ರಾಮನಗರ: ದೇವರ ಹೆಸರಲ್ಲಿ ರಾಜಕೀಯ ದಾಳ!


Team Udayavani, Dec 14, 2022, 4:59 PM IST

ರಾಮನಗರ: ದೇವರ ಹೆಸರಲ್ಲಿ ರಾಜಕೀಯ ದಾಳ!

ರಾಮನಗರ: ಜಿಲ್ಲೆಯಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ವಿಶೇಷವಾಗಿ ಘಟಾನುಘಟಿಗಳ ತವರು ಕ್ಷೇತ್ರವಾದ ರಾಮನಗರ ಜಿಲ್ಲೆ ಚುನಾವಣಾ ಜಿದ್ದಾಜಿದ್ದಿಗೆ ವೇದಿಕೆಯಾಗಿದೆ.

ಅತ್ತ ಮದಗಜಗಳೆಂದೇ ಜಿದ್ದಾಜಿದ್ದಿಗೆ ಬಿದ್ದಿರುವ ನಾಯಕರ ನಡುವೆ ದೇವರ ಹೆಸರಲ್ಲಿ ಮತ ಸೆಳೆಯುವ ತಂತ್ರಗಾರಿಕೆ ಜೋರಾಗಿದೆ.

ಹೌದು. ರಾಮನಗರ ಜಿಲ್ಲೆ ಅಂದಾಕ್ಷಣ ಹಲವು ವಿಶೇಷಗಳು ಕಾಣಿಸುತ್ತದೆ. ರಾಜಕಾರಣದಲ್ಲಂತೂ ವಿಶಿಷ್ಠ ಸ್ಥಾನ ಗಳಿಸಿರುವ ರಾಮನಗರ ಮೂವರು ಮುಖ್ಯಮಂತ್ರಿ ನೀಡಿದ ಕ್ಷೇತ್ರ. ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರ ತವರು ಜಿಲ್ಲೆ ಕೂಡ ಹೌದು. ರಾಜಕೀಯವಾಗಿ ನೋಡುವುದಾದರೆ ಮೂವರೂ ಕೂಡ ಜಿದ್ದಾಜಿದ್ದಿನ ವೈರತ್ವದವರು. ವಿಶೇಷವಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಶಾಸಕರಾಗಿದ್ದು, ಅದೇ ಕ್ಷೇತ್ರದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಳ್ಳಬೇಕೆಂಬ ಕಾರಣಕ್ಕೆ ಜಿದ್ದಾಜಿದ್ದಿಗೆ ಬಿದ್ದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ನಡುವೆ ಮದಗಜಗಳ ಕಾಳಗವೇ ಕಾದಿದೆ ಎಂದರೂ ತಪ್ಪಲ್ಲ.

ದೇವರ ಹೆಸರಲ್ಲಿ ರಾಜಕಾರಣ: ಹೌದು, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಸಿ.ಪಿ.ಯೋಗೇಶ್ವರ್‌ ಪ್ರಬಲ ಪ್ರತಿಸ್ಪರ್ಧಿಯಾಗಿದ್ದು, ತಂತ್ರ- ರಣತಂತ್ರಗಳನ್ನ ಇಬ್ಬರೂ ನಾಯಕರು ಹೆಣೆಯುವಲ್ಲಿ ನಿರತರಾಗಿ ದ್ದಾರೆ. ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಸಿ.ಪಿ. ಯೋಗೇಶ್ವರ್‌ ರಾಮನ ಹೆಸರಲ್ಲಿ ಈ ಚುನಾವಣೆ ಎನ್ನುವ ಮಾತನ್ನು ಹೇಳಿಕೊಂಡಿದ್ದು, ಅದಕ್ಕೆ ಪೂರಕ ಎಂಬಂತೆ ಇತ್ತೀಚಿಗಷ್ಟೇ ರಾಮ ಮಂದಿರ ನಿರ್ಮಾಣಕ್ಕಾಗಿ ಬೆಳ್ಳಿ ಇಟ್ಟಿಗೆ ಕಳುಹಿಸುವ ಪೂಜಾ ಕಾರ್ಯಕ್ರಮವನ್ನೂ ಅದ್ಧೂರಿಯಾಗಿಯೇ ನಡೆಸಿದ್ದರು.

