ಗಣೇಶೋತ್ಸವ ಹೆಸರಲ್ಲಿ ಚುನಾವಣೆಗೆ ಸಿದ್ಧತೆ


Team Udayavani, Sep 6, 2022, 1:10 PM IST

tdy-4

ಚನ್ನಪಟ್ಟಣ: ವಿಧಾನಸಭೆ ಚುನಾವಣೆಗೆ 7-8 ತಿಂಗಳು ಬಾಕಿ ಇರುವಾಗಲೇ ಮತ ಬೇಟೆ ಚುರುಕು ಗೊಳಿಸಿರುವ ಆಕಾಂಕ್ಷಿಗಳು, ಗಣಪನ ಹಬ್ಬದಲ್ಲಿ ಯುವ ಸಮೂಹವನ್ನು ಸೆಳೆದುಕೊಳ್ಳಲು ವಿವಿಧ ರೀತಿಯ ಕಸರತ್ತುಗಳನ್ನು ನಡೆಸುತ್ತಿರುವುದು ಕಂಡು ಬರುತ್ತಿದೆ. ಕೋವಿಡ್‌ ಮುಗಿದ ಬಳಿಕ ಸಡಿಲಗೊಂಡಿದ್ದ ಗಣೇಶ ಹಬ್ಬವನ್ನು ಎಲ್ಲರೂ ಸಂಭ್ರಮದಿಂದ ಆಚರಿಸಿ ದರೆ, ತಾಲೂಕಿನ ರಾಜಕಾರಣಿಗಳು ಮಾತ್ರ ಭವಿಷ್ಯದ ವಿಧಾನಸಭೆ ಚುನಾವಣೆಯನ್ನು ದೃಷ್ಟಿಕೋನದಲ್ಲಿಟ್ಟು ಕೊಂಡು ಗಣೇಶೋತ್ಸವಕ್ಕೆ ರಂಗು ನೀಡುತ್ತಿದ್ದಾರೆ.

ಯುವಕರ ತಂಡಗಳ ಓಲೈಕೆ: ಗಣೇಶೋತ್ಸವವು ತಾಲೂಕಿನಲ್ಲಿ ರಾಜಕೀಯ ಕಾವು ಮತ್ತಷ್ಟು ಹರಡಲಿದೆ ಎನ್ನುವುದನ್ನು ಮನಗಂಡ ರಾಜಕೀಯ ಪಕ್ಷಗಳಾದ ಜೆಡಿಎಸ್‌, ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಯುವಕರ ತಂಡಗಳ ಓಲೈಕೆಗೆ ಮುಂದಾಗಿದ್ದು, ಮತ ಬ್ಯಾಂಕ್‌ ಹಾಗೂ ತಮ್ಮ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡುವ ಸಲುವಾಗಿಯೇ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಯುವಕರನ್ನು ಸೆಳೆಯಲು ಈಗಿನಿಂದಲೇ ತಮ್ಮ ಕೆಲಸ ಶುರು ಮಾಡಿದ್ದಾರೆ. ಜನಸಂಖ್ಯೆಯಲ್ಲಿ ಬಹು ಪಾಲು ಮತ್ತು ಮತದಾನದ ಹಕ್ಕು ಪಡೆದಿರುವ ದೊಡ್ಡ ಮಟ್ಟದ ಸಮೂಹವೆನಿಸಿಕೊಂಡ ಯುವ ಜನರನ್ನು ಚುನಾವಣೆಯಲ್ಲಿ ಬಳಸಿಕೊಳ್ಳಲು, ತಮ್ಮ ಪರವಾಗಿ ಮತ ಚಲಾಯಿಸುವಂತೆ ಮಾಡಿಕೊಳ್ಳಲು ಮುಖಂ ಡರು ಹಬ್ಬದ ಆಚರಣೆಗೆ ಬೇಕಾದ ಸಿದ್ಧತೆಗಳು ಮತ್ತು ಯಾವುದೇ ತೊಂದರೆಯಾಗದಂತೆ ಅವರಿಗೆ ಸಹಕಾರ ನೀಡುತ್ತಿರುವುದು ಗೋಚರಿಸಿದೆ.

ಉಚಿತ ಗಣೇಶೋತ್ಸವ: ಗಣೇಶನ ಹಬ್ಬವೆಂದರೆ ಜನರ ಬಳಿ ಹಣ ಸಂಗ್ರಹಿಸಿ, ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ, ಪೂಜಿಸುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದಿದ್ದ ವಾಡಿಕೆಯಾಗಿತ್ತು. ಆದರೆ, ಕಳೆದ ಹಲವು ವರ್ಷಗಳಿಂದ ಜೆಡಿಎಸ್‌ ಮುಖಂಡ ಎಚ್‌.ಸಿ.ಜಯಮುತ್ತು ಪ್ರತಿ ವರ್ಷ ಉಚಿತ ಗಣೇಶ ಮೂರ್ತಿಗಳನ್ನು ವಿತರಣೆ ಮಾಡುತ್ತಿದ್ದರು. ಆದರೀಗ ಗಣೇಶ ಹಬ್ಬದ ಲಾಭ ಪಡೆದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕೂಡ ಗಣೇಶ ಮೂರ್ತಿಗಳನ್ನು ವಿತರಣೆ ಮಾಡುವ ಮೂಲಕ ಜೆಡಿಎಸ್‌ ಮುಖಂಡ ಜಯಮುತ್ತು ಅವರಿಗೆ ಸೆಡ್ಡು ಹೊಡೆದರು. ತಮ್ಮ ಹುಟ್ಟುಹಬ್ಬದ ಸಮೀಪವೇ ಎದುರಾದ ಗಣೇಶೋ ತ್ಸವ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸು ವಂತಹ ವಾತಾವರಣ ನಿರ್ಮಿಸಿ, ಉಚಿತ ಗಣೇಶ ಮುರ್ತಿಯೊಂದಿಗೆ ಪೂಜಾ ಸಾಮಗ್ರಿ ಕಿಟ್‌, ಕೇಸರಿ ಶಾಲು-ಬಾವುಟ ನೀಡುವ ಮೂಲಕ ತಾಲೂಕಿನ ಹಲವು ಭಾಗಗಳನ್ನು ಕೇಸರಿಮಯಗೊಳಿಸುತ್ತಿದ್ದಾರೆ.

