ಯುವ ಅಭ್ಯರ್ಥಿಗಳಿಗೆ ಆದ್ಯತೆ


Team Udayavani, Nov 14, 2020, 9:33 PM IST

ಯುವ ಅಭ್ಯರ್ಥಿಗಳಿಗೆ ಆದ್ಯತೆ

ರಾಮನಗರ: ಮುಂಬರುವ ಗ್ರಾಪಂ ಚುನಾವಣೆಯಲ್ಲಿ ಯುವ ಸ್ಪರ್ಧಿಗಳನ್ನು ಬೆಂಬಲಿಸುವುದಾಗಿ ಹಾಗೂ ತಾಪಂ, ಜಿಪಂ ಚುನಾವ ಣೆಗಳಲ್ಲಿ ಯುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಶಿಫಾರಸು ಮಾಡುವುದಾಗಿ ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖೀಲ್‌ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,2023ರ ಸಾರ್ವತ್ರಿಕ ಚುನಾವಣೆ ಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ತಮ್ಮ ಗುರಿಯಾಗಿದ್ದು, ರಾಜ್ಯಾದ್ಯಂತ ಪ್ರವಾಸಮಾಡುತ್ತೇನೆ. ಸಂಘಟನೆ ಕಾರ್ಯವನ್ನು ತಮ್ಮ  ಕುಟುಂಬಕ್ಕೆ ರಾಜಕೀಯವಾಗಿ ಜನ್ಮ ನೀಡಿದರಾಮನಗರದಿಂದಲೇ ಆರಂಭಿಸುವುದಾಗಿ ತಿಳಿಸಿದರು.

ಮನೆಯಲ್ಲಿ ಕೂರುವುದಿಲ್ಲ: ಗ್ರಾಪಂ ಚುನಾವಣೆಗಳ ದಿನಾಂಕವನ್ನು ಸರ್ಕಾರ ಇದೇ ನ.20ರಂದು ಘೋಷಿಸಲಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ರಾಜ್ಯ ಜೆಡಿಎಸ್‌ ಅಧ್ಯಕ್ಷರು ವಿಶ್ವಾಸವಿಟ್ಟು ಯುವ ಅಧ್ಯಕ್ಷ ಸ್ಥಾನಕೊಟ್ಟಿದ್ದಾರೆ. ಗ್ರಾಪಂ ಚುನಾವಣೆಗಳಲ್ಲಿಯುವ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸುವೆ.2023ರ ಸಾರ್ವತ್ರಿಕ ಚುನಾವಣೆಗೂ ಅಭ್ಯ ರ್ಥಿಗಳ ಗೆಲುವಿಗೆ ಜವಾಬ್ದಾರಿ ವಹಿಸಲು ತಾವು ಸಿದ್ಧ ಎಂದರು.

ಫ್ರೀ ಹ್ಯಾಂಡ್‌ ಇರಲಿಲ್ಲ: ಮೈತ್ರಿ ಸರ್ಕಾರದಲ್ಲಿ ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯ ಮಂತ್ರಿಗಳಾಗಿದ್ದರೂ ಅವರಿಗೆ ಫ್ರೀ ಹ್ಯಾಂಡ್‌ ಇರಲಿಲ್ಲ. ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ನಿಗಮ, ಮಂಡಳಿ ಅಧ್ಯಕ್ಷರನ್ನಾಗಿ ಮಾಡಲಿಲ್ಲ. ತಕ್ಕ ಹುದ್ದೆ ಕೊಡಲಿಲ್ಲ. ಚುನಾವಣೆಗಳ ವೇಳೆ ಮಾತ್ರ ಬಳಸಿಕೊಳ್ಳುತ್ತಾರೆ ಎಂಬ ಆರೋಪ ಕೇಳಿ ಬರುತ್ತಿವೆ ಎಂದು ಸುದ್ದಿಗಾರರು ಗಮನ ಸೆಳೆದಾಗ, ಮೈತ್ರಿ ಸರ್ಕಾರದಲ್ಲಿ ಎಚ್‌.ಡಿ.ಕು ಮಾರಸ್ವಾಮಿ ಸಿಎಂ ಆಗಿದ್ದರೂ ಅವರಿಗೆ ಫ್ರೀ ಹ್ಯಾಂಡ್‌ ಸಿಗದ ಕಾರಣ ಕಾರ್ಯಕರ್ತರಿಗೆ ಹುದ್ದೆ, ಸ್ಥಾನ ಕಲ್ಪಿಸಲಾಗಲಿಲ್ಲ ಎಂಬ ದುಃಖವಿದೆ ಎಂದರು.