ಮಾಜಿ ಸಿ.ಎಂ ಕುಮಾರಸ್ವಾಮಿ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಡಿ.16ರಂದು ರಾಮ ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಅದ್ಧೂರಿಯಾಗಿ ತಿರುಪತಿಯ ತಿಮ್ಮಪ್ಪನ ವಿಗ್ರಹವನ್ನೇ ತರಿಸುವ ಮೂಲಕ ಶ್ರೀನಿವಾಸ ಕಲ್ಯಾಣಕ್ಕೆ ವೇದಿಕೆ ಸಿದ್ಧಗೊಳಿಸಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಮೂಲದೇವರ ವಿಗ್ರಹ ಮೆರವಣಿಗೆ ಮಾಡಿಸುವ ಮೂಲಕ ಐತಿಹಾಸಿಕ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ. ಇದು ದೇವರ ಹೆಸರಲ್ಲಿ ಇಬ್ಬರು ನಾಯಕರು ಚುನಾವಣಾ ಪ್ರಕ್ರಿಯೆ ಶುರುವಿಟ್ಟಿದ್ದಾರೆ ಎಂಬ ಗುಸುಗುಸು ಶುರುವಾಗಿದೆ.

ಏಸು ಹೆಸರಲ್ಲಿ ರಾಜಕೀಯ ಗಾಳ: ಇನ್ನು ಡಿ,ಕೆ. ಬ್ರದರ್ ಕೂಡ ಹೊರತಾಗಿಲ್ಲ ಎನ್ನುವಂತೆ ಅವರು ಸದ್ದಿಲ್ಲದೆ ಸರ್ವಧರ್ಮದ ಪಾಲಕರೆಂಬಂತೆ ಏಸು ಪ್ರತಿಮೆ ವಿವಾದದ ಸ್ಥಳದಲ್ಲಿ ಸ್ವತಃ ಆಸಕ್ತಿವಹಿಸಿ ಅತಿ ದೊಡ್ಡ ಏಸು ವಿಗ್ರಹ ಸ್ಥಾಪನೆಗೆ ಮುಂದಾಗಿದ್ದುದು ಇದೀಗ ಸ್ವಲ್ಪ ಹಳೆಯದಾದರು ದೇವರ ಹೆಸರಲ್ಲಿ ರಾಜಕೀಯದ ಗಾಳ ಬೀಸುವಲ್ಲಿ ಅವರು ಪ್ರಥಮಿಗರಾಗಿದ್ದರು. ಇದು ರಾಜಕೀಯ ವಿಶ್ಲೇಷಕರ ಬಾಯಲ್ಲಿ ಸದ್ದು ಮಾಡಲಾರಂಭಿಸಿದ್ದು, ಮೂವರು ಕೂಡ ದೇವರನ್ನೇ ನಂಬಿ ಚುನಾವಣೆಯೆಂಬ ರಣಕಣಕ್ಕೆ ಜಿಗಿಯಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮತದಾರರನ್ನು ಸೆಳೆಯುವ ರಣತಂತ್ರ: ಮಾಗಡಿ ಕ್ಷೇತ್ರದಲ್ಲಿ ಶಾಸಕ ಮಂಜುನಾಥ್‌ ಹಾಗೂ ಬಾಲಕೃಷ್ಣ ಕೂಡ ಹೊರತಾಗಿಲ್ಲ. ಹತ್ತಾರು ಧಾರ್ಮಿಕ ಕಾರ್ಯ ಕ್ರಮ ಆಯೋಜಿಸುವ ಮೂಲಕ ಮತದಾರರನ್ನು ಸೆಳೆಯುವ ರಣತಂತ್ರ ಆರಂಭಿಸಿದ್ದಾರೆ ಎಂದರೂ ತಪ್ಪಲ್ಲ. ಅದೇನೆ ಇರಲಿ, ಜಿಲ್ಲೆಯ ರಾಜಕಾರಣಕ್ಕೆ ಕೇಂದ್ರಬಿಂದುವಾಗಿ ದೇವರನ್ನು ಹಿಡಿದುಕೊಂಡು ತಮ್ಮ ಅಸ್ತಿತ್ವ ಕಂಡುಕೊಳ್ಳುವ ಅಗ್ನಿ ಪರೀಕ್ಷೆಗೆ ಮುಂದಾಗಿದ್ದಾರೆ ಎಂದರೆ ತಪ್ಪಲ್ಲ.

