ಪ್ರಾಯೋಗಿಕ ಗಣಿತ ಕಲಿಕೆ ಅತ್ಯಗತ್ಯ

ಶಿಕ್ಷಕರು ಸುಲಭ ವಿಧಾನಗಳ ಮೂಲಕ ಗಣಿತ ಬೋಧಿಸಿ: ಗಂಗಮಾರೇಗೌಡ

Team Udayavani, Aug 4, 2019, 4:00 PM IST

rn-tdy-2

ರಾಮನಗರದ ಹೋಲಿಕ್ರೆಸೆಂಟ್ ಶಾಲೆಯಲ್ಲಿ ನಡೆದ ಮ್ಯಾಥ್ಸ್ಮೇನಿಯಾ ಗಣಿತ ಉತ್ಸವವನ್ನು ಡಿಡಿಪಿಐ ಗಂಗಮಾರೇಗೌಡ ಉದ್ಘಾಟಿಸಿದರು.

ರಾಮನಗರ: ಗಣಿತ ಕಬ್ಬಿಣದ ಕಡಲೆ ಎಂದೇ ಇಂದಿಗೂ ವಿದ್ಯಾರ್ಥಿಗಳ ಭಾವನೆ. ಪ್ರಾಯೋಗಿಕವಾಗಿ ಗಣಿತ ಕಲಿಕೆ ಅಗತ್ಯವಿದೆ ಎಂದು ಡಿಡಿಪಿಐ ಎಂ.ಎಚ್.ಗಂಗಮಾರೇಗೌಡ ಸಲಹೆ ನೀಡಿದರು.

ನಗರದ ಹೋಲಿ ಕ್ರೆಸೆಂಟ್ ಆಂಗ್ಲ ಶಾಲೆಯಲ್ಲಿ ನಡೆದ ‘ಮ್ಯಾಥ್ಸ್ಮೇನಿಯಾ’ ಗಣಿತ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿ, ಇಂತಹ ಕಾರ್ಯಕ್ರಮಗಳು ಗಣಿತ ಕ್ಲಿಷ್ಟವಾದ ವಿಷಯವಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಡುತ್ತದೆ. ವಿದ್ಯಾರ್ಥಿಗಳು ಸುಲಭ ವಿಧಾನಗಳ ಮೂಲಕ ಗಣಿತ ಕಲಿತರೆ ಇದು ಇನ್ನಷ್ಟು ಸರಳವಾಗುತ್ತದೆ. ಶಿಕ್ಷಕರು ಸಹ ಸುಲಭ ವಿಧಾನಗಳ ಮೂಲಕ ಗಣಿತ ಬೋಧಿಸಬೇಕು. ಹೊಸ ಕೌಶಲ ಮತ್ತು ಕ್ರಿಯಾಶೀಲ ವಿಧಾನಗಳ ಮೂಲಕ ಕ್ಲಿಷ್ಟಕರ ವಿಚಾರಗಳನ್ನು ತಿಳಿಸಿಕೊಡಬೇಕು. ಮ್ಯಾಥ್ಸ್ಮೇನಿಯಾದಂತಹ ಕಾರ್ಯಕ್ರಮಗಳು ಪ್ರಾಯೋಗಿಕ ಕಲಿಕೆಗೆ ಪ್ರೋತ್ಸಾಹ ನೀಡುತ್ತದೆ. ಹೀಗಾಗಿ ಗಣಿತ ವಿಷಯ ಸುಲಭವಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಎಲ್ಲಾ ಕ್ಷೇತ್ರಕ್ಕೂ ಗಣಿತ ಅಗತ್ಯ: ಬಿಇಒ ಮರೀಗೌಡ ಮಾತನಾಡಿ, ಮಕ್ಕಳಲ್ಲಿ ಗಣಿತ ವಿಷಯದ ಬಗ್ಗೆ ಆಸಕ್ತಿ ಮೂಡಿಸುವಲ್ಲಿ ಗಣಿತ ಉತ್ಸವ ಯಶಸ್ವಿಯಾಗಿದೆ. ಗಣಿತ ವಿಷಯವನ್ನು ಆಸಕ್ತಿಯಿಂದ ಕಲಿತರೆ ಅದರಷ್ಟು ಸುಲಭದ ವಿಷಯ ಬೇರೊಂದಿಲ್ಲ. ಗಣಿತ ಎಲ್ಲಾ ಕ್ಷೇತ್ರಕ್ಕೂ ಅವಶ್ಯವಿದೆ. ಆದ್ದರಿಂದ ಈ ವಿಷಯಕ್ಕೆ ಹೆಚ್ಚು ಒತ್ತು ನೀಡಿ, ವಿದ್ಯಾರ್ಥಿಗಳಿಗೆ ತಿಳಿಸಬೇಕಾಗಿದೆ. ವಿದ್ಯಾರ್ಥಿಗಳ ಅಂಕ ಗಳಿಕೆಗೆ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು, ಕಲಿಕೆಯ ಆಸಕ್ತಿ ಮಕ್ಕಳಲ್ಲಿಯೂ ಇರಬೇಕು. ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಉದಾಹರಣೆ ಸಹಿತವಾಗಿ ವಿವರಣೆ ನೀಡಬೇಕು. ಆಗ ಮಕ್ಕಳು ತಿಳಿದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಪ್ರಾಯೋಗಿಕ ಸಾಮರ್ಥ್ಯ ಹೆಚ್ಚಳ: ಹೋಲಿ ಕ್ರೆಸೆಂಟ್ ಇಂಗ್ಲಿಷ್‌ ಶಾಲೆಯ ಕಾರ್ಯದರ್ಶಿ ಅಲ್ತಾಫ್ ಅಹಮದ್‌ ಮಾತನಾಡಿ, ನಿರೀಕ್ಷಿಸಿ ಮತ್ತು ಪರೀಕ್ಷಿಸಿ ನಡೆಸುವ ಕಲಿಕಾ ಚಟುವಟಿಕೆಗಳು ಮಕ್ಕಳ ನಿರೀಕ್ಷನಾ ಸಾಮರ್ಥ್ಯ ಹಾಗೂ ಪ್ರಾಯೋಗಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಪಿ. ಸೋಮಲಿಂಗಯ್ಯ, ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಪಟೇಲ್ ಸಿ.ರಾಜು, ಪ್ರಾಂಶುಪಾಲರಾದ ಅಲಾØಜ್‌ ಶಾಜಿಯಾ, ಸಮನ್ವಯಾಧಿಕಾರಿ ಸ್ಟ್ಯಾನ್ಲಿ ಪಾಲ್, ಮುಖ್ಯಶಿಕ್ಷಕಿ ಲತಾ ಆನಂದ್‌, ಗ್ರೇಸ್‌ ರೇಷ್ಮ ಪಾಲ್ಗೊಂಡಿದ್ದರು.

