ಅವ್ಯವಸ್ಥೆಯ ಆಗರವಾದ ಗ್ರಂಥಾಲಯ


Team Udayavani, Dec 13, 2022, 12:30 PM IST

ಅವ್ಯವಸ್ಥೆಯ ಆಗರವಾದ ಗ್ರಂಥಾಲಯ

ರಾಮನಗರ: ಸೋರುತಿಹುದು ಮನೆಯ ಮಾಳಿಗೆ ಎಂಬ ಮಾತು ಇಲ್ಲಿನ ಜ್ಞಾನ ದೇಗುಲವಾದ ಗ್ರಂಥಾಲಯದಲ್ಲಿನ ವಸ್ತುಸ್ಥಿತಿಯಾಗಿದೆ. ಚಾವಣಿ ಸೋರುವ ಮೂಲಕ ಜ್ಞಾನಾರ್ಜನೆಗಾಗಿ ಬರುವ ಓದುಗದಾಹಿಗಳಿಗೆ ತೀವ್ರ ತೊಂದರೆಯಾಗಿದ್ದಲ್ಲದೆ, ಪುಸ್ತಕ ಬಂಡಾರಕ್ಕೂ ಸಂಕಷ್ಟ ಬಂದೊದಗಿದೆ.

ರಾಮನಗರ ಜಿಲ್ಲಾ ಕೇಂದ್ರವಾಗಿ 15 ವರ್ಷಗಳೇ ಕಳೆದರೂ ಒಂದು ಸುಸಜ್ಜಿತವಾದ ಗ್ರಂಥಾಲಯ ಇಲ್ಲವೆಂಬ ಕೊರಗು ಓದುಗರನ್ನು ಕಾಡುತ್ತಿದೆ. ಈ ಜಿಲ್ಲಾ ಕೇಂದ್ರದಲ್ಲಿ ಇರುವ ಒಂದೇ ಇಂದು ಲೈಬ್ರರಿ ಅದು ಸೋರುತ್ತಿದೆ. ಅಲ್ಲದೆ, ಮೂರು ಕೊಠಡಿಗಳಷ್ಟೇ ಇದ್ದು, ಇದರಿಂದ ಒದುಗರಿಗೆ ತುಂಬಾ ತೊಂದರೆಯಾಗಿದೆ. ಆದರೂ, ಓದುವ ಹಂಬಲದಿಂದ ಬರುವ ಓದುಗರು ಇಕ್ಕಟ್ಟಿನಲ್ಲಿ ಒತ್ತರಿಸಿಕೊಂಡು ಕುಳಿತು ಓದಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಘಟಾನುಘಟಿಗಳಿದ್ದರೂ ಪ್ರಯೋಜನವಿಲ್ಲ: ಇದು ನಗರದ ಪ್ರವಾಸಿ ಮಂದಿರದ ಎದುರು ಇರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಹೆಸರಿಗಷ್ಟೇ ಇದೆ. ಇಲ್ಲಿ ಅವ್ಯವಸ್ಥೆಗಳು ಕಾಲುಮುರಿದು ಕುಳಿತಿವೆ ಎಂದರೂ ತಪ್ಪಲ್ಲ, ಒಂದೆಡೆ ನಮ್ಮನ್ನಾಳುವವರ ನಿರ್ಲಕ್ಷ್ಯ ಕೂಡ ಇದಕ್ಕೆ ಪೂರಕ ಎಂದರೂ ತಪ್ಪಲ್ಲ. ರಾಜಕಾರಣದಲ್ಲಿ ಹೆಚ್ಚು ಹೆಸರು ಮಾಡಿರುವ ಘಟಾನುಘಟಿಗಳೇ ಜಿಲ್ಲೆಯಲ್ಲಿದ್ದರೂ, ಒಂದು ಸುಸಜ್ಜಿತವಾದ ಗ್ರಂಥಾಲ ಯ ಇಲ್ಲದೆ ಇರುವುದು ಯುವ ಜನಾಂಗದಿಂದ ಹಿಡಿದು ಅಕ್ಷರದಾಹಿಗಳ ಮೇಲೆ ಅವರಿಗಿರುವ ಕಾಳಜಿಯನ್ನು ತೊರುತ್ತದೆ.

