್ರ್ಯಾಕ್ಟರ್‌, ಲಾರಿ ಹಾಗೂ ಟಿಪ್ಪರ್‌ಗಳಲ್ಲಿ ಅಕ್ರಮ ಮರಳು ಸಾಗಣೆ ಮಾಡಲು ಸಮಯ ನಿಗದಿ ಮಾಡಿಕೊಂಡಿರುವ ಮರಳು ದಂಧೆಕೋರರು, ಕಿಂಚಿತ್ತೂ ಭಯವಿಲ್ಲದೆ ನೀರು ಕುಡಿದಷ್ಟೆ ಸುಲಭವಾಗಿ ಅಕ್ರಮ ಮರಳು ಸಾಗಣೆಯಲ್ಲಿ ನಿರತರರಾಗಿದ್ದಾರೆ.

ಸಾಗಣೆ ಮಾಡಲು ಸಮಯ ನಿಗದಿ: ರಾತ್ರಿ 10ರಿಂದ ರಾತ್ರಿ 12ರವರಗೆ ಲಾರಿ ಹಾಗೂ ಟಿಪ್ಪರ್‌ಗಳಲ್ಲಿ ಮರಳು ಸಾಗಣೆಕೆ ನಡೆಸಿದರೆ, ಮುಂಜಾನೆ 1ರಿಂದ ಮುಂಜಾನೆ 5ರವರೆಗೆ ಟ್ರ್ಯಾಕ್ಟರ್‌ಗಳಲ್ಲಿ ಮರಳು ಸಾಗಣೆ ನಡೆಯತ್ತದೆ. ಮುಂಜಾನೆ 5ರಿಂದ ಮುಂಜಾನೆ 9ರವರೆಗೆ ಎತ್ತಿನ ಗಾಡಿಗಳಲ್ಲಿ ಮರಳು ಸಾಗಣೆ ಮುಂದುವರಿಯುತ್ತದೆ.

ಪೊಲೀಸರಿಗೆ ದಂಧೆಕೋರರು ಬೆದರಿಕೆ: ಅಕ್ಕೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ಶಿಂಷಾನದಿ ಹಾಗೂ ಕಣ್ವಾನದಿ ಸರಸಹದ್ದುಗಳಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಣೆಯನ್ನು ನಿಯಂತ್ರಣ ಮಾಡಲು ಪೊಲೀಸರು ಮರಳು ಜಾಡುಗಳನ್ನು ಬಗೆದು ಟ್ರ್ಯಾಕ್ಟರ್‌ಗಳು ಹಾಗೂ ಎತ್ತಿನ ಗಾಡಿಗಳು ತೆರಳದಂತೆ ನಿರ್ಬಂದ ಹಾಕಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲ ತಿಂಗಳಿಂದ ಅಕ್ಕೂರು ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಣೆ ತಡೆಯುವವರು ಯಾರು ಇಲ್ಲದಂತಾಗಿದೆ. ಠಾಣೆ ವ್ಯಾಪ್ತಿಯ ಇಗ್ಗಲೂರು ಶಿಂಷಾನದಿ ಸರಹದ್ದಿನಲ್ಲಿ ಟ್ರ್ಯಾಕ್ಟರ್‌ ಹಾಗೂ ಟಿಪ್ಪರ್‌ನಲ್ಲಿ ನಡೆಯುತ್ತಿದ್ದ ಮರಳು ಸಾಗಣೆ ತಡೆಯಲು ಹೋದ ಪೊಲೀಸ್‌ ಪೇದೆಯೊರ್ವರಿಗೆ ಮರಳು ದಂಧೆಕೋರರು ಬೆದರಿಕೆ ಹಾಕಿದ ಘಟನೆ ಕೂಡ ನಡೆದಿದೆ.

ಮರಳು ಸಾಗಣೆ ಅಪಘಾತಕ್ಕೆ ಕಾರಣ: ಮುಂಜಾನೆ ಈ ಭಾಗದಲ್ಲಿ ಕೆಲವು ಅಪಘಾತಗಳು ಸಂಭವಿಸಲು ಟ್ರ್ಯಾಕ್ಟರ್‌ನಲ್ಲಿ ಮರಳು ಸಾಗಣೆಯೇ ಕಾರಣ ಎಂದು ಪೊಲೀಸರ ಅಭಿಪ್ರಾಯವಾಗಿದೆ. ಮುಂಜಾನೆ ಸಮಯದಲ್ಲಿ ಅಕ್ರಮ ಮರಳು ಸಾಗಣೆ ನಡೆಸುವವರು ಪೊಲೀಸರ ಭಯದಿಂದ ಇಷ್ಟ ಬಂದ ರೀತಿಯಲ್ಲಿ ಮರಳು ಸಾಗಣೆ ನಡೆಸುವುದೇ ಅಪಘಾತಗಳು ಸಂಭವಿಸಲು ಕಾರಣವಾಗಿದೆ.

ಅಪ್ರಾಪ್ತರು ಹಾಗೂ ಯಾವುದೇ ರೀತಿಯ ಪರವಾನಗಿ ಹೊಂದದವರು ಟ್ರ್ಯಾಕ್ಟರ್‌ ಚಾಲನೆ ಮಾಡುವುದರಿಂದ ಇಂತಹ ಅವಘಡಗಳಿಗೆ ಕಾರಣವಾಗಿದ್ದು, ಭಯದ ಚಾಲನೆಯಲ್ಲಿ ಅತಿವೇಗವಾಗಿ ಹೋಗುವುದರಿಂದ ಇಂದೆ ಮುಂದೆ ಚಲಿಸುವ ವಾಹನಗಳ ಗಮನವೇ ಇಲ್ಲದೆ ಅಪಘಾತಗಳು ಸಂಭವಿಸುತ್ತಿವೆ. ಅಕ್ರಮ ಮರಳು ಸಾಗಣೆ ಅಬ್ಬರಿಸಲು ತಾಲೂಕು ಆಡಳಿತದ ಕೆಲ ಗ್ರಾಮಲೆಕ್ಕಿಗರ ಸಹಕಾರ ಒಂದಡೆಯಾದರೆ, ಪೊಲೀಸರೂ ಕೂಡ ಸಹಕಾರ ನೀಡಿರುವುದರಿಂದ ಅಕ್ರಮ ಮರಳು ಸಾಗಣೆಗೆ ಹಾಸಿಗೆ ಹಾಸಿಕೊಟ್ಟಂತಾ ಗಿದೆ ಎನ್ನುತ್ತಾರೆ ಗ್ರಾಮೀಣರು. ಇನ್ನಾದರೂ ಎಚ್ಚತ್ತು ಮರಳು ದಂಧೆಯನ್ನು ನಿಯಂತ್ರಿಸಬೇಕಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.