ನೋವಿದೆ: ಶಿರಾ, ಆರ್‌.ಆರ್‌.ನಗರದ ಮತದಾರರ ತೀರ್ಪನ್ನು ಗೌರವಿಸುವುದಾಗಿ ತಿಳಿಸಿದರು. ಶಿರಾಕ್ಷೇತ್ರವನ್ನು ಪಕ್ಷಕಳೆದುಕೊಂಡಿರುವುದಕ್ಕೆ ತಮಗೆ ನೋವಿದೆ ಎಂದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಪಚುನಾವಣೆಗಳಲ್ಲಿ ಮತ ದಾರರು ಆಡಳಿತ ಪಕ್ಷದ ಪರ ನಿಲ್ಲುತ್ತಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಅಧಿ ಕಾರವಧಿಯಲ್ಲಿ ನುಡಿದಂತೆ ನಡೆದುಕೊಂಡಿದ್ದಾರೆ. ಆದರೆ ಮತದಾರರು ಕೈ ಹಿಡಿಯುತ್ತಿಲ್ಲ ಎಂಬ ನೋವಿದೆ. ಈ ಬಗ್ಗೆ ಪಕ್ಷದಲ್ಲಿ ಆತ್ಮಾವ ಲೋಕನ ನಡೆಯುತ್ತಿದೆ ಎಂದರು. ಜೆಡಿಎಸ್‌ ಪ್ರಮುಖರಾದ ರಾಜಶೇಖರ್‌,ಬಿ.ಉಮೇಶ್‌, ದೊರೆಸ್ವಾಮಿ, ಅಜಯ್‌, ಗೂಳಿಗೌಡ, ಪರ್ವೀಜ್‌ ಪಾಷಾ, ಜಯಕುಮಾರ್‌, ಮಾವಿನ ಸಸಿ ವೆಂಕಟೇಶ್‌, ಕುಮಾರ್‌, ರಮೇಶ್‌ ಇದ್ದರು.

ಶಿವನಹಳ್ಳಿ ಸೇತುವೆಕಾಮಗಾರಿ ಶೀಘ್ರ ಆರಂಭ :ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣಕ್ಕೆ ಎಚ್‌.ಡಿ.ಕುಮಾರಸ್ವಾಮಿ ಅವರ ಅಧಿಕಾರಾವಧಿಯಲ್ಲಿ ಮಂಜೂರಾಗಿದೆ. ಆದರೆ ಕಾಮಗಾರಿ ಆರಂಭವಾಗಿಲ್ಲ. ಈ ವಿಚಾರವನ್ನು ಕ್ಷೇತ್ರದ ಶಾಸಕರ ಗಮನ ಸೆಳೆದಿರುವುದಾಗಿ, ಅವರು ಅಧಿಕಾರಿಗಳ ಬಳಿ ಚರ್ಚಿಸಿದ್ದಾರೆ. ಇನ್ನು 15 ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದರು. ರಾಮನಗರ ಮತ್ತು ಚನ್ನಪಟ್ಟಣ ಶಾಸಕರು ಕ್ಷೇತ್ರಕ್ಕೆ ಭೇಟಿ ಕೊಡುತ್ತಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ಕೋವಿಡ್‌ ಕಾರಣ ಬರಲಿಲ್ಲ. ಆದರೆ, ಅಧಿಕಾರಿಗಳ ಬಳಿ ಇಬ್ಬರೂ ಶಾಸಕರು ನಿರಂತರ ಚರ್ಚೆ ಮಾಡುತ್ತಿದ್ದಾರೆ. ಸಾಕಷ್ಟು ಅಭಿವೃದ್ಧಿಕಾಮಗಾರಿಗಳು ನಡೆಯುತ್ತಿವೆ ಎಂದರು.

ರಾಮನಗರದಿಂದ ಸ್ಪರ್ಧೆ ಈಗಲೇ ಹೇಳಲಾಗೊಲ್ಲ : ರಾಮನಗರ ಅಥವಾ ಚನ್ನಪಟ್ಟಣ ಕ್ಷೇತ್ರಗಳಿಂದ 2023ರ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶ ತಮಗಿಲ್ಲ. ಆದರೆ, ಈ ಬಗ್ಗೆ ಈಗಲೇ ಏನನ್ನು ಹೇಳಲು ಸಾಧ್ಯ ವಿಲ್ಲ. ಈ ಬಗ್ಗೆ ಮುಂದೆ ಯೋಚನೆ ಮಾಡ್ತೀನಿ. ರಾಮನಗರ ಕ್ಷೇತ್ರದ ಪ್ರವಾಸದ ವೇಳೆ ಜನರ ಅಹವಾಲು ಆಲಿಸುವೆ. ಕ್ಷೇತ್ರದ ಸಮಸ್ಯೆಗಳನ್ನು ತಾವು ಕ್ಷೇತ್ರದ ಶಾಸಕರ (ಅನಿತಾ ಕುಮಾರಸ್ವಾಮಿ) ಗಮನ ಸೆಳೆಯುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.