ಇಚ್ಛಾಶಕ್ತಿ ಪ್ರದರ್ಶಿಸಬೇಕು: ಕೇವಲ ಭೂಮಿಪೂಜೆ, ಶಂಕುಸ್ಥಾಪನೆ, ಟೇಪ್‌ ಕತ್ತರಿಸಲು ಜಿದ್ದಾಜಿದ್ದಿಗೆ ಬೀಳುವ ರಾಜಕಾರಣಿಗಳು, ಇಂತಹ ಅತ್ಯಮೂಲ್ಯ ವಾದ ಕಾರ್ಯಕ್ಕೆ ಮುಂದಾಗಬೇಕು. ಚುನಾಯಿತ ಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕು. ಹಾಗೆಯೇ ವಿರೋಧ ಪಕ್ಷದವರು ಕೂಡ ಗಮನ ಸೆಳೆಯುವ ಕೆಲಸ ಮಾಡಬೇಕಾಗಿತ್ತು. ಆದರೆ, ಇಲ್ಲಿ ಅದ್ಯಾವುದೂ ಆಗದೆ, ಕೇವಲ ಮತಬ್ಯಾಂಕ್‌, ಮತಗಳಿಕೆಯ ಪ್ರಚಾ ರಕ್ಕೆ ನಿಂತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಶಿವ ನಾಗಸ್ವಾಮಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಪರ್ಯಾಸವೇ ಸರಿ: ಜಿಲ್ಲೆಯಲ್ಲಿನ ಅನೇಕ ಗ್ರಾಮಗ ಳಲ್ಲಿನ ಗ್ರಂಥಾಲಯಗಳೆಲ್ಲ ಈಗ ಡಿಜಿಟಲ್‌ ಲೈಬ್ರರಿಗ ಳಾಗಿ ಬದಲಾಗಿ ವರ್ಷಗಳೇ ಕಳೆದಿವೆ. ಆದರೆ, ಜಿಲ್ಲಾ ಕೇಂದ್ರವಾಗಿ 15 ವರ್ಷ ಕಳೆದರೂ ಜಿಲ್ಲಾ ಗ್ರಂಥಾಲ ಯಕ್ಕೊಂದು ಸುಸಜ್ಜಿತ ಕಟ್ಟಡವೇ ಇಲ್ಲದತಾಗಿರುವುದು ವಿಪರ್ಯಾಸವೇ ಸರಿ ಎಂಬಂತಾಗಿದೆ.

ಭೂಮಿಪೂಜೆ ನಡೆದಿಲ್ಲ: ಜಿಲ್ಲಾ ಗ್ರಂಥಾಲಯ ಅಧಿಕಾರಿಗಳು ಹೇಳುವ ಪ್ರಕಾರ ಸರ್ಕಾರ ಅನುಮೋದನೆ ನೀಡಿ ವರ್ಷಗಳೇ ಕಳೆದು ಹೋಗಿದೆ. ಆದರೂ, ಇನ್ನೂ ಹೊಸ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನಡೆದಿಲ್ಲ. ಆ ಕಾರ್ಯಕ್ಕೂ ಚುನಾವಣೆ ಸಮೀಪಿಸಬೇಕೋ ಏನೋ ಎಂಬ ಗುಸುಗುಸು ಆರಂಭವಾಗಿದೆ.

ಉಪಯೋಗ ಇಲ್ಲ: ಪ್ರತಿನಿತ್ಯ ಗ್ರಂಥಾಲಯಕ್ಕೆ 200ರಿಂದ 300 ಓದುಗರು ಬರುತ್ತಾರೆ. ಅವರೆಲ್ಲ ರಿಗೂ ಕುಳಿತುಕೊಳ್ಳಲೂ ಜಾಗ ಇಲ್ಲದ ಸ್ಥಿತಿ ಇದೆ. ಗ್ರಂಥಾಲಯದ ಕಾಂಪೌಂಡ್‌ನ‌ಲ್ಲಿ ಕುಳಿತು ಪತ್ರಿಕೆ ಓದಲೆಂದು ತಾತ್ಕಾಲಿಕ ಶೆಲ್ಟರ್‌ ನಿರ್ಮಾಣ ಮಾಡಿದ್ದಾರೆ. ಅದೂ ಅವೈಜ್ಞಾನಿಕವಾಗಿದ್ದು, ಕಾಮಗಾರಿ ಸರಿಯಿಲ್ಲದ ಕಾರಣ ಉಪಯೋಗ ಇಲ್ಲದಂತಾಗಿದೆ.

ಪುಸ್ತಕ ಇಡಲು ಜಾಗ ಇಲ್ಲ: ಚಾವಣಿಯೇ ಸೋರುತ್ತಿರುವ ಕಾರಣ, ಇಲ್ಲಿ ಪುಸ್ತಕಗಳಿಗೂ ರಕ್ಷಣೆ ಇಲ್ಲ ಎನ್ನುವಂತಾಗಿದೆ. ಈಗಾಗಲೇ 45 ಸಾವಿರಕ್ಕೂ ಹೆಚ್ಚಿನ ಹೊತ್ತಿಗೆಗಳ ಸಂಗ್ರಹ ಇದ್ದು, ಹೊಸ ಪುಸ್ತಕಗಳನ್ನು ಇಡಲು ಜಾಗವೇ ಇಲ್ಲದಂತೆ ಆಗಿದೆ.