ದೇವಾಲಯ, ಮಸೀದಿಗೆ ದೇಣಿಗೆ : ರಾಮನಗರ ಕ್ಷೇತ್ರದ ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿ ಇಕ್ಬಾಲ್‌ ಹುಸೇನ್‌ ಕೂಡ ಮಂದಿರ, ಮಸೀದಿಗಳಿಗೆ ಲೆಕ್ಕಕ್ಕಿಲ್ಲ ಎನ್ನುವಂತೆ ಹಣ ನೀಡುತ್ತಿದ್ದಾರೆ. ಯಾವುದೇ ದೇವಾಲಯ, ಮಸೀದಿ ಕಟ್ಟಿದರೂ ಇವರಿಂದ ದೇಣಿಗೆ ಉದಾರವಾಗಿ ಹರಿಯುತ್ತದೆ. ಅವರ ಮಾತಿನ ಪ್ರಕಾರವೇ ಚುನಾವಣೆಗೆ ದೇವರನ್ನೇ ನಂಬಿ ನಿಂತಿದ್ದೇವೆ. ಚುನಾವಣೆ ಹಿತದೃಷ್ಟಿಯಿಂದಲೇ ದೇವರ ಕಾರ್ಯಕ್ರಮಗಳಿಗೆ ತಪ್ಪದೆ ಹಾಜರಿ ಮತ್ತು ಸೇವೆಗೆ ಸಿದ್ಧವಿರುವುದಾಗಿ ಹೇಳುತ್ತಾರೆ. ಇನ್ನು ಕ್ಷೆತ್ರದಲ್ಲಿ ಬಿಜೆಪಿಗರೂ ಕೂಡ ಕಡಿಮೆಯೇ ನಿಲ್ಲ ಎನ್ನುವಂತೆ ಗಣಪತಿ ವಿಗ್ರಹಗಳ ವಿತರಣೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮ ಗಳಲ್ಲಿ ತಲ್ಲೀನರಾಗಿದ್ದಾರೆ.

ಧಾರ್ಮಿಕ ಕ್ಷೇತ್ರಗಳಲ್ಲಿ ಕಾರ್ಯಕ್ರಮ ಆಯೋಜನೆ: ತಿರುಪತಿ ತಿಮ್ಮಪ್ಪನ ಹೆಸರಲ್ಲಿ ಎಚ್‌ಡಿಕೆ, ರಾಮನ ಹೆಸರಲ್ಲಿ ಬಿಜೆಪಿ ಸಿಪಿವೈ ಧಾರ್ಮಿಕ ಕಾರ್ಯ ಕ್ರಮ ಹಮ್ಮಿಕೊಂಡಿದ್ದರೆ, ಸದ್ದಿಲ್ಲದೆ ಡಿ.ಕೆ. ಬ್ರದರ್ ಕೂಡ ಧಾರ್ಮಿಕ ಕ್ಷೇತ್ರಗಳಲ್ಲಿ ಕಾರ್ಯಕ್ರಮ ಆಯೋಜನೆ ಹಾಗೂ ಏಸು ಪ್ರತಿಮೆಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಸಹಕಾರ ನೀಡುವ ಮೂಲಕ ಜಿಲ್ಲೆಯಲ್ಲಿ ದೇವರ ಹೆಸರಲ್ಲಿ ರಾಜಕಾರಣ ರಂಗೇರುವಂತೆ ಮಾಡುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ.

ದೇವರನ್ನ ನಂಬಿದ್ರೆ ನಮ್ಮದೇನೂ ತಕರಾರಿಲ್ಲ. ಆದ್ರೆ, ಕಾಯಕವೇ ಕೈಲಾಸ ಎಂದು ಕ್ಷೇತ್ರದಲ್ಲಿ ಜನಸಾಮಾನ್ಯರ ಕೆಲಸ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿಮಾಡಬೇಕು. ಅಲ್ಲದೆ, ರೈತರ ಸಂಕಷ್ಟ ಗಳಿಗೆ ಸ್ಪಂದಿಸುವ ಮೂಲಕ ಅವರ ಸಮಸ್ಯೆ ನಿವಾರಿಸ ಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಸೃಸ್ಟಿಸಿ ಮತದಾರ ದೇವರ ಬಳಿ ವರ ಪಡೆಯಬೇಕೆ ವಿನಃ ಧಾರ್ಮಿಕ ಕಾರ್ಯ ಕ್ರಮಗಳಿಂದ ಎಷ್ಟು ಸರಿ? ಇನ್ನಾದರೂ ಎಲ್ಲರೂ ಇಚ್ಛಾಶಕ್ತಿಯಿಂದ ಜನರ ಸೇವೆ ಮಾಡಲಿ. – ಶಿವನಾಗ ಸ್ವಾಮಿ, ಸಾಮಾಜಿಕ ಹೋರಾಟಗಾರ

– ಎಂ.ಎಚ್‌. ಪ್ರಕಾಶ, ರಾಮನಗರ

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.