ಅಂತರ ಮರೆತ ರಾಜಕೀಯ ನಾಯಕರು!


Team Udayavani, Jun 5, 2020, 7:37 AM IST

samajikka

ರಾಮನಗರ: ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ನಾಗರಿಕರಿಗೆ ತಿಳಿ ಹೇಳುವ ರಾಜಕೀಯ ನಾಯಕರು ತಮ್ಮ ಭೇಟಿ ವೇಳೆ, ಅದನ್ನು ಮರೆಯುತ್ತಿದ್ದಾರೆ. ಜನಜಂಗುಳಿಗೆ ಅವಕಾಶ ಮಾಡಿಕೊಟ್ಟು ತಮ್ಮನ್ನು ತಾವೇ ಅಪಾಯಕ್ಕೆ  ಒಡ್ಡಿಕೊಳ್ಳುತ್ತಿದ್ದಾರೆ. ಕೋವಿಡ್‌-19 ಸೋಂಕಿನ ಪ್ರಕರಣ ಗಳು ಹೆಚ್ಚಾಗುತ್ತಲೇ ಇದೆ. ರಾಮ ನಗರ ಜಿಲ್ಲೆಯಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿವೆ.

ನೆರೆ ಜಿಲ್ಲೆಗಳಾದ ಮಂಡ್ಯ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಸೋಂಕಿನ  ಪ್ರಕರ ಣಗಳು ಏರುತ್ತಲೇ ಇದೆ. ಇದೆಲ್ಲ ರಾಮನಗರ ಜಿಲ್ಲೆಯ ನಾಗರಿಕರಿಗೆ ಹಾಗೂ ರಾಜಕೀಯ ನಾಯಕರಿಗೆ ಪಾಠವಾಗಬೇಕಿತ್ತು. ಆದರೆ ದುರಾದೃಷ್ಟವಶಾತ್‌ ಯಾರು ಪಾಠ ಕಲಿಯು ತ್ತಿಲ್ಲ. ಮಾಸ್ಕ್ ಧರಿಸದಿದ್ದರೆ ಅಥವಾ ಅಂತರ  ಕಾಪಾಡದಿದ್ದರೆ ಕಾನೂನು ರೀತಿಯ ಶಿಕ್ಷೆಗೆ ಅವಕಾಶವಿದೆ. ಆದರೆ ಈ ವಿಚಾರದಲ್ಲಿ ಬಹುತ ಕರು ಕ್ಯಾರೆ ಅನ್ನುತ್ತಿಲ್ಲ. 42 ದಿನಗಳ ಸಂಪೂರ್ಣ ಲಾಕ್‌ ಡೌನ್‌ ಕಲಿಸಿದ ಪಾಠ ವ್ಯರ್ಥವಾಗಿದೆ.

ರಾಜಕೀಯ ನಾಯಕರಲ್ಲೇ ನಿರಾಸಕ್ತಿ: ಜಿಲ್ಲೆಗೆ ಭೇಟಿ ಕೊಡುವ ರಾಜಕೀಯ ನಾಯಕರು ಸ್ವತಃ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ನಿರಾಸಕ್ತಿ ತೋರಿಸುತ್ತಿ ದ್ದಾರೆ. ಸೋಮವಾರ ಜಿಲ್ಲಾ ಕೇಂದ್ರಕ್ಕೆ ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ  ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಕಚೇರಿಗೆ ಭೇಟಿ ನೀಡಿದ್ದಾಗ, ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸಾಮಾಜಿಕ ಅಂತರ ಮರೆತು ಪೈಪೋಟಿಯ ನಡೆಸಿ ಸಚಿವರನ್ನ ಕಾಣಲು ಮುಂದಾಗಿದ್ದು ಕಂಡು  ಬಂತು.

