ಕೆಂಪೇಗೌಡ ಜಯಂತಿ ಆಚರಣೆಗೆ ಸಿದ್ಧತೆ


Team Udayavani, Jun 13, 2022, 3:31 PM IST

ಕೆಂಪೇಗೌಡ ಜಯಂತಿ ಆಚರಣೆಗೆ ಸಿದ್ಧತೆ

ಮಾಗಡಿ: ಪಟ್ಟಣದ ನಾಡಪ್ರಭು ಕೆಂಪೇಗೌಡ ಕೋಟೆ ಮೈದಾನದಲ್ಲಿ ಜೂ.23ರಂದು ಬೆಳಗ್ಗೆ 10 ಗಂಟೆಗೆ ಅದ್ಧೂರಿ ಯಾಗಿ ಸರ್ವಧರ್ಮ ಪ್ರಿಯ ಕೆಂಪೇಗೌಡ ಜಯಂತಿಯನ್ನು ಮಾಗಡಿ ಹಬ್ಬದಂತೆ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಡಾ. ಎಚ್‌.ಎಂ.ಕೃಷ್ಣಮೂರ್ತಿ ತಿಳಿಸಿದ್ದಾರೆ.

ಪಟ್ಟಣದ ಪ್ರಸನ್ನ ಕೋಟೆ ರಾಮೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿನ ಚಾಮುಂಡೇಶ್ವರಿ ಸನ್ನಧಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 20 ವರ್ಷಗಳಿಂದಲೂ ನನ್ನ ದುಡಿಮೆಯ ಹಣದಿಂದಲೇ ನಿರಂತರವಾಗಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿದ್ದೇನೆ. ಜಯಂತಿ ಸಮಾರಂಭಕ್ಕೆ ಭಾಗವಹಿಸುವ ಸಹಸ್ರಾರು ಮಂದಿಗೆ ತಿನ್ನುವಷ್ಟು ಬೂಂದಿ, ಅನ್ನದಾನವನ್ನು ಏರ್ಪಡಿಸುವ ಮೂಲಕ ಕೆಂಪೇಗೌಡರ ಹೆಸರನ್ನು ವಿಶ್ವವಿಖ್ಯಾತಿಗೊಳಿಸಲು ಶ್ರಮಿಸಿದ್ದೇನೆ. ನಾಡು ಕಟ್ಟಿದ ಧರ್ಮಪ್ರಭು ಕೆಂಪೇಗೌಡರ ಹೆಸರಿನಲ್ಲಿ ಅನೇಕ ಆರೋಗ್ಯ ಶಿಬಿರಗಳನ್ನು ಏರ್ಪಡಿಸುವ ಮೂಲಕ ಜನರ ಆರೋಗ್ಯ ಸುಧಾರಣೆಗೆ ಶ್ರಮಿಸುತ್ತಿದ್ದೇನೆ ಎಂದರು.

ಸಮಾರಂಭಕ್ಕೆ ಸಕಲ ಸಿದ್ಧತೆ: ಈ ಬಾರಿಯೂ ನನ್ನ ಸ್ವಂತ ದುಡಿಮೆಯಲ್ಲಿಯೇ ವಿಶಿಷ್ಟವಾಗಿ ಅದ್ಧೂರಿ ನಾಡಪ್ರಭು ಕೆಂಪೇ ಗೌಡ ಜಯಂತಿ ಸಮಾರಂಭಕ್ಕೆ ಸಕಲ ಸಿದ್ಧತೆ ಭರದಿಂದ ಸಾಗಿದ್ದು, ಈ ಸಮಾರಂಭಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮೈಸೂರಿನ ಯಧುವೀರ ಮಹಾರಾಜನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಉಸ್ತವಾರಿ ಸಚಿವ ಡಾ.ಸಿ.ಎನ್‌.ಅಶ್ವತ್ಥ್ನಾರಾಯಣ, ಸಚಿವ ಗೋಪಾ ಲಯ್ಯ, ಎಸ್‌.ಟಿ.ಸೋಮಶೇಖರ್‌, ನಟ ಪ್ರೇಮ್‌, ಜಗ್ಗೇಶ್‌, ವಿನೋದ್‌ ಪ್ರಭಾಕರ್‌, ಗುರುಕಿರಣ್‌, ಅಭಿಷೇಕ್‌, ವಿವಿಧ ಮಠಗಳ ಮಠಾಧೀಶರು, ಗಣ್ಯರು, ಸಮಾಜಸೇವಕರು ಹಾಗೂ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.

20 ಸಾವಿರ ಮಂದಿಗೆ ಭೋಜನ: ಜಯಂತಿ ಪ್ರಯುಕ್ತ ಅಲಂಕೃತ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾ ರ್ಪಣೆ ಮಾಡಲಾಗುವುದು. ವಿವಿಧ ಕಲಾತಂಡಗಳ ಸಾಂಸ್ಕೃತಿಕ ಮೆರವಣಿಗೆ, ವರ್ಣರಂಜಿತ ಬಾಣ ಬಿರುಸುಗಳ ಪ್ರದರ್ಶನ ಸಮಾರಂಭಕ್ಕೆ ಬರುವ ಗಣ್ಯರಿಗೆ, ಸಾರ್ವ ಜನಿಕರಿಗೆ ಸುಮಾರು 20 ಸಾವಿರ ಮಂದಿಗೆ ಸಸ್ಯಹಾರಿ ಮತ್ತು ಮಾಂಸಹಾರ ಭೋಜನ ಏರ್ಪಡಿಸಲಾಗಿದೆ ಎಂದರು. ಗಂಗಾಧರ್‌, ಮೋಹನ್‌, ಆನಂದ್‌, ಹೇಮಂತ್‌, ದೊಡ್ಡಿಗೋಪಿ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.