ಹೊಸ ಕಟ್ಟಡ ನಿರ್ಮಾಣಕ್ಕೆ ಪತ್ರ ವ್ಯವಹಾರ: ಜಿಲ್ಲಾ ಗ್ರಂಥಾಲಯಕ್ಕೆ ಹೊಸ ಕಟ್ಟಡ ನಿರ್ಮಾಣಕ್ಕೆ ಡಿಪಿಆರ್‌ ಸಲ್ಲಿಕೆಯಾಗಿ ಮೂರು ವರ್ಷಗಳೇ ಕಳೆದಿವೆ. ಸದ್ಯ ಹಳೇ ಗ್ರಂಥಾಲಯವು 60ಘಿ90 ಚ.ಅಡಿ ವಿಸ್ತೀರ್ಣದಲ್ಲಿದ್ದು, ಈ ಕಟ್ಟಡ ಕೆಡವಿ ಅಲ್ಲಿಯೇ ಹೊಸ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ.

ಪ್ರಸ್ತಾವ ಕೂಡ ಸಲ್ಲಿಕೆ: 2018ರ ಜು.23ರಂದು ಅಂದಿನ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಸಭೆ ನಡೆಸಿ, ಹೊಸ ಜಿಲ್ಲಾ ಗ್ರಂಥಾಲಯ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದ್ದರು. ಅದರಂತೆ 9.94 ಕೋಟಿ ರೂ.ನಲ್ಲಿ ಹೊಸ ಗ್ರಂಥಾಲಯ ನಿರ್ಮಾಣಕ್ಕೆ ಪ್ರಸ್ತಾವ ಕೂಡ ಸಲ್ಲಿಕೆಯಾಗಿತ್ತು. 2019ರ ಜೂ.6ರಂದು ಆರ್ಥಿಕ ಇಲಾಖೆಯು ಇದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಮೊದಲ ಹಂತದಲ್ಲಿ 4.95 ಕೋಟಿ ರೂ.ನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸೂಚಿಸಿತ್ತು.

ಆದರೆ, ನಂತರದಲ್ಲಿ ಸರ್ಕಾರ ಕೇವಲ 1.24 ಕೋಟಿ ರೂ. ಮಾತ್ರ ಹಂಚಿಕೆ ಮಾಡಿತ್ತು. ಇದರಿಂದಾಗಿ ಕಾಮಗಾರಿ ಆರಂಭಗೊಳ್ಳಲು ಆಗಿಲ್ಲ. ಇದು ಹರ ಕೊಲ್ಲಲ್‌ ಪರ ಕಾಯÌನೇ ಎನ್ನುವಂತಾಗಿದ್ದು ನಮ್ಮನ್ನಾಳುವ ಅಧಿಕಾರ ಶಾಹಿ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಇಚ್ಛಾಶಕ್ತಿ ಇಲ್ಲವಾದ್ರೆ ಯೋಜನೆಗಳು ಹಳ್ಳ ಹಿಡಿಯುತ್ತವೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ.

ಅವ್ಯವಸ್ಥೆಗಳ ಆಗರ ಅಂದ್ರೆ ನಮ್ಮ ಗ್ರಂಥಾಲಯ. ಇತ್ತೀಚೆಗಷ್ಟೇ ಶೌಚಾಲಯ ನಿರ್ಮಿಸಲಾಗಿದೆ. ಆದರೆ, ಶೌಚಕ್ಕೆ ಇರಲಿ, ಇಲ್ಲಿ ಕುಡಿಯುವ ನೀರಿಗೂ ತತ್ವಾರ ಇದೆ. ಹಳೇ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದೆ. ಮಳೆ ಬಂದರೆ ಸೋರುತ್ತದೆ. ವಿದ್ಯುತ್‌ ಶಾಕ್‌ ಕೂಡ ಹೊಡೆಯುತ್ತದೆ. ಇಲ್ಲಿ ಜೀವಭಯದಲ್ಲೇ ಪುಸ್ತಕ ಓದಬೇಕಾದ ಸ್ಥಿತಿ ನಿರ್ಮಾಣವಾಗಿದೆ.ಶಿವಕುಮಾರ, ಓದುಗ.

 

ಎಂ.ಎಚ್‌.ಪ್ರಕಾಶ್‌

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.