ಗಣಿತ ಉತ್ಸವದಲ್ಲಿ ಏನೇನಿತ್ತು?:

ಗಣಿತ ಉತ್ಸವ – ಮ್ಯಾಥ್ಸ್ಮೇನಿಯಾದಲ್ಲಿ ಪೈಥಾಗೊರಸ್‌ನ ಪ್ರಮೇಯದ ಮಾದರಿಗಳು, ತ್ರಿಕೋನ ಮಿತಿಯ ಅನುಪಾತಗಳು, ಬ್ಯಾಂಕಿಂಗ್‌ ವ್ಯವಸ್ಥೆ, ಪೈ ಮೌಲ್ಯ, ದಿನ ದಿನಾಂಕಗಳನ್ನು ಪತ್ತೆ ಹಚ್ಚುವ ಬಗೆ, ಜ್ಯಾಮಿತಿ, ಟಿಎಂಸಿ ಹಾಗೂ ಕ್ಯೂಸೆಕ್‌ನ ಅಳತೆಗಳು, ಸಮಾನುಪಾತ, ನೇಪಿಯರ್‌ ಬೋನ್ಸ್‌ ಸರಳವಾಗಿ ಲ.ಸಾ.ಅ ಕಂಡು ಹಿಡಿಯುವ ರೀತಿ, ನಿಮ್ಮ ವಯಸ್ಸು ನಮಗೆ ಗೊತ್ತಿದೆ- ಹೀಗೆ ಹಲವು ಗಣಿತದ ಚಮತ್ಕಾರಗಳನ್ನು ಅನಾವರಣಗೊಂಡಿದ್ದವು.

 ಗಣಿತ ವಿಷಯದ ಕೆಲವು ಸಂಕಿರಣ ವಿಚಾರಗಳನ್ನು ಸರಳವಾಗಿ ತಿಳಿದುಕೊಳ್ಳಲು ಗಣಿತ ಉತ್ಸವ ಸಹಕಾರಿಯಾಗಿದೆ ಎಂದು ಮಂಡ್ಯ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಎಂ.ಎಸ್‌ ಮಹದೇವನಾಯ್ಕ ತಿಳಿಸಿದರು. ನಗರದ ಹೋಲಿ ಕ್ರೆಸೆಂಟ್ ಆಂಗ್ಲ ಶಾಲೆಯಲ್ಲಿ ಆಯೋಜಿಸಲಾಗಿದ್ದ ಮ್ಯಾಥ್ಸ್ಮೇನಿಯಾ -ಗಣಿತ ಉತ್ಸವ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅವರು ಮಾತನಾಡಿ, ಗಣಿತ ಉತ್ಸವ ಸಲಭವಾಗಿ ಹೇಗೆ ಬೋಧಿಸಬಹುದು ಎಂಬುದನ್ನು ಶಿಕ್ಷಕರು ಸಹ ಅರಿಯಲು ಸಹಕಾರಿಯಾಗಿದೆ. ಸ್ವಯಂ ಮಕ್ಕಳೇ ಮಾದರಿಗಳನ್ನು ರಚಿಸಿರುವುದರಿಂದ ಅವರಲ್ಲಿ ಹಲವಾರು ವಿಚಾರಗಳಲ್ಲಿ ಸಂಪೂರ್ಣ ಜ್ಞಾನ ಪಡೆಯಲು ಸಹಕಾರಿಯಾಗಿದೆ ಎಂದು ಹೇಳಿದರು. ಭಾರತದ ವಿಜ್ಞಾನಿ ಶ್ರೀನಿವಾಸ ರಾಮಾನುಜನ್‌ ಅವರ ಬಗ್ಗೆ ಮಾಹಿತಿ ಕೊಟ್ಟರು. ಈ ವೇಳೆ ಶಾಲೆ ಕಾರ್ಯದರ್ಶಿ, ಪ್ರಾಂಶುಪಾಲರು, ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.