ಆರ್ಕೆಸ್ಟ್ರಾ ಮತ್ತು ದೇಣಿಗೆ: ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಯೋಗೇಶ್ವರ್‌ ಅವರು ಕೆಲವು ಪ್ರಮುಖ ಗ್ರಾಮಗಳಲ್ಲಿ ಆರ್ಕೆಸ್ಟ್ರಾ ಆಯೋಜನೆ ಮೂಲಕ ಯುವಕರ ತಂಡಗಳನ್ನು ಆಕರ್ಷಿ ಸುತ್ತಿದ್ದಾರೆ. ಕೆಲವು ಗ್ರಾಮಗಳನ್ನು ಕೇಂದ್ರಿಕರಿಸು ತ್ತಿರುವ ಯೋಗೇ ಶ್ವರ್‌, ತಮ್ಮ ಪರವಾಗಿರುವ ಮುಖಂಡರು ಕರೆತರುವ ಯುವಕರ ತಂಡಗಳಿಗೆ ದೇಣಿಗೆ ನೀಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಕ್ಕಿಂತ ನಾನೇನು ಕಡಿಮೆ ಇಲ್ಲ ಎನ್ನುವುದನ್ನು ಅರಿ ತಿರುವ ಕಾಂಗ್ರೆಸ್‌ ಅಭ್ಯರ್ಥಿ ಎಂದೇ ಬಿಂಬಿತವಾಗು ತ್ತಿರುವ ಪಂಚಮಿ ಪ್ರಸನ್ನಗೌಡ ಅವರು ತಮ್ಮ ಬಳಿ ಬರುವ ಯುವಕರ ತಂಡಗಳಿಗೆ ಸಹಾಯಧನ ವಿತರಣೆ ಮಾಡುತ್ತಿದ್ದಾರೆ. ಯುವಕರನ್ನು ತಮ್ಮ ಸೆಳೆಯುವ ತಂತ್ರದ ಭಾಗವಾಗಿ ಗಣೇಶ ವಿಸರ್ಜನೆ ವೇಳೆ ಯುವಕರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.

ಗ್ರಾಮಗಳಲ್ಲಿ ಒಗ್ಗಟ್ಟು ಪ್ರದರ್ಶನ : ಚನ್ನಪಟ್ಟಣ ನಗರದಲ್ಲಿಯೇ ನೂರಾರು ಕಡೆಗಳಲ್ಲಿ ಬೀದಿ, ಕೇರಿಗಳು ಮತ್ತಿತರ ಕಡೆಗಳಲ್ಲಿ ಗಣಪನ ಮೂರ್ತಿ ಪ್ರತಿಷ್ಠಾಪಿಸಿ ವಿಘ್ನ ನಿವಾರಕನ ಆರಾಧನೆ ಮಾಡಲಾಗಿದೆ. ಕೆಲವರಂತೂ ಅದ್ದೂರಿಯಾಗಿ ಗಣೇಶ ವಿಸರ್ಜನೆ ಮಾಡಿದ್ದಾರೆ. ಕೆಲ ಗಣೇಶೋತ್ಸವ ಸಮಿತಿಗಳಂತೂ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸುತ್ತಾ, ತಮ್ಮ ಭಾಗದಲ್ಲಿ ತಾವು ಪ್ರಭಾವಿಗಳು ಎನ್ನುವುದನ್ನು ನಿರೂಪಿಸುವಲ್ಲಿ ಬೆವರು ಸುರಿಸುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ಜೋಶ್‌ ನೊಂದಿಗೆ ಜೋರಾಗಿ ಗಣೇಶನ ಪ್ರತಿಷ್ಠಾಪಿಸಿ ವಿಸರ್ಜಿಸಿ, ಆರ್ಕೆಸ್ಟ್ರಾ ಕಾರ್ಯಕ್ರಮ ಆಯೋಜಿಸಿ, ಗ್ರಾಮದಲ್ಲಿ ತಮ್ಮ ಪರವಾದ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಯುವಕರ ತಂಡಗಳಿಗೆ ಉಚಿತ ಗಣೇಶ ಮೂರ್ತಿಗಳು, ಹಣ ದೇಣಿಗೆ ನೀಡಿದ್ದರ ಜತೆಗೆ, ಆರ್ಕೆಸ್ಟ್ರಾದ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಇದರ ಸಂಭ್ರಮವನ್ನು ತಮ್ಮ ಪರವಾಗಿ ಮಾಡಿಕೊಳ್ಳುವ ಚಿಂತನೆಯಲ್ಲಿದ್ದಾರೆ.

ಎಂ.ಶಿವಮಾದು

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.