![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪ್ಯಾಕೇಜ್ಗಾಗಿ ಖಾಸಗಿ ಶಾಲಾ ಶಿಕ್ಷಕರ ಪ್ರತಿಭಟನೆ
Team Udayavani, Sep 20, 2020, 3:12 PM IST
![ಪ್ಯಾಕೇಜ್ಗಾಗಿ ಖಾಸಗಿ ಶಾಲಾ ಶಿಕ್ಷಕರ ಪ್ರತಿಭಟನೆ](https://www.udayavani.com/wp-content/uploads/2020/09/rn-tdy-3-2-620x372.jpg)
ಸಾಂದರ್ಭಿಕ ಚಿತ್ರ
ರಾಮನಗರ: ಕೋವಿಡ್ 19 ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಣೆ ಸೇರಿದಂತೆ ಇತರೆ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಆಗ್ರಹಿಸಿದರು.
ನಗರದ ಜಿಲ್ಲಾ ಕಚೇರಿಯ ಸಂಕಿರ್ಣದ ಮುಂಭಾಗ ಪ್ರತಿಭಟನೆ ಕೈಗೊಂಡ ಪದಾಧಿಕಾರಿಗಳು, ಖಾಸಗಿ ಕಾಲೇಜುಗಳಲ್ಲಿ ಕಾಲ್ಪನಿಕ ವೇತನ ಬಡ್ತಿ ನೀಡುವ ನಿಟ್ಟಿನಲ್ಲಿ ಬಸವರಾಜ ಹೊರಟ್ಟಿ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಬೇಡಿಕೆ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಒಕ್ಕೂಟದ ರಾಜ್ಯ ಮಹಾ ಪೋಷಕ ಜಾಲಮಂಗಲ ನಾಗರಾಜ್, 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಲ್ಲಿ ದುಡಿಯುತ್ತಿರುವ ಶಿಕ್ಷಕರು, ಶಿಕ್ಷಕೇತರರಿಗೆ ಯಾವುದೇ ಭರವಸೆ ಇಲ್ಲದಂತಾಗಿದೆ. ಕೂಡಲೆ ಅನುದಾನ ನೀಡಬೇಕು ಎಂದರು.
ರಾಜ್ಯ ಸರ್ಕಾರ ನಮ್ಮ ಮನವಿ ಆಲಿಸದೆ, ಇದೇ ರೀತಿಯಲ್ಲಿ ನಿದ್ರಾವಸ್ಥೆಯಲ್ಲಿ ಮುಂದುವರಿದರೆ, ಮುಂದಿನ ದಿನಗಳಲ್ಲಿ ರಾಜಧಾನಿಯಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು, ಆಗಲೂ ಸರ್ಕಾರ ಸ್ಪಂದಿಸದಿದ್ದರೆ ಆತ್ಮಹತ್ಯೆ ಒಂದೇ ಉಳಿದಿರುವ ದಾರಿ ಎಂದರು.
ಸಂಘಟನೆಯ ಜಿಲ್ಲಾಧ್ಯಕ್ಷ ಜವರೇಗೌಡ ಮಾತನಾಡಿ, ಸರ್ಕಾರದ ನಿರ್ಲಕ್ಷ್ಯ ಧೋರಣೆ ಮತ್ತು ಕೋವಿಡ್ ಸಂಕಷ್ಟದ ನಡುವೆ 1995ರನಂತರಪ್ರಾರಂಭವಾದ ಕನ್ನಡ ಮಾಧ್ಯಮ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಸಿಬ್ಬಂದಿ ಅರೆ ಹೊಟ್ಟೆಯಲ್ಲಿ ಜೀವನ ಸಾಗಿಸುತ್ತಿದ್ದೇವೆ. ನಮಗೆ ಬೇರೆ ಯಾವುದೇ ಆದಾಯದ ಮೂಲವಾಗಲಿ, ಕಸುಬುಗಳಾಗಲಿ ಗೊತ್ತಿರದ ಕಾರಣ, ಶಿಕ್ಷಣ ಸಂಸ್ಥೆಗಳನ್ನೇ ನಂಬಿ ಬದುಕುತ್ತಿದ್ದೇವೆ. ನಮ್ಮೆಲ್ಲರ ಬದುಕು ಬೀಳುವ ಮುನ್ನ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಮನವಿಯನ್ನು ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ಬಿ.ಎಸ್.ವೆಂಕಟಾ ಚಲಪತಿ ಸ್ವೀಕರಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುತ್ತುಸ್ವಾಮಿ, ಸಂಘಟನಾ ಕಾರ್ಯದರ್ಶಿ ಶಿವಮಾದು, ಖಜಾಂಚಿ ಬಿ.ಕುಳ್ಳೇ ಗೌಡ, ರಾಮನಗರ ತಾಲೂಕು ಅಧ್ಯಕ್ಷ ರವಿಗೌಡ, ಪದಾಧಿಕಾರಿಗಳಾದ ಸ್ವಾಮಿ ಗೌಡ, ಸಾವಿತ್ರಮ್ಮ, ಭಾರತಿ, ವರಲಕ್ಷಿ ¾à, ಕೀರ್ತಿರಾಜ್, ಸಿದ್ದರಾಜು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Magadi; Mother-son passed away due to gas leak from geyser](https://www.udayavani.com/wp-content/uploads/2024/07/magadu-150x83.jpg)
Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ
![Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ](https://www.udayavani.com/wp-content/uploads/2024/07/karad-150x83.jpg)
Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
![Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ](https://www.udayavani.com/wp-content/uploads/2024/07/loka-150x84.jpg)
Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
![1-train](https://www.udayavani.com/wp-content/uploads/2024/07/1-train-150x96.jpg)
Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-3-150x90.jpg)
Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.