ಪೊಲೀಸರು ಜನಜಂಗುಳಿಗೆ ಅವಕಾಶವಾಗದಂತೆ ಕೆಲಕಾಲ ನಿಯಂತ್ರಿಸಿದರಾ ದರು ನಂತರ ಕೈಚೆಲ್ಲಿದರು. ಕಳೆದ ವಾರ ಸಚಿವ ಕೆ.ಎಸ್‌. ಈಶ್ವರಪ್ಪ ಮತ್ತು ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾ ಯಣ ಭೇಟಿ ವೇಳೆಯಲ್ಲೂ ಇದೇ ಚಿತ್ರಣ ಕಂಡು ಬಂತು. ಮಂಗಳವಾರ ಚನ್ನಪಟ್ಟಣಕ್ಕೆ ಶಾಸಕ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾ ರಸ್ವಾಮಿ, ತಮ್ಮ ಪುತ್ರ ನಿಖೀಲ್‌ ಕುಮಾರಸ್ವಾಮಿ ಅವರೊಡನೆ ಬಂದಾಗಲೂ ನೂರಾರು ಸಂಖ್ಯೆಯಲ್ಲಿ ಜೆಡಿಎಸ್‌ ಕಾರ್ಯಕರ್ತರು,  ನಾಗರಿಕರು ಮತ್ತು ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿ  ಕೊಳ್ಳಲು ಪೈಪೋಟಿ ನಡೆಸಿದರು. ಈ ವೇಳೆ ನೂಕು ನುಗ್ಗಲು ಉಂಟಾಯಿತು.

ಕುಮಾರಸ್ವಾಮಿ ಅವರಿಗೆ ಹೃದಯದ ಕಾಯಿಲೆಯಿದೆ ಎಂಬುದನ್ನು ಲೆಕ್ಕಿಸದೆ ಅವರೊಡನೆ ಮಾತನಾಡಿ,  ಕೈಕುಲುಕಲು ಮುಂದಾಗಿದ್ದು ಕಂಡು ಬಂತು. ಸ್ವತಃ ಎಚ್‌.ಡಿ. ಕುಮಾರಸ್ವಾಮಿಯವರೇ ಮಾಸ್ಕ್ ಧರಿಸದೆ ಕಾನೂನು ಉಲ್ಲಂ ಸಿದರು. ಜನಜಂಗುಳಿ ನಿಯಂತ್ರಿಸಬೇಕಾದ ಚನ್ನಪಟ್ಟಣದ ಜೆಡಿಎಸ್‌ ಪಕ್ಷದ ಮುಖಂಡರು ಅದು ತಮ್ಮ  ಸಮಸ್ಯೆ ಅಲ್ಲ ಎನ್ನುವಂತ ವರ್ತನೆ ಕಾಣಿಸುತ್ತಿತ್ತು. ನಿಯಂತ್ರಣಕ್ಕೆ ಪೊಲೀಸರು ಒಂದಷ್ಟು ಕಾಲ ಪ್ರಯತ್ನಿಸಿ ವಿಫ‌ಲರಾದರು. ಕೋವಿಡ್‌-19 ವೈರಸ್‌ ಜೊತೆಗೆ ಜೀವನ ಸಾಗಿಸಬೇಕು ಎಂದು ಭಾಷಣ ಮಾಡುವ ರಾಜಕೀಯ ಪ್ರತಿನಿಧಿಗಳು  ಸಾಮಾನ್ಯ ಸಂಗತಿ ಗಳನ್ನು ಪಾಲಿಸಿ ಮಾದರಿಯಾಗಬೇಕು ಎಂಬುದು ನಾಗರಿಕರ ಆಗ್ರಹವಾಗಿದೆ.

ಸಹಕರಿಸದಿದ್ದರೆ ಕೋವಿಡ್‌ 19 ನಿಯಂತ್ರಣ ಅಸಾಧ್ಯ: ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಮುಂತಾದ ಮುಂಜಾಗ್ರತೆ ಕ್ರಮಗಳಿಗೆ ಜನರ ಸಹಕಾರವಿಲ್ಲದಿದ್ದರೆ ಕಾನೂನು ಜಾರಿ ಮಾಡಿ ಏನು ಪ್ರಯೋಜನ ಎಂದು  ಡಿಎಚ್‌ಒ, ಸ್ಥಳೀಯ ಸಂಸ್ಥೆಗಳ ಆಯುಕ್ತರು, ಜಿಲ್ಲೆಯ ಹಿರಿಯ ಅಧಿಕಾರಿಗಳು ಅಸಾಹಯಕರಾಗಿ ಪ್ರತಿಕ್ರಿಯಿಸಿದ್ದಾರೆ. ನಿಮಗಾಗಿ ನೀವು ರಕ್ಷಿಸಿಕೊಳ್ಳಿ ಎಂದು ತಿಳಿ ಹೇಳಿದರೂ ಕೇಳುವವರಿಲ್ಲ. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಿದರೂ ನಿರ್ಲಕ್ಷ ಮನೆ ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.